AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

87 ಕೀ.ಮೀ. ಸೈಕಲ್ ಜಾಥ ನಡೆಸಿ ಹುತಾತ್ಮರಿಗೆ ನಮನ ಸಲ್ಲಿಸಿದ ಬಿಜೆಪಿ ಶಾಸಕ ಸುರೇಶಕುಮಾರ್

ಮಾಜಿ ಸಚಿವರಾದ ಸುರೇಶಕುಮಾರ್ ಸೈಕಲ್ ಜಾಥ ಮಾಡುವುದು ಸರ್ವೆ ಸಾಮಾನ್ಯ. ಆದ್ರೆ ಇಂದು ಕೆಲವೇ ಗಂಟೆಗಳಲ್ಲಿ 87ಕೀ.ಮೀ. ಸೈಕಲ್ ಜಾಥ ನಡೆಸಿದ್ದಾರೆ.

87 ಕೀ.ಮೀ. ಸೈಕಲ್ ಜಾಥ ನಡೆಸಿ ಹುತಾತ್ಮರಿಗೆ ನಮನ ಸಲ್ಲಿಸಿದ ಬಿಜೆಪಿ ಶಾಸಕ ಸುರೇಶಕುಮಾರ್
87 ಕೀ.ಮೀ. ಸೈಕಲ್ ಜಾಥ ನಡೆಸಿ ಹುತಾತ್ಮರಿಗೆ ನಮನ ಸಲ್ಲಿಸಿದ ಬಿಜೆಪಿ ಶಾಸಕ ಸುರೇಶಕುಮಾರ್
TV9 Web
| Edited By: |

Updated on:Aug 09, 2022 | 8:04 PM

Share

ಚಿಕ್ಕಬಳ್ಳಾಪುರ: ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವರಾದ ಸುರೇಶಕುಮಾರ್(S Suresh Kumar) ಸೈಕಲ್ ಜಾಥ ಮಾಡುವುದು ಸರ್ವೆ ಸಾಮಾನ್ಯ. ಆದ್ರೆ ಇಂದು ಕೆಲವೇ ಗಂಟೆಗಳಲ್ಲಿ 87ಕೀ.ಮೀ. ಸೈಕಲ್ ಜಾಥ(Cycle Jatha) ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಸ್ವಾತಂತ್ರ್ಯ ಸೇನಾನಿಗಳ ಹುತಾತ್ಮ ಸ್ಥಳ ವಿಧುರಾಶ್ವತ್ಥದ ವೀರಸೌಧಕ್ಕೆ ಭೇಟಿ ನೀಡಿ, ಸ್ವತಃ ಬಿಜೆಪಿ ಕಾರ್ಯಕರ್ತರೆ ಆಶ್ಚರ್ಯಗೊಳ್ಳುವಂತೆ ಮಾಡಿದ್ರು.

ಇನ್ನೂ ಸುರೇಶಕುಮಾರ್ ಬೆಳಿಗ್ಗೆ 6 ಗಂಟೆಗೆ ಮನೆ ಬಿಟ್ಟು ಸೈಕಲ್ ನಲ್ಲೇ ಹೆಬ್ಬಾಳ, ಯಲಹಂಕ, ದೊಡ್ಡಬಳ್ಳಾಪುರದ ಮಾರ್ಗವಾಗಿ ಗೌರಿಬಿದನೂರು ನಗರಕ್ಕೆ ಆಗಮಿಸಿ, ನಂತರ ವಿಧುರಾಶ್ವತ್ಥಕ್ಕೆ ಭೇಟಿ ನೀಡಿದ್ರು. ಜನ ಸಾಮಾನ್ಯರಂತಿದ್ದ ಸುರೇಶಕುಮಾರ್ ಗೆ ಅಲ್ಲಲ್ಲಿ ದಾರಿ ಮದ್ಯೆ ಬಿಜೆಪಿ ಮುಖಂಡರು ಕಾರ್ಯಕರ್ತರು ಸಂತೋಷದಿಂದ ಬರಮಾಡಿಕೊಂಡು ಸನ್ಮಾನ ಮಾಡಿ ಎಳನೀರು ತಿಂಡಿ ನೀಡಿ ಗೌರವಿಸಿದ್ರು. ಇನ್ನು ಮಧ್ಯಾಹ್ನ ಒಂದು ಗಂಟೆಗೆ ವಿಧುರಾಶ್ವತ್ಥಕ್ಕೆ ಭೇಟಿ ನೀಡಿದ ಸುರೇಶಕುಮಾರ್, ಮೊದಲು ಕ್ಷೇತ್ರದ ವಿಧುರಾಶ್ವತ್ಥ ನಾರಾಯಣಸ್ವಾಮಿ ದೇವರ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ ನಂತರ ಧ್ವಜ ಸತ್ಯಾಗ್ರಹ ಸಂದರ್ಭದಲ್ಲಿ ನಡೆದ ಗೋಲಿಬಾರ್ ನಲ್ಲಿ ಹುತಾತ್ಮರಾದವರ ವೀರಗಲ್ಲು ವೀರಸೌಧಕ್ಕೆ ನಮಿಸಿ, ಕೆಲಕಾಲ ವೀರಸೌಧದ ಬಳಿಯೇ ವಿಶ್ರಾಂತಿ ಪಡೆದು ನಂತರ ವೀರಸೌಧದ ಗ್ಯಾಲರಿಯಲ್ಲಿ ಇರುವ ಸ್ವಾತಂತ್ರ್ಯ ಸಂಗ್ರಾಮದ ಫೋಟೋ ಗ್ಯಾಲರಿ ವಿಕ್ಷಣೆ ಮಾಡಿದ್ರು. ಆದ್ರೆ ಸುರೇಶಕುಮಾರ್ ರವರ ಸೈಕಲ್ ಜಾಥ ನೋಡಿ ಸ್ವತಃ ಬಿಜೆಪಿ ಮುಖಂಡರುಗಳು ಆಶ್ಚರ್ಯ ವ್ಯಕ್ತಪಡಿಸಿದ್ರು.

suresh kumar

ಬ್ರಿಟೀಷರೆ ಭಾರತ್ ಬಿಟ್ಟು ತೊಲಗಿ ಅಂತ ಅಂದು ಕ್ವೀಟ್ ಇಂಡಿಯಾ ಚಳುವಳಿ ನಡೆಸಿದ ಸ್ಮರಣಾರ್ಥ ಇಂದು ಕ್ವೀಟ್ ಇಂಡಿಯಾ ದಿನ, ಮತ್ತೊಂದೆಡೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಎಲ್ಲಡೆ ತಿರಂಗಯಾತ್ರೆ ನಡೆಯುತ್ತಿದೆ. ಮತ್ತೊಂದೆಡೆ ಮಾಜಿ ಸಚಿವರು ಹಾಗೂ ಶಾಸಕರು ಆಗಿರುವ ಸುರೇಶಕುಮಾರ್ ನಡೆಸಿದ ಸೈಕಲ್ ಜಾಥ, ಯುವಕರನ್ನೆ ನಾಚಿಸುವಂತಿತ್ತು.

ವರದಿ: ಭೀಮಪ್ಪ ಪಾಟೀಲ್, ಟಿವಿ9 ಚಿಕ್ಕಬಳ್ಳಾಪುರ

Published On - 8:04 pm, Tue, 9 August 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?