AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ವಿದ್ಯುತ್​ ತಂತಿ ತಗುಲಿ 12 ವರ್ಷದ ಬಾಲಕ ಸಾವು

ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಗ್ರಾಮದಲ್ಲಿ ವಿದ್ಯುತ್​ ತಂತಿ ತಗುಲಿ 12 ವರ್ಷದ ಬಾಲಕ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಈ ಕುರಿತು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಚಿಕ್ಕಬಳ್ಳಾಪುರ: ವಿದ್ಯುತ್​ ತಂತಿ ತಗುಲಿ 12 ವರ್ಷದ ಬಾಲಕ ಸಾವು
ಮೃತ ಬಾಲಕಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 17, 2024 | 7:03 PM

Share

ಚಿಕ್ಕಬಳ್ಳಾಪುರ, ಮಾ.17: ವಿದ್ಯುತ್​ ತಂತಿ ತಗುಲಿ 12 ವರ್ಷದ ಬಾಲಕ ಸಾವನ್ನಪ್ಪಿದ ಧಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಗ್ರಾಮದಲ್ಲಿ ನಡೆದಿದೆ. ದಿಬ್ಬೂರುಹಳ್ಳಿ ಮೂಲದ ಬಾಲಕ ದೇವಪ್ಪ(12) ಮೃತ ರ್ದುದೈವಿ. ಮೇಕೆಗಳಿಗಾಗಿ ಮರವೇರಿ ರೆಂಬೆ ಕಡಿಯುವಾಗ ಈ ದುರಂತ ನಡೆದಿದೆ. ಈ ಕುರಿತು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನು ಕಳೆದ ಫೆ.17 ರಂದು ಹಾವೇರಿ ನಗರದ ಮಣಿಗಾರ ಓಣಿಯಲ್ಲಿ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸುರೇಶ್ (38) ಎಂಬ  ಯುವಕನೋರ್ವ ಬಲಿಯಾದ ಘಟನೆ ನಡೆದಿತ್ತು. ಮತ್ತೋರ್ವ ಲೈನ್​ಮನ್ ನಿಂಗಪ್ಪನಿಗೆ ಗಂಭಿರ ಗಾಯವಾಗಿದ್ದು, ಹಾವೇರಿ  ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿದ್ಯುತ್ ಖಡಿತಗೊಳಿಸಿ ಇಬ್ಬರು ಯುವಕರು ಹೊಸ ಲೈನ್ ಎಳೆಯುವ ಕಾಮಗಾರಿ ಮಾಡುತ್ತಿದ್ದರು. ಈ ವೇಳೆ ಸಿಬ್ಬಂದಿ ಏಕಾಏಕಿ ವಿದ್ಯುತ್ ಕನೆಕ್ಟ್ ಮಾಡಿದ್ದಾನೆ. ಇನ್ನು ಲೈನ್ ಮನ್ ಶವ ಕಂಬದಲ್ಲಿಯೇ ನೇತಾಡುತ್ತಿದೆ. ಇನ್ನು ಘಟನೆ ಹಿನ್ನಲೆ ಮೃತ ಲೈನ್​ಮೆನ್ ಸುರೇಶ್ ಕುಟುಂಬಕ್ಕೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್  5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರು. ಇಷ್ಟೇಲ್ಲ ಘಟನೆಗಳು ಬೆಳಕಿಗೆ ಬಂದರೂ ಇಂತಹ ಅವಘಡಗಳಿಗೆ ಬ್ರೇಕ್​ ಹಾಕಲು ಆಗುತ್ತಿಲ್ಲ.

ಇದನ್ನೂ ಓದಿ:ಮತ್ತೊಂದು ವಿದ್ಯುತ್ ಅವಘಡ.. ವಿಕಲಚೇತನ ಬಾಲಕನಿಗೆ ಹೈ ಕರೆಂಟ್ ಶಾಕ್, ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿ, ಹೆತ್ತವರ ಕಣ್ಣೀರು

ಕಾರು ಸರ್ವಿಸ್ ಸರಿಯಾಗಿ ಮಾಡಿಲ್ಲ ಎಂದು ಗಲಾಟೆ

ಬೆಂಗಳೂರು: ಬೆಂಗಳೂರಿನ ಹೆಸರಘಟ್ಟ ರಸ್ತೆಯ ಬಾಗಲಗುಂಟೆಯ ಹುಂಡೈ ಕಾರು ಸರ್ವಿಸ್ ಸೆಂಟರ್​ನಲ್ಲಿ ಕಾರು ಸರ್ವಿಸ್​ ಸರಿಯಾಗಿ ಮಾಡಿಲ್ಲ ಎಂದು ತನ್ನ ಕಾರಿನ ಗ್ಲಾಸ್​ ಒಡೆದು ಮಾಲೀಕ ವೀರೇಶ್ ಎಂಬಾತ ರಂಪಾಟ ಮಾಡಿ, ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ. ಬಳಿಕ ಸುರಕ್ಷತೆ ಇಲ್ಲದ ಸರ್ವಿಸ್ ಸೆಂಟರ್​ನ್ನು ಬಂದ್​ ಮಾಡಲೇಬೇಕೆಂದು ಬಿಗಿಪಟ್ಟು ಹಿಡಿದಿದ್ದಾನೆ. ಮ್ಯಾನೇಜರ್ ಗಣೇಶ್ ಸೇರಿದಂತೆ ಸಿಬ್ಬಂದಿಗಳು ಎಷ್ಟೇ ಮನವಿ ಮಾಡಿದರೂ ಕಾರ್ ಮಾಲೀಕ ಒಪ್ಪದೇ ಪಟ್ಟು ಹಿಡಿದಿದ್ದ. ಈ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ