AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲೀಜು ವ್ಯಕ್ತಿಗಳ ಪರ ಸಿಎಂ ಯಡಿಯೂರಪ್ಪ ನಿಂತಿದ್ದಾರೆ – HDK

ಚಿಕ್ಕಬಳ್ಳಾಪುರ: ಗಲೀಜು ವ್ಯಕ್ತಿಗಳ ಪರ ಸಿಎಂ ಬಿಎಸ್​ವೈ ನಿಂತಿದ್ದಾರೆ ಎಂದು ಉಪಚುನಾವಣೆ ಸಮ್ಮುಖದಲ್ಲಿ ನಡೆದ ಜೆಡಿಎಸ್ ಪ್ರಚಾರ ಸಭೆಯಲ್ಲಿ ಹನಿಟ್ರ್ಯಾಪ್ ಪ್ರಕರಣ ಪ್ರಸ್ತಾಪಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಇಂಥ ಕೆಟ್ಟ ಹುಳುಗಳನ್ನು ಸೇರಿಸಿಕೊಂಡು ರಾಜ್ಯ ಅಭಿವೃದ್ಧಿ ಮಾಡ್ತಾರಂತೆ. ಹುಣಸೂರಿನಲ್ಲಿ ಒಬ್ಬ, ಗೋಕಾಕ್ ನಲ್ಲಿ ಒಬ್ಬ.. ಥೂ ಗಲೀಜುಗಳು ಅಂತಾ ಕುಮಾರಸ್ವಾಮಿ ಲೇವಡಿ ಮಾಡಿದರು. ಮೆಡಿಕಲ್ ಕಾಲೇಜು ಸ್ಥಾಪನೆಯಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರಯೋಜನ ಆಗುತ್ತಾ? ಸಿದ್ದರಾಮಯ್ಯ, ಮೆಡಿಕಲ್ ಕಾಲೇಜು ಘೋಷಣೆ ಮಾಡಿದ್ರು. ಆದರೆ ಬಜೆಟ್ […]

ಗಲೀಜು ವ್ಯಕ್ತಿಗಳ ಪರ ಸಿಎಂ ಯಡಿಯೂರಪ್ಪ ನಿಂತಿದ್ದಾರೆ - HDK
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 02, 2019 | 3:55 PM

Share

ಚಿಕ್ಕಬಳ್ಳಾಪುರ: ಗಲೀಜು ವ್ಯಕ್ತಿಗಳ ಪರ ಸಿಎಂ ಬಿಎಸ್​ವೈ ನಿಂತಿದ್ದಾರೆ ಎಂದು ಉಪಚುನಾವಣೆ ಸಮ್ಮುಖದಲ್ಲಿ ನಡೆದ ಜೆಡಿಎಸ್ ಪ್ರಚಾರ ಸಭೆಯಲ್ಲಿ ಹನಿಟ್ರ್ಯಾಪ್ ಪ್ರಕರಣ ಪ್ರಸ್ತಾಪಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಇಂಥ ಕೆಟ್ಟ ಹುಳುಗಳನ್ನು ಸೇರಿಸಿಕೊಂಡು ರಾಜ್ಯ ಅಭಿವೃದ್ಧಿ ಮಾಡ್ತಾರಂತೆ. ಹುಣಸೂರಿನಲ್ಲಿ ಒಬ್ಬ, ಗೋಕಾಕ್ ನಲ್ಲಿ ಒಬ್ಬ.. ಥೂ ಗಲೀಜುಗಳು ಅಂತಾ ಕುಮಾರಸ್ವಾಮಿ ಲೇವಡಿ ಮಾಡಿದರು.

ಮೆಡಿಕಲ್ ಕಾಲೇಜು ಸ್ಥಾಪನೆಯಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರಯೋಜನ ಆಗುತ್ತಾ? ಸಿದ್ದರಾಮಯ್ಯ, ಮೆಡಿಕಲ್ ಕಾಲೇಜು ಘೋಷಣೆ ಮಾಡಿದ್ರು. ಆದರೆ ಬಜೆಟ್ ನಲ್ಲಿ ಹಣ ಇಟ್ಟಿರಲಿಲ್ಲ. ಇದಕ್ಕೆ ನಾನು ಹಣ ಕೊಟ್ಟಿದ್ದೆ. ಯಡಿಯೂರಪ್ಪ ಭರಪೂರ ಹಣ ಕೊಡ್ತಾರೆ ಅಂತಾ ಹೇಳ್ತಾರೆ, ತಗೊಂಡು ಬರ್ಲಿ ನೋಡೋಣ. ಮೆಡಿಕಲ್ ಕಾಲೇಜು ನಿರ್ಮಾಣದಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರಯೋಜನ ಆಗುತ್ತಾ? ನೀಟ್ ನಲ್ಲಿ ಪಾಸ್ ಆದ್ರೆ ಮಾತ್ರ ಸೀಟು ಸಿಗುತ್ತೆ ಎಂದು ಹೇಳಿದರು.

ಸುಧಾಕರ್ ವಿರುದ್ಧ HDK ವಾಗ್ದಾಳಿ: ಸಭೆಯಲ್ಲಿ ಮಾತನಾಡುತ್ತ ಲಿಂಗಾಯತ ಸಮಾಜದವರು ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಿ ಎಂದು ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ ಕೇಳಿದ್ದಾರೆ, ಈ ಮಾತನ್ನೇ ಇಂದು ಸಹ ಮುಂದುವರೆಸಿದ್ದಾರೆ. ಬಿಎಸ್ ವೈ ಈ ರಾಜ್ಯದ ಮುಖ್ಯಮಂತ್ರಿಯೋ ಅಥವಾ 15 ಜನ ಅನರ್ಹರಿಗೆ ಮುಖ್ಯಮಂತ್ರಿಯೋ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಅದೇ ಕಾರಣಕ್ಕೆ ಲಿಂಗಾಯತ ಸಮಾಜ ಒಗ್ಗಟ್ಟಾಗಿ ಅಂತಾ ಹೇಳ್ತಿದ್ದಾರೆ. ನಾನು ಮುಖ್ಯಮಂತ್ರಿಯಾಗಿ ಇರೋದು ಸುಧಾಕರ್ ಗೆ ಇಷ್ಟವಿರಲಿಲ್ಲ, ಸುಧಾಕರ್ ಒಂದು ಕಡೆ ಹೇಳ್ತಾನೆ ನನ್ನ ಸಂಬಂಧಿ ಅಂತ ಮತ್ತೊಂದು ಕಡೆ ಹೇಳ್ತಾನೆ ನಾನು ಮುಖ್ಯಮಂತ್ರಿಯಾಗಿ ಇರಬಾರದು ಅಂತಾ. ಸುಧಾಕರ್ ಮೊದಲು ನನ್ನ ಹಿಡ್ಕೊಂಡಿದ್ದ, ಆಮೇಲೆ ಸಿದ್ದರಾಮಯ್ಯನ್ನ ಹಿಡಿದುಕೊಂಡ.. ಈಗ ಯಡಿಯೂರಪ್ಪನ್ನ ಹಿಡಿದುಕೊಂಡಿದ್ದಾನೆ. ಸುಧಾಕರ್ ನನಗೆ ಮಂತ್ರಿ ಸ್ಥಾನ ಕೊಟ್ಟುಬಿಡಿ, ನಾನು ಜಿಲ್ಲೆಯಲ್ಲಿ ಜೆಡಿಎಸ್ ಬೆಳೆಸುತ್ತೇನೆ ಅಂತಾ ನನ್ನ ಬಳಿ ಬಂದಿದ್ದ. ಜಾತಿ ಹೆಸರಲ್ಲಿ ನಾನು ರಾಜಕಾರಣ ಮಾಡಲ್ಲ, ಬೇರೆ ಸಮಾಜಗಳ ಬೆಂಬಲ ಇಲ್ಲದಿದ್ರೆ ರಾಜಕಾರಣ ಸುಲಭವಲ್ಲ ಎಂದಿದ್ದೆ ಎನ್ನುವ ಮೂಲಕ ಸುಧಾಕರ್ ವಿರುದ್ಧ HDK ಹರಿಹಾಯ್ದರು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?