AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಅತಿವೃಷ್ಟಿ ಅಧ್ಯಯನ ತಂಡ; ಮಳೆಹಾನಿ ಪರಿಹಾರ ಹೆಚ್ಚು ಮಾಡುವಂತೆ ಮನವಿ ಮಾಡಿದ ರೈತರು

ಹಸಿದ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎನ್ನುವ ಹಾಗೆ ಸರ್ಕಾರ ಮಳೆ ಹಾನಿಯಾದ ಪ್ರದೇಶದ ಕುಂಟೆ ಜಮೀನಿಗೆ ಚಿಲ್ಲರೆ ಕಾಸು ನಿಗದಿ ಮಾಡಿದೆ. ಇದರಿಂದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಅತಿವೃಷ್ಟಿ ಅಧ್ಯಯನ ತಂಡ; ಮಳೆಹಾನಿ ಪರಿಹಾರ ಹೆಚ್ಚು ಮಾಡುವಂತೆ ಮನವಿ ಮಾಡಿದ ರೈತರು
ಅತಿವೃಷ್ಟಿ ಅಧ್ಯಯನ ತಂಡ
TV9 Web
| Edited By: |

Updated on: Dec 18, 2021 | 3:20 PM

Share

ಚಿಕ್ಕಬಳ್ಳಾಪುರ: ಜಿಲ್ಲೆಯ ರೈತರು ಕಷ್ಟ ಜೀವಿಗಳು. ಸಾವಿರಾರು ಅಡಿಗಳಷ್ಟು ಪಾತಾಳದಿಂದ ಹನಿ ಹನಿ ನೀರು ಬಸಿದು ತೋಟ, ಹೊಲ, ಗದ್ದೆ ಮಾಡಿ ಬೆಳೆ ಬೆಳೆಯುತ್ತಿದ್ದರು. ಆದರೆ ಇತಿಹಾಸದಲ್ಲೆ ಕಂಡು ಕೇಳರಿಯದ ಮಹಾಮಳೆ ಸುರಿದು ಇತ್ತೀಚೆಗೆ ರೈತರು ಬೆಳೆದಿದ್ದ ಬೆಳೆಗಳು ನೀರು ಪಾಲಾಗಿದ್ದವು. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತೆ ರೈತರ ಬದುಕಾಗಿದೆ. ಸದ್ಯ ಮಳೆ ಹಾನಿಗೆ ರೈತರ (Farmers) ಬೆಳೆಗಳು ಹಾಳಾದ ದೃಶ್ಯ ವಿಕ್ಷಿಸಲು ಕೇಂದ್ರ ಅತಿವೃಷ್ಟಿ ಅಧ್ಯಯನ ತಂಡ ಇಂದು ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಿದೆ. ಇದರಿಂದ ಸೂಕ್ತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಮಳೆಯಿಂದ ರಾಗಿ, ಜೋಳ, ತೊಗರಿ, ಸೌತೆಕಾಯಿ, ಟೊಮೆಟೋ, ಹೂಗಳು ಎಲ್ಲಾ ಹಾಳಾಗಿವೆ. ಇರೊ ಬರೊ ಹಣವನ್ನು ಬೆಳೆಗೆ ಹಾಕಿದ್ದ ರೈತರು ಇನ್ನೂ ಮಾಡಿದ ಸಾಲ ತೀರಿಸಲು ಕಷ್ಟ ಸಾಧ್ಯವಾಗಿದೆ. ಇನ್ನೂ ಸರ್ಕಾರ ನೀಡಿರುವ ಮಳೆಹಾನಿ ಪರಿಹಾರ ರೈತರ ಖಾತೆ ತಲುಪಿಲ್ಲ. ಹಸಿದ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎನ್ನುವ ಹಾಗೆ ಸರ್ಕಾರ ಮಳೆ ಹಾನಿಯಾದ ಪ್ರದೇಶದ ಕುಂಟೆ ಜಮೀನಿಗೆ ಚಿಲ್ಲರೆ ಕಾಸು ನಿಗದಿ ಮಾಡಿದೆ. ಇದರಿಂದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯೊಂದರಲ್ಲೇ ಬರೋಬ್ಬರಿ 65 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಬೆಳೆದಿದ್ದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಸಂಪೂರ್ಣ ಹಾಳಾಗಿವೆ. 690 ಕೋಟಿ ರೂಪಾಯಿ ಮೌಲ್ಯದ ಬೆಳೆಗಳು ಹಾಳಾಗಿವೆ. ಇನ್ನೂ ಸರ್ಕಾರ ಘೋಷಣೆ ಮಾಡಿರುವ ಬೆಳೆ ಹಾನಿ ಪರಿಹಾರ ರೈತರ ಕೈ ಸೇರಿಲ್ಲ. ಸರ್ಕಾರ ನಿರ್ಧಾರ ಮಾಡಿರುವ ಪರಿಹಾರ ಮೊತ್ತ ಬೆಳೆಯ ಬೀಜಕ್ಕೂ ಸಮನಾಂತರವಾಗಿಲ್ಲ. ಇದರಿಂದ ಪ್ರಸ್ತುತ ಇರುವ ಎನ್​ಡಿಆರ್​ಎಫ್​ ಗೈಡ್ ಲೈನ್ಸ್ ಬದಲಾವಣೆ ಮಾಡಿ ಸೂಕ್ತ ಪರಿಹಾರ ನಿಡುವಂತೆ ಬೆಳೆ ಹಾನಿಯಾದ ರೈತ ಸತ್ಯನಾರಾಯಣ ಮನವಿ ಮಾಡಿದ್ದಾರೆ.

ವರದಿ: ಭೀಮಪ್ಪ ಪಾಟೀಲ

ಇದನ್ನೂ ಓದಿ: Farmers Protest ಬಹುತೇಕ ಎಲ್ಲ ಬೇಡಿಕೆಗಳನ್ನು ಅಂಗೀಕರಿಸಿದ ಸರ್ಕಾರ, ರೈತರು ನಡೆಸುತ್ತಿದ್ದ ಪ್ರತಿಭಟನೆ ಹಿಂಪಡೆಯುವ ಸಾಧ್ಯತೆ

Crop Relief Fund: ಬೆಳೆಹಾನಿಯಾದ 45,586 ರೈತರಿಗೆ 38.64 ಕೋಟಿ ಬೆಳೆ ಪರಿಹಾರ: ಕಂದಾಯ ಸಚಿವ ಆರ್ ಅಶೋಕ್ ಘೋಷಣೆ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್