AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

87 ಕೀ.ಮೀ. ಸೈಕಲ್ ಜಾಥ ನಡೆಸಿ ಹುತಾತ್ಮರಿಗೆ ನಮನ ಸಲ್ಲಿಸಿದ ಬಿಜೆಪಿ ಶಾಸಕ ಸುರೇಶಕುಮಾರ್

ಮಾಜಿ ಸಚಿವರಾದ ಸುರೇಶಕುಮಾರ್ ಸೈಕಲ್ ಜಾಥ ಮಾಡುವುದು ಸರ್ವೆ ಸಾಮಾನ್ಯ. ಆದ್ರೆ ಇಂದು ಕೆಲವೇ ಗಂಟೆಗಳಲ್ಲಿ 87ಕೀ.ಮೀ. ಸೈಕಲ್ ಜಾಥ ನಡೆಸಿದ್ದಾರೆ.

87 ಕೀ.ಮೀ. ಸೈಕಲ್ ಜಾಥ ನಡೆಸಿ ಹುತಾತ್ಮರಿಗೆ ನಮನ ಸಲ್ಲಿಸಿದ ಬಿಜೆಪಿ ಶಾಸಕ ಸುರೇಶಕುಮಾರ್
87 ಕೀ.ಮೀ. ಸೈಕಲ್ ಜಾಥ ನಡೆಸಿ ಹುತಾತ್ಮರಿಗೆ ನಮನ ಸಲ್ಲಿಸಿದ ಬಿಜೆಪಿ ಶಾಸಕ ಸುರೇಶಕುಮಾರ್
TV9 Web
| Edited By: |

Updated on:Aug 09, 2022 | 8:04 PM

Share

ಚಿಕ್ಕಬಳ್ಳಾಪುರ: ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವರಾದ ಸುರೇಶಕುಮಾರ್(S Suresh Kumar) ಸೈಕಲ್ ಜಾಥ ಮಾಡುವುದು ಸರ್ವೆ ಸಾಮಾನ್ಯ. ಆದ್ರೆ ಇಂದು ಕೆಲವೇ ಗಂಟೆಗಳಲ್ಲಿ 87ಕೀ.ಮೀ. ಸೈಕಲ್ ಜಾಥ(Cycle Jatha) ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಸ್ವಾತಂತ್ರ್ಯ ಸೇನಾನಿಗಳ ಹುತಾತ್ಮ ಸ್ಥಳ ವಿಧುರಾಶ್ವತ್ಥದ ವೀರಸೌಧಕ್ಕೆ ಭೇಟಿ ನೀಡಿ, ಸ್ವತಃ ಬಿಜೆಪಿ ಕಾರ್ಯಕರ್ತರೆ ಆಶ್ಚರ್ಯಗೊಳ್ಳುವಂತೆ ಮಾಡಿದ್ರು.

ಇನ್ನೂ ಸುರೇಶಕುಮಾರ್ ಬೆಳಿಗ್ಗೆ 6 ಗಂಟೆಗೆ ಮನೆ ಬಿಟ್ಟು ಸೈಕಲ್ ನಲ್ಲೇ ಹೆಬ್ಬಾಳ, ಯಲಹಂಕ, ದೊಡ್ಡಬಳ್ಳಾಪುರದ ಮಾರ್ಗವಾಗಿ ಗೌರಿಬಿದನೂರು ನಗರಕ್ಕೆ ಆಗಮಿಸಿ, ನಂತರ ವಿಧುರಾಶ್ವತ್ಥಕ್ಕೆ ಭೇಟಿ ನೀಡಿದ್ರು. ಜನ ಸಾಮಾನ್ಯರಂತಿದ್ದ ಸುರೇಶಕುಮಾರ್ ಗೆ ಅಲ್ಲಲ್ಲಿ ದಾರಿ ಮದ್ಯೆ ಬಿಜೆಪಿ ಮುಖಂಡರು ಕಾರ್ಯಕರ್ತರು ಸಂತೋಷದಿಂದ ಬರಮಾಡಿಕೊಂಡು ಸನ್ಮಾನ ಮಾಡಿ ಎಳನೀರು ತಿಂಡಿ ನೀಡಿ ಗೌರವಿಸಿದ್ರು. ಇನ್ನು ಮಧ್ಯಾಹ್ನ ಒಂದು ಗಂಟೆಗೆ ವಿಧುರಾಶ್ವತ್ಥಕ್ಕೆ ಭೇಟಿ ನೀಡಿದ ಸುರೇಶಕುಮಾರ್, ಮೊದಲು ಕ್ಷೇತ್ರದ ವಿಧುರಾಶ್ವತ್ಥ ನಾರಾಯಣಸ್ವಾಮಿ ದೇವರ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ ನಂತರ ಧ್ವಜ ಸತ್ಯಾಗ್ರಹ ಸಂದರ್ಭದಲ್ಲಿ ನಡೆದ ಗೋಲಿಬಾರ್ ನಲ್ಲಿ ಹುತಾತ್ಮರಾದವರ ವೀರಗಲ್ಲು ವೀರಸೌಧಕ್ಕೆ ನಮಿಸಿ, ಕೆಲಕಾಲ ವೀರಸೌಧದ ಬಳಿಯೇ ವಿಶ್ರಾಂತಿ ಪಡೆದು ನಂತರ ವೀರಸೌಧದ ಗ್ಯಾಲರಿಯಲ್ಲಿ ಇರುವ ಸ್ವಾತಂತ್ರ್ಯ ಸಂಗ್ರಾಮದ ಫೋಟೋ ಗ್ಯಾಲರಿ ವಿಕ್ಷಣೆ ಮಾಡಿದ್ರು. ಆದ್ರೆ ಸುರೇಶಕುಮಾರ್ ರವರ ಸೈಕಲ್ ಜಾಥ ನೋಡಿ ಸ್ವತಃ ಬಿಜೆಪಿ ಮುಖಂಡರುಗಳು ಆಶ್ಚರ್ಯ ವ್ಯಕ್ತಪಡಿಸಿದ್ರು.

suresh kumar

ಬ್ರಿಟೀಷರೆ ಭಾರತ್ ಬಿಟ್ಟು ತೊಲಗಿ ಅಂತ ಅಂದು ಕ್ವೀಟ್ ಇಂಡಿಯಾ ಚಳುವಳಿ ನಡೆಸಿದ ಸ್ಮರಣಾರ್ಥ ಇಂದು ಕ್ವೀಟ್ ಇಂಡಿಯಾ ದಿನ, ಮತ್ತೊಂದೆಡೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಎಲ್ಲಡೆ ತಿರಂಗಯಾತ್ರೆ ನಡೆಯುತ್ತಿದೆ. ಮತ್ತೊಂದೆಡೆ ಮಾಜಿ ಸಚಿವರು ಹಾಗೂ ಶಾಸಕರು ಆಗಿರುವ ಸುರೇಶಕುಮಾರ್ ನಡೆಸಿದ ಸೈಕಲ್ ಜಾಥ, ಯುವಕರನ್ನೆ ನಾಚಿಸುವಂತಿತ್ತು.

ವರದಿ: ಭೀಮಪ್ಪ ಪಾಟೀಲ್, ಟಿವಿ9 ಚಿಕ್ಕಬಳ್ಳಾಪುರ

Published On - 8:04 pm, Tue, 9 August 22

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​