AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಾಯ್ತಿ ಮಾಜಿ ಅಧ್ಯಕ್ಷ ಪುತ್ರನನ್ನ ಹತ್ಯೆಗೈದು ಚರಂಡಿಗೆ ಎಸೆದ ದುಷ್ಕರ್ಮಿಗಳು

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು ಶವವನ್ನು ಚರಂಡಿಯಲ್ಲಿ ಬಿಸಾಕಿ ಹೋಗಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿಯಲ್ಲಿ ನಡೆದಿದೆ. ಕುಡಿದ ಅಮಲಿನಲ್ಲಿ ಜೊತೆಗಾರರೇ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್​​ಪಿ ಕುಶಾಲ್ ಚೌಕ್ಸಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಪಂಚಾಯ್ತಿ ಮಾಜಿ ಅಧ್ಯಕ್ಷ ಪುತ್ರನನ್ನ ಹತ್ಯೆಗೈದು ಚರಂಡಿಗೆ ಎಸೆದ ದುಷ್ಕರ್ಮಿಗಳು
ಪಂಚಾಯ್ತಿ ಮಾಜಿ ಅಧ್ಯಕ್ಷ ಪುತ್ರನನ್ನ ಹತ್ಯೆಗೈದು ಚರಂಡಿಗೆ ಎಸೆದ ದುಷ್ಕರ್ಮಿಗಳು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jan 31, 2025 | 9:01 PM

Share

ಚಿಕ್ಕಬಳ್ಳಾಪುರ, ಜನವರಿ 31: ಆತ ಹೇಳಿ ಕೇಳಿ ಗ್ರಾಮ ಪಂಚಾಯಿತಿಯೊಂದರ ಮಾಜಿ ಅಧ್ಯಕ್ಷನ ಮಗ. ರಾಜಕೀಯ ಹವಾದ ಜೊತೆಗೆ ಎಲೆಕ್ಟ್ರಿಕಲ್​ ಹಾಗೂ ಪ್ಲಂಬಿಗ್ ಕೆಲಸ ಮಾಡಿಕೊಂಡು ಓಡಾಡಿಕೊಂಡಿದ್ದ. ಕಳೆದ ಮೂರು ದಿನಗಳಿಂದ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವ ಇಂದು ಶವವಾಗಿ (dead) ಪತ್ತೆಯಾಗಿದ್ದಾನೆ. ಕುಡಿದ ಅಮಲಿನಲ್ಲಿ ದುಷ್ಕರ್ಮಿಗಳು ಬಿಯರ್ ಬಾಟಲಿಯಿಂದ ಚುಚ್ಚಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರ ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿಯ ಚಿಕ್ಕಬಳ್ಳಾಪುರ ತಾಲ್ಲೂಕಿನ ಮರಸನಹಳ್ಳಿ ಬಳಿ ಪಾಳುಬಿದ್ದ ಬಡಾವಣೆಯೊಂದು ಇದೆ. ಕೆಲವು ಪಡ್ಡೆ ಹೈಕ್ಳಿಗೆ, ಕುಡುಕರ ಅಡ್ಡೆಯಾಗಿದೆ. ಇದೇ ಬಡಾವಣೆಯಲ್ಲಿಂದು ಚಿಕ್ಕಬಳ್ಳಾಪುರ ತಾಲ್ಲೂಕು ಹಾರೋಬಂಡೆ ಗ್ರಾಮಪಂಚಾಯಿತಿಯ ಮಾಜಿ ಅಧ್ಯಕ್ಷ ನಾಗರೆಡ್ಡಿ ಅವರ ಮಗ 25 ವರ್ಷದ ಮಾರುತೇಶ್ ಶವವಾಗಿ ಪತ್ತೆಯಾಗಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನಲ್ಲೊಂದು ಭಯಾನಕ ಘಟನೆ: ಕ್ಯಾಬ್​ಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ

ಶವದ ಮುಖಕ್ಕೆ ಬಿಯರ್ ಬಾಟಲಿಯಿಂದ ತಿವಿದಂತೆ ಕಂಡುಬಂದಿದೆ. ಘಟನಾ ಸ್ಥಳದಲ್ಲಿ ಮೃತನ ಬೈಕ್ ಹಾಗೂ ಮದ್ಯಪಾನ ಮಾಡಿ ಬಿಯರ್ ಬಾಟಲಿಗಳನ್ನ ಒಡೆದುಹಾಕಲಾಗಿದೆ. ಇದ್ರಿಂದ ಕುಡಿದ ಅಮಲಿನಲ್ಲಿ ಮಾರುತೇಶ್ ನನ್ನ ಬರ್ಬರವಾಗಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಎಸ್​ಪಿ ಕುಶಲ್ ಚೌಕ್ಸೆ ಹಾಗೂ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಆನ್​ಲೈನ್​ನಲ್ಲಿ ಬಟನ್ ಚಾಕು ತರಿಸಿಕೊಂಡು ಶಿಫಾಳ ಹತ್ಯೆ: ತನಿಖೆಯಲ್ಲಿ ಲವ್ ಸ್ಟೋರಿ ರಿವೀಲ್

ಇನ್ನು ಮೃತ ಯುವಕ ಮಾರುತೇಶ್ ರಾಜಕೀಯದ ಜೊತೆಗೆ ಚಿಕ್ಕಬಳ್ಳಾಪುರದಲ್ಲಿ ಎಲೆಕ್ಟ್ರಿಕಲ್ ಹಾಗೂ ಪ್ಲಂಬಿಂಗ್ ಕೆಲಸ ಮಾಡಿಕೊಂಡಿದ್ದ. ಇನ್ನು ಪಕ್ಕದ ಗ್ರಾಮದಲ್ಲಿದ್ದ ವಿವಾಹಿತೆಯೊಬ್ಬಳ ಜೊತೆ ಅನೈತಿಕ ಸಂಬಂಧ ಹೊಂದಿರುವ ಆರೋಪವೂ ಕೇಳಿಬಂದಿತ್ತು. ಇನ್ನು ಮೂರು ದಿನಗಳ ಹಿಂದೆ ನಾಪತ್ತೆಯಾದವ ಇಂದು ಕೊಲೆಯಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವೈಯುಕ್ತಿಕ ಅಥವಾ ಹಳೆಯ ದ್ವೇಷವೋ, ಇಲ್ಲವೇ ಅನೈತಿಕ ಸಂಬಂಧದಿಂದ ಕೊಲೆಯೋ ಅನ್ನೋ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:59 pm, Fri, 31 January 25

Follow Us
ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ
ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ