AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ ಅಪಘಾತ: ತನ್ನವರನ್ನು ಕಳೆದುಕೊಂಡು ಅನಾಥೆಯಾದ ಮಹಿಳೆ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬರುಡುಗುಂಟೆ ಬಳಿ ಸಂಭವಿಸಿದ್ದ ಭೀಕರ ಬಸ್ ಮತ್ತು ಬೈಕ್ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಓರ್ವ ಮಹಿಳೆ ತನ್ನ ತಂದೆ, ಗಂಡ, ಮಗ ಮತ್ತು ತಮ್ಮನನ್ನು ಕಳೆದುಕೊಂಡು ದಿಕ್ಕುತೋಚದಂತಾಗಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

ಚಿಕ್ಕಬಳ್ಳಾಪುರ ಅಪಘಾತ: ತನ್ನವರನ್ನು ಕಳೆದುಕೊಂಡು ಅನಾಥೆಯಾದ ಮಹಿಳೆ
ಚಿಕ್ಕಬಳ್ಳಾಪುರ ಅಪಘಾತ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Oct 24, 2025 | 7:30 PM

Share

ಚಿಕ್ಕಬಳ್ಳಾಪುರ, ಅಕ್ಟೋಬರ್​ 24: ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಬರುಡುಗುಂಟೆ ಗ್ರಾಮದ ಬಳಿ ಗುರುವಾರ ರಾತ್ರಿ ಖಾಸಗಿ ಶಾಲಾ ಬಸ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ (Accident) ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವಂತಹ (death) ದಾರುಣ ಘಟನೆ ನಡೆದಿದೆ. ತಂದೆ, ಗಂಡ, ಮಗ, ಹಾಗೂ ತಮ್ಮ ನನ್ನ ಕಳೆದುಕೊಂಡು ಓರ್ವ ಮಹಿಳೆ ಅನಾಥರಾಗಿದ್ದಾರೆ. ಸದ್ಯ ದುರಂತದಿಂದ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲುಮುಟ್ಟಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಬರುಡುಗುಂಟೆ ಗ್ರಾಮದ ಬಳಿ ನಿನ್ನೆ ರಾತ್ರಿ ಸಂಭವಿಸಿದ್ದ ಖಾಸಗಿ ಶಾಲಾ ಬಸ್ ಹಾಗೂ ಬೈಕ್ ಮಧ್ಯದ ಭೀಕರ ಅಪಘಾತ ಪ್ರಕರಣದಲ್ಲಿ ವಿವಾಹತ ಸ್ವಾತಿ ಎನ್ನುವ ಮಹಿಳೆ ತನ್ನ ತಂದೆ ವೆಂಕಟೇಶಪ್ಪ, ಗಂಡ ಬಾಲಾಜಿ, ಮಗ ಆರ್ಯ, ತಮ್ಮ ಹರ್ಷ ನನ್ನ ಕಳೆದುಕೊಂಡು ದಿಕ್ಕು ತೋಚದಂತಾಗಿದ್ದಾರೆ.

ಇದನ್ನೂ ಓದಿ: ಬೈಕ್- ಶಾಲಾ ಬಸ್ ನಡುವೆ ಭೀಕರ ಅಪಘಾತ: ಮಕ್ಕಳು ಸೇರಿ ನಾಲ್ವರು ದುರ್ಮರಣ

ಇಂದು ಚಿಂತಾಮಣಿ ತಾಲೂಕಾಸ್ಪತ್ರೆ ಬಳಿ ಮೃತರ ಶವಗಳನ್ನ ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಎರಡು ಕುಟುಂಬಗಳಿಗೆ ಆಧಾರ ಸ್ತಂಭವಾಗಿದ್ದ ನಾಲ್ವರು ಗಂಡು ವಾರಸುದಾರರನ್ನು ಕಳೆದುಕೊಂಡು ಗೋಳಾಡುತ್ತಿದ್ದ ದೃಶ್ಯ ಮನಕಲಕುವಂತಿತ್ತು.

ಇನ್ನು ಚಿಂತಾಮಣಿ ತಾಲೂಕಿನ ಚಿಲಕಲನೇರ್ಪು ನಿವಾಸಿ ಬಾಲಾಜಿ, ಕೆಲವು ವರ್ಷಗಳ ಹಿಂದೆ ಚೇಳೂರು ತಾಲ್ಲೂಕಿನ ತಾಡಿಗೋಳು ಗ್ರಾಮದ ವೆಂಕಟೇಶಪ್ಪ ಅವರ ಮಗಳು ಸ್ವಾತಿಯನ್ನ ಮದುವೆ ಮಾಡಿಕೊಂಡಿದ್ದು, ಇಬ್ಬರು ಮಕ್ಕಳಿದ್ದಾರೆ. ಅಪಘಾತದಲ್ಲಿ ಮಗ ಆರ್ಯನನ್ನ ಕಳೆದುಕೊಂಡಿದ್ದಾರೆ. ಅಪಘಾತದಲ್ಲಿ ತಂದೆ, ಗಂಡ, ತಮ್ಮ, ಮಗನನ್ನ ಕಳೆದುಕೊಂಡು ಮೃತ ಬಾಲಾಜಿ ಪತ್ನಿ ಸ್ವಾತಿ ಆಘಾತಕ್ಕೆ ಒಳಗಾಗಿದ್ದು, ಅವರ ಜೊತೆಗೆ ನಾನೂ ಹೋಗಬಾರದಿತ್ತೆ ಅಂತ ಅಲವತ್ತುಕೊಂಡಿದ್ದಾರೆ.

ಇದನ್ನೂ ಓದಿ: ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಮತ್ತೊಂದೆಡೆ ಸಂಬಂಧಿಕರ ಮದುವೆಗೆ ಎಂದು ಬೈಕ್​​​ನಲ್ಲಿ ತೆರಳಿದ್ದ ಐವರಲ್ಲಿ ನಾಲ್ವರು ಮದುವೆ ಮನೆಗೆ ಹೋಗುವ ಮೊದಲೇ ಸ್ಮಶಾನ ಸೇರಿದ್ದು ದುರಾದೃಷ್ಟಕರ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!