AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ಗಳು ಮುಖಾಮುಖಿ: ಈಶಾ ಫೌಂಡೇಷನ್ ಆಶ್ರಮಕ್ಕೆ ತೆರಳುತ್ತಿದ್ದ ಬನಶಂಕರಿಯ ಬಿಎಂಡಬ್ಲ್ಯೂ ಬೈಕ್​ ಸವಾರ ಸಾವು

ಐಷಾರಾಮಿ ಬಿಎಂಡಬ್ಲ್ಯೂ ಬೈಕ್​ ಮತ್ತು ಮತ್ತೊಂದು ಬೈಕ್ ಮುಖಾಮುಖಿಯಾಗಿದ್ದು ಸವಾರನೋರ್ವ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಬೈಕ್​ಗಳು ಮುಖಾಮುಖಿ: ಈಶಾ ಫೌಂಡೇಷನ್ ಆಶ್ರಮಕ್ಕೆ ತೆರಳುತ್ತಿದ್ದ ಬನಶಂಕರಿಯ ಬಿಎಂಡಬ್ಲ್ಯೂ ಬೈಕ್​ ಸವಾರ ಸಾವು
ಬಿಎಂಡಬ್ಲ್ಯೂ ಬೈಕ್
TV9 Web
| Edited By: ಆಯೇಷಾ ಬಾನು|

Updated on: Oct 23, 2022 | 2:23 PM

Share

ಚಿಕ್ಕಬಳ್ಳಾಪುರ: ಐಷಾರಾಮಿ ಬಿಎಂಡಬ್ಲ್ಯೂ ಬೈಕ್​ ಮತ್ತು ಮತ್ತೊಂದು ಬೈಕ್ ಮುಖಾಮುಖಿಯಾಗಿದ್ದು ಸವಾರನೋರ್ವ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರದ ಈಶಾ ಫೌಂಡೇಷನ್ ಆಶ್ರಮಕ್ಕೆ ತೆರಳುತ್ತಿದ್ದ ಸದ್ಗುರು ಜಗ್ಗಿ ವಾಸುದೇವನ್ ಭಕ್ತನೋರ್ವ ಬಿಎಂಡಬ್ಲ್ಯೂ ಬೈಕ್​ನಲ್ಲಿ ಬರುತ್ತಿದ್ದರು. ಮತ್ತೊಂದು ಕಡೆಯಿಂದ ಬರುತ್ತಿದ್ದ ಮತ್ತೊಂದು ಬೈಕ್ ಮುಖಾಮುಖಿಯಾಗಿದೆ. ಘಟನೆಯಲ್ಲಿ ಬೆಂಗಳೂರಿನ ಬನಶಂಕರಿ ಬಡಾವಣೆಯ ನಿವಾಸಿ ಅನೂಪ್ ಗುರುರಾಜ್ (31) ಮೃತಪಟ್ಟಿದ್ದಾರೆ.

ಅನೂಪ್ ಇಂದು ಮಧ್ಯಾಹ್ನ ಬೆಂಗಳೂರಿನಿಂದ ರಾಷ್ಟ್ರೀಯ ಹೆದ್ದಾರಿ 44ರ ಬೆಂಗಳೂರು ಹೈದರಾಬಾದ್ ರಸ್ತೆಯ ಮೂಲಕ ಚಿಕ್ಕಬಳ್ಳಾಪುರ ತಾಲೂಕಿನ ಅಲವಗುರ್ಕಿ ಗ್ರಾಮದ ಬಳಿ ಇರುವ ಸದ್ಗುರು ಜಗ್ಗಿ ವಾಸುದೇವ್ ಆಶ್ರಮಕ್ಕೆ ತೆರಳುತ್ತಿದ್ದರು. ಚಿಕ್ಕಬಳ್ಳಾಪುರದ ಬಳಿ ಇರುವ ಅಗಲಗುರ್ಕಿ ಗ್ರಾಮದ ಬಳಿ ಬೈಪಾಸ್ ರಸ್ತೆಯಲ್ಲಿ ಬಿಎಂಡಬ್ಲ್ಯೂ ಕೆ.ಎ 19 , ಬಿ 6666 ನಂಬರ್ ನ ಬೈಕ್ ನಲ್ಲಿ ಸಾಗುತ್ತಿದ್ದಾಗ ಅಗಲಗುರ್ಕಿ ಗ್ರಾಮದ ಬಳಿ ಅಮಾನಿ ಗೋಪಾಲಕೃಷ್ಣ ಕೆರೆ ಬಳಿ ಓನ್ ವೇ ನಲ್ಲಿ ಬಂದ ಹೋಂಡಾ ಬೈಕ್ ಡಿಕ್ಕಿ ಹೊಡೆದಿದೆ. ಸ್ಥಳೀಯ ವ್ಯಕ್ತಿಯೋರ್ವ ಬೈಕನ್ನು ಗಮನಿಸದೆ ಯೂ ಟರ್ನ್ ತೆಗೆದುಕೊಂಡಿದ್ದಾನೆ ಆಗ ಬಿಎಂಡಬ್ಲ್ಯೂ ಬೈಕ್ ಸವಾರ ನಿಯಂತ್ರಣ ತಪ್ಪಿ ಎದುರುಗಡೆ ಇದ್ದ ಬೈಕ್ ಗೆ ಡಿಕ್ಕಿ ಹೊಡೆದು ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದ್ದಾನೆ.

ಘಟನೆಯಿಂದ ತಲೆಗೆ ಗಾಯಗಳಾಗಿ ಅನೂಪ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನೂ ಸ್ಥಳೀಯ ಬೈಕ್ ಸವಾರನ ಗುರುತು ಪತ್ತೆಯಾಗಬೇಕಿದ್ದು ತಲೆಗೆ ಗಂಭೀರಗಾಯವಾಗಿದೆ ಇದ್ರಿಂದ ಹೆಚ್ಚಿನ ಚಿಕಿತ್ಸೆಗೆ ಗಾಯಾಳುವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ವರದಿ: ಭೀಮಪ್ಪ ಪಾಟೀಲ, ಟಿವಿ9 ಚಿಕ್ಕಬಳ್ಳಾಪುರ

Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ