AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ಗಳು ಮುಖಾಮುಖಿ: ಈಶಾ ಫೌಂಡೇಷನ್ ಆಶ್ರಮಕ್ಕೆ ತೆರಳುತ್ತಿದ್ದ ಬನಶಂಕರಿಯ ಬಿಎಂಡಬ್ಲ್ಯೂ ಬೈಕ್​ ಸವಾರ ಸಾವು

ಐಷಾರಾಮಿ ಬಿಎಂಡಬ್ಲ್ಯೂ ಬೈಕ್​ ಮತ್ತು ಮತ್ತೊಂದು ಬೈಕ್ ಮುಖಾಮುಖಿಯಾಗಿದ್ದು ಸವಾರನೋರ್ವ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಬೈಕ್​ಗಳು ಮುಖಾಮುಖಿ: ಈಶಾ ಫೌಂಡೇಷನ್ ಆಶ್ರಮಕ್ಕೆ ತೆರಳುತ್ತಿದ್ದ ಬನಶಂಕರಿಯ ಬಿಎಂಡಬ್ಲ್ಯೂ ಬೈಕ್​ ಸವಾರ ಸಾವು
ಬಿಎಂಡಬ್ಲ್ಯೂ ಬೈಕ್
TV9 Web
| Edited By: |

Updated on: Oct 23, 2022 | 2:23 PM

Share

ಚಿಕ್ಕಬಳ್ಳಾಪುರ: ಐಷಾರಾಮಿ ಬಿಎಂಡಬ್ಲ್ಯೂ ಬೈಕ್​ ಮತ್ತು ಮತ್ತೊಂದು ಬೈಕ್ ಮುಖಾಮುಖಿಯಾಗಿದ್ದು ಸವಾರನೋರ್ವ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರದ ಈಶಾ ಫೌಂಡೇಷನ್ ಆಶ್ರಮಕ್ಕೆ ತೆರಳುತ್ತಿದ್ದ ಸದ್ಗುರು ಜಗ್ಗಿ ವಾಸುದೇವನ್ ಭಕ್ತನೋರ್ವ ಬಿಎಂಡಬ್ಲ್ಯೂ ಬೈಕ್​ನಲ್ಲಿ ಬರುತ್ತಿದ್ದರು. ಮತ್ತೊಂದು ಕಡೆಯಿಂದ ಬರುತ್ತಿದ್ದ ಮತ್ತೊಂದು ಬೈಕ್ ಮುಖಾಮುಖಿಯಾಗಿದೆ. ಘಟನೆಯಲ್ಲಿ ಬೆಂಗಳೂರಿನ ಬನಶಂಕರಿ ಬಡಾವಣೆಯ ನಿವಾಸಿ ಅನೂಪ್ ಗುರುರಾಜ್ (31) ಮೃತಪಟ್ಟಿದ್ದಾರೆ.

ಅನೂಪ್ ಇಂದು ಮಧ್ಯಾಹ್ನ ಬೆಂಗಳೂರಿನಿಂದ ರಾಷ್ಟ್ರೀಯ ಹೆದ್ದಾರಿ 44ರ ಬೆಂಗಳೂರು ಹೈದರಾಬಾದ್ ರಸ್ತೆಯ ಮೂಲಕ ಚಿಕ್ಕಬಳ್ಳಾಪುರ ತಾಲೂಕಿನ ಅಲವಗುರ್ಕಿ ಗ್ರಾಮದ ಬಳಿ ಇರುವ ಸದ್ಗುರು ಜಗ್ಗಿ ವಾಸುದೇವ್ ಆಶ್ರಮಕ್ಕೆ ತೆರಳುತ್ತಿದ್ದರು. ಚಿಕ್ಕಬಳ್ಳಾಪುರದ ಬಳಿ ಇರುವ ಅಗಲಗುರ್ಕಿ ಗ್ರಾಮದ ಬಳಿ ಬೈಪಾಸ್ ರಸ್ತೆಯಲ್ಲಿ ಬಿಎಂಡಬ್ಲ್ಯೂ ಕೆ.ಎ 19 , ಬಿ 6666 ನಂಬರ್ ನ ಬೈಕ್ ನಲ್ಲಿ ಸಾಗುತ್ತಿದ್ದಾಗ ಅಗಲಗುರ್ಕಿ ಗ್ರಾಮದ ಬಳಿ ಅಮಾನಿ ಗೋಪಾಲಕೃಷ್ಣ ಕೆರೆ ಬಳಿ ಓನ್ ವೇ ನಲ್ಲಿ ಬಂದ ಹೋಂಡಾ ಬೈಕ್ ಡಿಕ್ಕಿ ಹೊಡೆದಿದೆ. ಸ್ಥಳೀಯ ವ್ಯಕ್ತಿಯೋರ್ವ ಬೈಕನ್ನು ಗಮನಿಸದೆ ಯೂ ಟರ್ನ್ ತೆಗೆದುಕೊಂಡಿದ್ದಾನೆ ಆಗ ಬಿಎಂಡಬ್ಲ್ಯೂ ಬೈಕ್ ಸವಾರ ನಿಯಂತ್ರಣ ತಪ್ಪಿ ಎದುರುಗಡೆ ಇದ್ದ ಬೈಕ್ ಗೆ ಡಿಕ್ಕಿ ಹೊಡೆದು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದ್ದಾನೆ.

ಘಟನೆಯಿಂದ ತಲೆಗೆ ಗಾಯಗಳಾಗಿ ಅನೂಪ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನೂ ಸ್ಥಳೀಯ ಬೈಕ್ ಸವಾರನ ಗುರುತು ಪತ್ತೆಯಾಗಬೇಕಿದ್ದು ತಲೆಗೆ ಗಂಭೀರಗಾಯವಾಗಿದೆ ಇದ್ರಿಂದ ಹೆಚ್ಚಿನ ಚಿಕಿತ್ಸೆಗೆ ಗಾಯಾಳುವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ವರದಿ: ಭೀಮಪ್ಪ ಪಾಟೀಲ, ಟಿವಿ9 ಚಿಕ್ಕಬಳ್ಳಾಪುರ

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?