AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ಎಸ್ಸಿ ಅಗ್ರಿಕಲ್ಚರ್ ಓದುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿನಿ ಕಾಲೇಜು ಹಾಸ್ಟಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ, ಕಾರಣವೇನು?

ಮೃತಳ ತಂದೆ ಶ್ರೀನಾಥ್ ತಮ್ಮ ಮಗಳ ಸಾವಿಗೆ ಆಕೆಯ ಸ್ನೇಹಿತನ ಕಿರುಕುಳವೆ ಕಾರಣವೆಂದು ಚಿಂತಾಮಣಿ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಹಿಂದು ಮುಂದು ಏನು ಗೊತ್ತಿಲ್ಲದೆ... ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದವನಿಂದಾಗಿ ಪ್ರತಿಭಾವಂತ ವಿದ್ಯಾರ್ಥಿನಿ ಉಸಿರು ಚೆಲ್ಲಿದ್ದು ಮಾತ್ರ ದುರಂತ.

ಬಿ.ಎಸ್ಸಿ ಅಗ್ರಿಕಲ್ಚರ್ ಓದುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿನಿ ಕಾಲೇಜು ಹಾಸ್ಟಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ, ಕಾರಣವೇನು?
ಬಿ.ಎಸ್ಸಿ ಅಗ್ರಿಕಲ್ಚರ್ ವಿದ್ಯಾರ್ಥಿನಿ ಹಾಸ್ಟಲ್ ನಲ್ಲೆ ಆತ್ಮಹತ್ಯೆ, ಪ್ರತಿಭಾವಂತೆ ಆತ್ಮಹತ್ಯೆಗೆ ಕಾರಣವಾಯ್ತಾ ಪ್ರಿಯಕರನ ಟಾರ್ಚರ್?
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 08, 2022 | 4:45 PM

ಆ ಬಾಲಕಿ ಎಸ್.ಎಸ್.ಎಲ್.ಸಿ, ಪಿ.ಯು.ಸಿಯಲ್ಲಿ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿನಿ ಅಂತ ಸುದ್ದಿ ಮಾಡಿದ್ದಳು. ಪ್ರತಿಷ್ಠಿತ ಕೃಷಿ ವಿಶ್ವವಿದ್ಯಾಲಯದಲ್ಲಿ ಬಿ.ಎಸ್ಸಿ ಅಗ್ರಿಕಲ್ಚರ್ ಪದವಿಗೆ ದಾಖಲಾಗಿದ್ದ ಬಾಲಕಿ, ಇನ್ನೇನು ಒಂದು ವರ್ಷ ಆಗಿದ್ರೆ… ಕೃಷಿ ಪದವಿಯನ್ನು ಮುಗಿಸುತ್ತಿದ್ದಳು. ಆದ್ರೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಅವನೊಬ್ಬನ ಜೊತೆ ಮೂಡಿದ ಪ್ರೀತಿ ಈಗ ಆಕೆಯ ಬಾಳನ್ನು ಸರ್ವನಾಶ ಮಾಡಿದೆ. ಇದ್ರಿಂದ ನೊಂದ ಆಕೆ ಕಾಲೇಜಿನ ಹಾಸ್ಟಲ್ ನಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆ ವರದಿ ಇಲ್ಲಿದೆ.

ಬಿ. ಎಸ್ಸಿ ಕೃಷಿ ಪದವಿಗೆ ಪ್ರವೇಶ ಸಿಕ್ಕರೆ ಸಾಕು, ಜೀವನ ಸಾರ್ಥಕ ಆಯಿತು ಅನ್ನೊ ಅದೆಷ್ಟೊ ಜನ ವಿದ್ಯಾರ್ಥಿಗಳ ಮಧ್ಯೆ, ಬಿ.ಎಸ್ಸಿ ಕೃಷಿ ಪದವಿ ವಿದ್ಯಾಭ್ಯಾಸ ಮಾಡ್ತಿದ್ದ ಚಿಕ್ಕಬಳ್ಳಾಪುರ ತಾಲೂಕಿನ ಬನ್ನಿಕುಪ್ಪೆ ನಿವಾಸಿ ಪವಿತ್ರಾ ಅನ್ನೊ ವಿದ್ಯಾರ್ಥಿನಿ, ತಾನು ವಿದ್ಯಾಭ್ಯಾಸ ಮಾಡ್ತಿದ್ದ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕುರಬೂರು ಗ್ರಾಮದ ಬಳಿ ಇರುವ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಚಿಂತಾಮಣಿ ಕ್ಯಾಂಪಸ್ ನ ವಸತಿ ನಿಲಯದಲ್ಲೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅದು ಅವನ್ನೊಬ್ಬ ಸ್ನೇಹಿತನಿಂದ… ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಅವನೊಬ್ಬ ಸ್ನೇಹಿತ, ಈಗ ಪವಿತ್ರಾಳ ಜೀವನವನ್ನೆ ಕೊನೆ ಗಾಣಿಸಿದ್ದಾನೆ.

ಇಂದು ಬಿಎಸ್ಸಿ ಕೃಷಿ ಪದವಿಯ ಮೂರನೆ ವರ್ಷದ ಪ್ರಾಯೋಗಿಕ ಪರೀಕ್ಷೆ ಇತ್ತು. ಇದ್ರಿಂದ ಸಹಪಾಠಿಗಳ ಜೊತೆ ನಿನ್ನೆ ರಾತ್ರಿ ಹಾಸ್ಟಲ್ ನಲ್ಲಿ ಪವಿತ್ರಾ ವಿದ್ಯಾಭ್ಯಾಸ ಮಾಡ್ತಿದ್ದಳು. ಆದ್ರೆ ಪದೆ ಪದೆ ಸಂತೋಷ ಅನ್ನೊ ಯುವಕ ಹೈದರಾಬಾದ್ ನಿಂದ ಕರೆ ಮಾಡ್ತಿದ್ದ. ನಿರಂತರವಾಗಿ ಪೋನ್ ರಿಂಗ್ ಆಗ್ತಿತ್ತು. ಇದ್ರಿಂದ ರೋಸಿ ಹೋದ ಪವಿತ್ರಾಳ ಸ್ನೇಹಿತೆಯರು, ಪ್ರತ್ಯೇಕ ರೂಮ್ ನಲ್ಲಿ ಓದಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪವಿತ್ರಾ… ಹಾಸ್ಟಲ್ ನ 19 ನೆ ರೂಮ್ ನಲ್ಲಿ ಒಬ್ಬಳೆ ಓದಲು ಹೋಗಿದ್ದಾಳೆ. ಆಗ ಕೆಲವು ಹೊತ್ತು ತನ್ನ ಸ್ನೇಹಿತ ಸಂತೋಷ ಜೊತೆ ಪೋನ್ ನಲ್ಲಿ ವಿಡಿಯೊ ಕಾಲ್ ನಲ್ಲಿ ಮಾತನಾಡಿದ್ದಾಳೆ. ಪರೀಕ್ಷೆ ಇದೆ ಸಾಕು ಸಾಕು ಅಂದ್ರೂ ಅವನು ಬಿಟ್ಟಿಲ್ಲ. ಇದ್ರಿಂದ ಮನನೊಂದು ಪವಿತ್ರಾ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಲೈನ್ ನಲ್ಲೆ ಇದ್ದ ಆಕೆಯ ಸ್ನೇಹಿತ ತಕ್ಷಣ ಆಕೆಯ ಸ್ನೇಹಿತೆಯರಿಗೆ ಮೇಸೆಜ್ ಮಾಡಿದ್ದು, ಪವಿತ್ರಾ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾಳೆ, ರಕ್ಷಿಸಿ ಅಂತ ತಿಳಿಸಿದ್ದಾನೆ. ಆದ್ರೆ ಅಷ್ಟೊತ್ತಿಗೆ ಪವಿತ್ರಾ ಸಾವಿನ ಮನೆ ಸೇರಿದ್ದಳು. ಇದ್ರಿಂದ ಇದ್ದೊಬ್ಬ ಮಗಳನ್ನು ಕಳೆದುಕೊಂಡು ಆಕೆಯ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ಬಗ್ಗೆ ಚಿಂತಾಮಣಿಯ ಕುರಬೂರು ಕೃಷಿ ಮಹಾವಿದ್ಯಾಲಯದ ಡೀನ್ ಮಾತನಾಡಿದ್ದು ಯಾಕೆ ತಮ್ಮ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಗೊತ್ತಿಲ್ಲ, ಆಕೆಯ ಪೋನ್, ಡೆತ್ ನೋಟ್ ನ್ನು ಚಿಂತಾಮಣಿ ಪೊಲೀಸರು ಜಪ್ತಿ ಮಾಡಿದ್ದು, ತನಿಖೆಯ ನಂತರ ಸತ್ಯ ತಿಳಿಯಬೇಕು ಎಂದು ಪ್ರತಿಕ್ರಿಯಿಸಿದ್ದಾರೆ. ಇತ್ತ ಮೃತಳ ತಂದೆ ಶ್ರೀನಾಥ್ ತಮ್ಮ ಮಗಳ ಸಾವಿಗೆ ಆಕೆಯ ಸ್ನೇಹಿತನ ಕಿರುಕುಳವೆ ಕಾರಣವೆಂದು ಚಿಂತಾಮಣಿ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಹಿಂದು ಮುಂದು ಏನು ಗೊತ್ತಿಲ್ಲದೆ… ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದವನಿಂದಾಗಿ ಪ್ರತಿಭಾವಂತ ವಿದ್ಯಾರ್ಥಿನಿ ಉಸಿರು ಚೆಲ್ಲಿದ್ದು ಮಾತ್ರ ದುರಂತ.

– ಭೀಮಪ್ಪ ಪಾಟೀಲ, ಟಿವಿ 9, ಚಿಕ್ಕಬಳ್ಳಾಪುರ

‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್