AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಸಿನೀಮಿಯ ಕಾರು ಅಪಘಾತ, ಸ್ಥಳದಲ್ಲೇ ಮೂವರ ಸಾವು, ರಾತ್ರಿಯಿಡೀ ಮರದಲ್ಲಿ ನೇತಾಡಿದ ಗಾಯಾಳು ಬೆಳಿಗ್ಗೆ ಸಾವು

ಅವರು ನಾಲ್ಕು ಜನ ಬೆಸ್ಕಾಂ ನಲ್ಲಿ ಸಿಬ್ಬಂದಿಗಳು, ರಾತ್ರಿ ಪಾಳಯದಲ್ಲಿ ಕರ್ತವ್ಯ ನಿರತರಾಗಿದ್ದರು. ವಿದ್ಯುತ್ ರಿಪೇರಿ ಎಂದು ಒಂದು ಊರಿನಿಂದ ಇನ್ನೊಂದು ಉರಿಗೆ ಹೋಗಿ ವಾಪಸ್ ಕಚೇರಿಗೆ ಮರಳುತ್ತಿದ್ದರು. ಆದ್ರೆ, ಅವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿದೆ. ಅದರ ರಭಸಕ್ಕೆ ಕಾರಿನಲ್ಲಿಯೇ ಮೂವರು ಮೃತಪಟ್ಟು ಇನ್ನೊಬ್ಬರಿಗೆ ಗಂಭೀರ ಗಾಯವಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಸಿನೀಮಿಯ ಕಾರು ಅಪಘಾತ, ಸ್ಥಳದಲ್ಲೇ ಮೂವರ ಸಾವು, ರಾತ್ರಿಯಿಡೀ ಮರದಲ್ಲಿ ನೇತಾಡಿದ ಗಾಯಾಳು ಬೆಳಿಗ್ಗೆ ಸಾವು
ಚಿಕ್ಕಬಳ್ಳಾಪುರದಲ್ಲಿ ಸಿನೀಮಿಯ ಕಾರು ಅಪಘಾತ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 07, 2024 | 8:41 PM

Share

ಚಿಕ್ಕಬಳ್ಳಾಪುರ, ಜೂ.07: ಭೀಕರ ಅಪಘಾತದಲ್ಲಿ ಕರ್ನಾಟಕ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ನ ಇಬ್ಬರು ಸಿಬ್ಬಂದಿ ಮತ್ತು ಬೆಸ್ಕಾಂನ (BESCOM) ಓರ್ವ ಲೈನ್​ ಮ್ಯಾನ್ ಸೇರಿ ಮೂವರು​ ಮೃತಪಟ್ಟಿರುವ ಘಟನೆ ಗೌರಿಬಿದನೂರು (Gauribidanur) ತಾಲೂಕಿನ ವಾಟದಹೊಸಹಳ್ಳಿ ಬಳಿ ಸಂಭವಿಸಿದೆ. ಕೆಪಿಟಿಸಿಎಲ್ ಸಿಬ್ಬಂದಿ ವೇಣಗೋಪಾಲ್ (34) ಹಾಗೂ ಶ್ರೀಧರ್ (35) ಮತ್ತು ಬೆಸ್ಕಾಂನ ಲೈನ್ ಮ್ಯಾನ್ ಮಂಜಪ್ಪ (35) ಮೃತರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಗರಗೇರೆ ಗ್ರಾಮದ ಬಳಿ ಇರುವ ಬೆಸ್ಕಾಂ ಸೇಕ್ಷನ್ ಕಚೇರಿಯಲ್ಲಿ ನಾಲ್ವರು ಲೈನ್ ಮ್ಯಾನ್​ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ನಿನ್ನೆ(ಜೂ.06) ರಾತ್ರಿ ಕರ್ತವ್ಯಕ್ಕೆ ಹೋಗಿದ್ದಾರೆ. ಮದ್ಯೆರಾತ್ರಿ ವಿದ್ಯುತ್ ರಿಪೇರಿ ಎಂದು ನಗರಗೇರೆಯಿಂದ ವಾಟದಹೊಸಹಳ್ಳಿ ಗ್ರಾಮಕ್ಕೆ ಹೋಗಿ ವಾಪಸ್ ನಗರಗೇರೆಗೆ ವೇಣುಗೋಪಾಲ್ ಕಾರಿನಲ್ಲಿ ಬರುತ್ತಿದ್ದಾಗ ಪ್ರಯಾಣಿಸುತ್ತಿದ್ದ ಬ್ರೀಜಾ ಕಾರು ನಿಯಂತ್ರಣ ತಪ್ಪಿ, ನಾಲ್ಕು ಜನರಲ್ಲಿ ಶ್ರೀಧರ್, ⁠ವೇಣುಗೋಪಾಲ್, ⁠ಮಂಜುನಾಥ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ⁠ಶಿವಕುಮಾರ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:ಚಾಮರಾಜನಗರ: ಎರಡು ಸಾವಿರ ಸಾಲಕ್ಕೆ ನಡೆದೆ ಹೋಯ್ತು ಕೊಲೆ; ಸ್ನೇಹಿತನನ್ನ ಕೊಂದು ಅಪಘಾತದ ಕಥೆ ಕಟ್ಟಿದರು

ರಾತ್ರಿಯಿಡೀ ಮರದಲ್ಲಿ ನೇತಾಡಿದ ಗಾಯಾಳು ಬೆಳಿಗ್ಗೆ ಸಾವು

ಇನ್ನುಈ ಕಾರು ಸಿಬ್ಬಂದಿ ವೇಣುಗೋಪಾಲ್​ಗೆ ಸೇರಿದ್ದು, ಆತನೇ ಕಾರನ್ನು ಚಾಲನೆ ಮಾಡುತ್ತಿದ್ದರು. ರಸ್ತೆಯಲ್ಲಿ ತಿರುವು ಇದ್ದರೂ ಅತಿವೇಗವಾಗಿ ಚಲಾಯಿಸಿದ್ದೆ ಘಟನೆಗೆ ಕಾರಣ ಎನ್ನಲಾಗಿದೆ. ಕಾರು ಪಲ್ಟಿಯಾದ ರಭಸಕ್ಕೆ ಕಾರಿನಲ್ಲಿ ಮೃತರಲ್ಲೊಬ್ಬರಾದ ಶ್ರೀಧರ್,  ಎದರುಗಡೆ ಇದ್ದ ಮರದಲ್ಲಿ ಹಾರಿ ಹೋಗಿ ರಾತ್ರಿಯಿಡಿ ನೇತಾಡಿ ಕೊನೆಗೆ ಮೃತಪಟ್ಟಿದ್ದಾನೆ. ಬೆಳಿಗ್ಗೆ ದಾರಿಹೋಕರು ಗಮನಿಸಿ ಗೌರಿಬಿದನೂರು ಗ್ರಾಮಾಂತರ ಠಾನೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ ಕಾರಿನಲ್ಲಿದ್ದ ಶಿವಕುಮಾರ್ ನನ್ನು ಆಸ್ಪತ್ರೆಗ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ನಾಲ್ಕು ಜನ ಬೆಸ್ಕಾಂ ಸಿಬ್ಬಂಧಿಗಳು ರಾತ್ರಿ ಪಾಳಯದಲ್ಲಿ ಕರ್ತವ್ಯದಲ್ಲಿ ಇದ್ದರೂ ಪಾನಮತ್ತರಾಗಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಮದ್ಯದ ಅಮಲಿನಲ್ಲಿ ಕಾರು ಅತಿವೇಗವಾಗಿ ಚಲಾವಣೆ ಮಾಡಿದ ಕಾರಣ ನಿಯಂತ್ರಣ ತಪ್ಪಿ ಅಪಘಾತವಾಗಿರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಇದ್ರಿಂದ ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 304 ಎ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ