AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಗೃಹಿಣಿ ಮಗನ ಕೈಗೆ ಮೊಬೈಲ್, ಚಿನ್ನಾಭರಣ ಕೊಟ್ಟು ಸೆಲ್ಫಿ ವೀಡಿಯೊ ಮಾಡ್ತಾ ಟಿಪ್ಪು ಡ್ರಾಪ್​​​ಗೆ ಧುಮುಕ ಬೇಕಿತ್ತು ಅಷ್ಟರಲ್ಲಿ…

ನಂದಿಗಿರಿಧಾಮದ ಟಿಪ್ಪು ಡ್ರಾಪ್ ಹಾಗೂ ಅಕ್ಕಪಕ್ಕದಲ್ಲಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬಾರದು, ಮೇಲಿಂದ ಜಿಗಿಯಬಾರದು ಅಂತ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಹತ್ತು ಅಡಿ ಎತ್ತರದ ತಡೆಗೋಡೆ ಹಾಕಿಸಿದೆ. ಆದ್ರೂ ಇತ್ತೀಚೆಗೆ ಕೆಲವರು ಆತ್ಮಹತ್ಯೆ ಮಾಡಿಕೊಳ್ಳಲು ಇಲ್ಲಿಗೆ ಆಗಮಿಸುತ್ತಾರೆ. ಒಂದಷ್ಟು ಮಂದಿಯನ್ನು ಸ್ಥಳೀಯರು ಮತ್ತು ಪೊಲೀಸರು ಬಚಾವು ಮಾಡುತ್ತಾರೆ.

ಬೆಂಗಳೂರಿನ ಗೃಹಿಣಿ ಮಗನ ಕೈಗೆ ಮೊಬೈಲ್, ಚಿನ್ನಾಭರಣ ಕೊಟ್ಟು ಸೆಲ್ಫಿ ವೀಡಿಯೊ ಮಾಡ್ತಾ ಟಿಪ್ಪು ಡ್ರಾಪ್​​​ಗೆ ಧುಮುಕ ಬೇಕಿತ್ತು ಅಷ್ಟರಲ್ಲಿ...
ಬೆಂಗಳೂರಿನ ಗೃಹಿಣಿ ಮಗನ ಕೈಗೆ ಮೊಬೈಲ್, ಚಿನ್ನಾಭರಣ ಕೊಟ್ಟು ಸೆಲ್ಫಿ ವೀಡಿಯೊ ಮಾಡ್ತಾ ಟಿಪ್ಪು ಡ್ರಾಪ್​​​ಗೆ ಧುಮುಖ ಬೇಕಿತ್ತು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Feb 01, 2024 | 10:08 AM

Share

ಅದು ರಾಜಧಾನಿ ಬೆಂಗಳೂರಿನ ಪಕ್ಕದಲ್ಲೆ ಇರುವ ಪ್ರಕೃತಿ ಸೊಬಗಿನ ಸುಂದರ ತಾಣ, ಆ ತಾಣದಲ್ಲೊಂದು ಸೂಸೈಡ್ ಸ್ಪಾಟ್ ಇದೆ. ಅಲ್ಲಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬಾರದು ಅಂತ ಸರ್ಕಾರ ಹತ್ತು ಅಡಿ ಎತ್ತರದ ಗೋಡೆ ನಿರ್ಮಿಸಿದೆ. ಆದ್ರೂ ಬೆಂಗಳೂರಿನ ಮಹಿಳೆಯೊಬ್ಬರು ತಮ್ಮ ಮಗನ ಜೊತೆ ಅಲ್ಲಿಗೆ ಹೋಗಿ ಮಗನ ಕೈಲ್ಲಿ ಮೊಬೈಲ್, ಚಿನ್ನಾಭರಣಗಳನ್ನು ನೀಡಿ ಸೆಲ್ಫಿ ವೀಡಿಯೊವನ್ನು ಮಾಡಿ ಇನ್ನೇನು ನಾಲ್ಕು ಸಾವಿರ ಅಡಿಗಳಿಂದ ಧುಮುಕ ಬೇಕಿತ್ತು… ಅಷ್ಟರಲ್ಲಿ ಆಗಿದ್ದೇ ಬೇರೆ. ಅಷ್ಟಕ್ಕೂ ಅಲ್ಲಿ ಆಗಿದ್ದಾದ್ರೂ ಏನ್ ಅಂತೀರಾ ಈ ವರದಿ ನೋಡಿ!!

ನನ್ನ ಗಂಡ, ಅತ್ತೆ, ಅವರ ಸಂಬಂಧಿಕರು ಸೇರಿ ನನಗೆ ಮಾನಸಿಕ ಕಿರುಕುಳ ನೀಡಿದ್ದಾರೆ. ನನ್ನ ಸಾವಿಗೆ ನನ್ನ ಗಂಡ ನವೀನ್ ಕಾರಣ ಅಂತ ಸೆಲ್ಫಿ ವೀಡಿಯೊ ಮಾಡಿ… ಮಗನ ಕಣ್ಮುಂದೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ಈ ಮಹಿಳೆಯ ಹೆಸರು ಕಾವ್ಯಾ, ಬೆಂಗಳೂರಿನ ಕೆ.ಆರ್. ಪುರಂ ಮೂಲದ ಗೃಹಿಣಿ.

ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ತನ್ನ ಮಗನ ಜೊತೆ ಆಗಮಿಸಿ ಮೈಮೇಲಿದ್ದ ಚಿನ್ನಾಭರಣಗಳು ಮೊಬೈಲ್ ಪರ್ಸ್ ನ್ನು ಮಗನ ಕೈಯಲ್ಲಿ ಕೊಟ್ಟು ಇನ್ನೇನು ನಂದಿಗಿರಿಧಾಮದ ಟಿಪ್ಪು ಡ್ರಾಪ್ ನಿಂದ ಕೆಳಗೆ ಜಿಗಿಯಬೇಕಿತ್ತು ಅಷ್ಟರಲ್ಲಿ ಆಕೆಯ ಮಗ ಜೋರಾಗಿ ಕಿರುಚಿಕೊಂಡಿದ್ದಾನೆ. ಆಗ ಅಲ್ಲೆ ಇದ್ದ ಪ್ರವಾಸಿ ಮಿತ್ರ ಸಿಬ್ಬಂದಿ ನಳಿನಿ ಅನ್ನೊ ಮಹಿಳೆ ತಕ್ಷಣ ಸಾರ್ವಜನಿಕರ ಸಹಾಯದಿಂದ ಕಾವ್ಯಾರನ್ನು ರಕ್ಷಿಸಿ ಮನವೊಲಿಸಿದ್ದಾರೆ.

ನಂದಿಗಿರಿಧಾಮದ ಟಿಪ್ಪು ಡ್ರಾಪ್ ಹಾಗೂ ಅಕ್ಕಪಕ್ಕದಲ್ಲಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬಾರದು, ಮೇಲಿಂದ ಜಿಗಿಯಬಾರದು ಅಂತ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಹತ್ತು ಅಡಿ ಎತ್ತರದ ತಡೆಗೋಡೆ ಹಾಕಿಸಿದೆ. ಆದ್ರೂ ಇತ್ತೀಚೆಗೆ ಕೆಲವರು ಆತ್ಮಹತ್ಯೆ ಮಾಡಿಕೊಳ್ಳಲು ಇಲ್ಲಿಗೆ ಆಗಮಿಸಿ, ಕೊನೆಗೆ ಪೊಲೀಸರಿಂದ ರಕ್ಷಣೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹೋಟೆಲ್​ನಲ್ಲಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯ ಬಂಧನ

ಒಟ್ನಲ್ಲಿ ಸುಂದರ ಪ್ರಕೃತಿ, ತುಂತುರು ಮಳೆ, ಮಂಜು ಕವಿದ ಆಹ್ಲಾದಕರ ವಾತಾವರಣ ಸವಿಯೋಣ ಅಂತ ಕೆಲವರು ಗಿರಿಧಾಮಕ್ಕೆ ಆಗಮಿಸಿದ್ರೆ… ಇನ್ನೂ ಕೆಲವರು ಆತ್ಮಹತ್ಯೆಗೆ ಅಂತ ಗಿರಿಧಾಮಕ್ಕೆ ಆಗಮಿಸುತ್ತಿರುವುದು ದುರಾದೃಷ್ಟಕರ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ