AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯಪ್ಪಸ್ವಾಮಿ‌ ಮಾಲಾಧಾರಿಗಳ ಮೇಲೆ ಹರಿದ ಕಾರು; ಒಬ್ಬರು ಸಾವು, ಇನ್ನೊಬ್ಬರಿಗೆ ಗಂಭೀರ ಗಾಯ!

ಅಯ್ಯಪ್ಪಸ್ವಾಮಿ‌ ಮಾಲೆ ಧರಿಸಿದ್ದ ಸುಮಾರು 30 ಕ್ಕೂ ಹೆಚ್ಚು ಜನ ಅಯ್ಯಪ್ಪಸ್ವಾಮಿ‌ ಭಕ್ತರು, ಆಂಧ್ರದ ಅನಂತಪುರ ಜಿಲ್ಲೆಯ ಹಿಂದೂಪುರ ಪಟ್ಟಣದಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಕಡೆಗೆ ಕಾಲ್ನಡಿಗೆಯಲ್ಲಿ ಪಾದಯಾತ್ರೆ ಹೊರಟಿದ್ದರು. ಇದೇ ವೇಳೆ ಚೌಳೂರು ಕಡೆಯಿಂದ ಬಂದ ಕಾರು, ಏಕಾಏಕಿ ಅಯ್ಯಪ್ಪ ಸ್ವಾಮಿ‌ ಮಾಲಾಧಾರಿಗಳ‌‌ ಮೇಲೆ ಹರಿದಿದೆ.

ಅಯ್ಯಪ್ಪಸ್ವಾಮಿ‌ ಮಾಲಾಧಾರಿಗಳ ಮೇಲೆ ಹರಿದ ಕಾರು; ಒಬ್ಬರು ಸಾವು, ಇನ್ನೊಬ್ಬರಿಗೆ ಗಂಭೀರ ಗಾಯ!
ಚಿಕ್ಕಬಳ್ಳಾಪುರ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 10, 2023 | 6:34 PM

ಚಿಕ್ಕಬಳ್ಳಾಪುರ, ಡಿ.10: ಜಿಲ್ಲೆಯ ಗೌರಿಬಿದನೂರು(Gauribidanur) ತಾಲ್ಲೂಕಿನ ಆಂಧ್ರ ಪ್ರದೇಶ- ಕರ್ನಾಟಕ ಗಡಿನಾಡು ‌ವಿದುರಾಶ್ವತ್ಥ ಗ್ರಾಮದ ಬಳಿ ಕಾಲ್ನಡಿಗೆಯಲ್ಲಿ ಪಾದಯಾತ್ರೆ ಹೊರಟಿದ್ದ ಅಯ್ಯಪ್ಪಸ್ವಾಮಿ‌ ಮಾಲಾಧಾರಿ (Ayyappaswamy Maladhari)ಗಳ ಮೇಲೆ ಕಾರೊಂದು ಹರಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಅಯ್ಯಪ್ಪಸ್ವಾಮಿ‌ ಮಾಲೆ ಧರಿಸಿದ್ದ ಸುಮಾರು 30 ಕ್ಕೂ ಹೆಚ್ಚು ಜನ ಅಯ್ಯಪ್ಪಸ್ವಾಮಿ‌ ಭಕ್ತರು, ಆಂಧ್ರದ ಅನಂತಪುರ ಜಿಲ್ಲೆಯ ಹಿಂದೂಪುರ ಪಟ್ಟಣದಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಕಡೆಗೆ ಕಾಲ್ನಡಿಗೆಯಲ್ಲಿ ಪಾದಯಾತ್ರೆ ಹೊರಟಿದ್ದರು. ಇದೇ ವೇಳೆ ಚೌಳೂರು ಕಡೆಯಿಂದ ಬಂದ ಕಾರು, ಏಕಾಏಕಿ ಅಯ್ಯಪ್ಪ ಸ್ವಾಮಿ‌ ಮಾಲಾಧಾರಿಗಳ‌‌ ಮೇಲೆ ಹರಿದಿದೆ. ಈ ಘಟನೆಯಲ್ಲಿ ವೆಂಕಟೇಶ್ ಎನ್ನುವ 55 ವರ್ಷದ ವ್ಯಕ್ತಿಯೊರ್ವ ಸ್ಥಳದಲ್ಲಿ ಮೃತಪಟ್ಟಿದ್ದು, ಪ್ರಹ್ಲಾದ್ (36) ಹಾಗೂ ಮಣಿಕಂಠ (26) ಎನ್ನುವವರಿಗೆ ಗಂಭೀರ ಗಾಯಗಳಾಗಿವೆ. ಇಬ್ಬರು ಗಾಯಾಳುಗಳನ್ನು ಗೌರಿಬಿದನೂರು ಸಾರ್ವಜನಿಕ ‌ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ:ಮುಲ್ಕಿ ಬಳಿ ಸರಣಿ ಅಪಘಾತ ಪ್ರಕರಣ; ಲಾರಿ ಚಾಲಕನ ಬಂಧನ, ಇಲ್ಲಿದೆ ಅಪಘಾತದ ಭಯಾನಕ ವಿಡಿಯೋ

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿರುವ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘ ಆವರಣದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಹಳೆಯ ಟಿಸಿ, ಗುಜರಿ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಬೆಂಕಿ ನಂದಿಸಿದ್ದಾರೆ. ಈ ಕುರಿತು ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:32 pm, Sun, 10 December 23

ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ