AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯಪ್ಪಸ್ವಾಮಿ‌ ಮಾಲಾಧಾರಿಗಳ ಮೇಲೆ ಹರಿದ ಕಾರು; ಒಬ್ಬರು ಸಾವು, ಇನ್ನೊಬ್ಬರಿಗೆ ಗಂಭೀರ ಗಾಯ!

ಅಯ್ಯಪ್ಪಸ್ವಾಮಿ‌ ಮಾಲೆ ಧರಿಸಿದ್ದ ಸುಮಾರು 30 ಕ್ಕೂ ಹೆಚ್ಚು ಜನ ಅಯ್ಯಪ್ಪಸ್ವಾಮಿ‌ ಭಕ್ತರು, ಆಂಧ್ರದ ಅನಂತಪುರ ಜಿಲ್ಲೆಯ ಹಿಂದೂಪುರ ಪಟ್ಟಣದಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಕಡೆಗೆ ಕಾಲ್ನಡಿಗೆಯಲ್ಲಿ ಪಾದಯಾತ್ರೆ ಹೊರಟಿದ್ದರು. ಇದೇ ವೇಳೆ ಚೌಳೂರು ಕಡೆಯಿಂದ ಬಂದ ಕಾರು, ಏಕಾಏಕಿ ಅಯ್ಯಪ್ಪ ಸ್ವಾಮಿ‌ ಮಾಲಾಧಾರಿಗಳ‌‌ ಮೇಲೆ ಹರಿದಿದೆ.

ಅಯ್ಯಪ್ಪಸ್ವಾಮಿ‌ ಮಾಲಾಧಾರಿಗಳ ಮೇಲೆ ಹರಿದ ಕಾರು; ಒಬ್ಬರು ಸಾವು, ಇನ್ನೊಬ್ಬರಿಗೆ ಗಂಭೀರ ಗಾಯ!
ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 10, 2023 | 6:34 PM

Share

ಚಿಕ್ಕಬಳ್ಳಾಪುರ, ಡಿ.10: ಜಿಲ್ಲೆಯ ಗೌರಿಬಿದನೂರು(Gauribidanur) ತಾಲ್ಲೂಕಿನ ಆಂಧ್ರ ಪ್ರದೇಶ- ಕರ್ನಾಟಕ ಗಡಿನಾಡು ‌ವಿದುರಾಶ್ವತ್ಥ ಗ್ರಾಮದ ಬಳಿ ಕಾಲ್ನಡಿಗೆಯಲ್ಲಿ ಪಾದಯಾತ್ರೆ ಹೊರಟಿದ್ದ ಅಯ್ಯಪ್ಪಸ್ವಾಮಿ‌ ಮಾಲಾಧಾರಿ (Ayyappaswamy Maladhari)ಗಳ ಮೇಲೆ ಕಾರೊಂದು ಹರಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಅಯ್ಯಪ್ಪಸ್ವಾಮಿ‌ ಮಾಲೆ ಧರಿಸಿದ್ದ ಸುಮಾರು 30 ಕ್ಕೂ ಹೆಚ್ಚು ಜನ ಅಯ್ಯಪ್ಪಸ್ವಾಮಿ‌ ಭಕ್ತರು, ಆಂಧ್ರದ ಅನಂತಪುರ ಜಿಲ್ಲೆಯ ಹಿಂದೂಪುರ ಪಟ್ಟಣದಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಕಡೆಗೆ ಕಾಲ್ನಡಿಗೆಯಲ್ಲಿ ಪಾದಯಾತ್ರೆ ಹೊರಟಿದ್ದರು. ಇದೇ ವೇಳೆ ಚೌಳೂರು ಕಡೆಯಿಂದ ಬಂದ ಕಾರು, ಏಕಾಏಕಿ ಅಯ್ಯಪ್ಪ ಸ್ವಾಮಿ‌ ಮಾಲಾಧಾರಿಗಳ‌‌ ಮೇಲೆ ಹರಿದಿದೆ. ಈ ಘಟನೆಯಲ್ಲಿ ವೆಂಕಟೇಶ್ ಎನ್ನುವ 55 ವರ್ಷದ ವ್ಯಕ್ತಿಯೊರ್ವ ಸ್ಥಳದಲ್ಲಿ ಮೃತಪಟ್ಟಿದ್ದು, ಪ್ರಹ್ಲಾದ್ (36) ಹಾಗೂ ಮಣಿಕಂಠ (26) ಎನ್ನುವವರಿಗೆ ಗಂಭೀರ ಗಾಯಗಳಾಗಿವೆ. ಇಬ್ಬರು ಗಾಯಾಳುಗಳನ್ನು ಗೌರಿಬಿದನೂರು ಸಾರ್ವಜನಿಕ ‌ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ:ಮುಲ್ಕಿ ಬಳಿ ಸರಣಿ ಅಪಘಾತ ಪ್ರಕರಣ; ಲಾರಿ ಚಾಲಕನ ಬಂಧನ, ಇಲ್ಲಿದೆ ಅಪಘಾತದ ಭಯಾನಕ ವಿಡಿಯೋ

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿರುವ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘ ಆವರಣದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಹಳೆಯ ಟಿಸಿ, ಗುಜರಿ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಬೆಂಕಿ ನಂದಿಸಿದ್ದಾರೆ. ಈ ಕುರಿತು ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:32 pm, Sun, 10 December 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ