ಅಲರ್ಟ್: ಈ ಭಾನುವಾರ ನಂದಿಬೆಟ್ಟಕ್ಕೆ ಹೋಗುವ ಪ್ಲ್ಯಾನ್ ಇದ್ರೆ ಮುಂದೂಡಿ

ವೀಕೆಂಡ್‌ ಅಂದ್ರೆ ಸಾಕು ಬೆಂಗಳೂರಿಗರಿಗೆ ನಂದಿಬೆಟ್ಟ ಒಂದು ರೀತಿಯ ಎಂಜಾಯ್ ಮಾಡುವ ಹಾಟ್​​ಸ್ಪಾಟ್. ಅದರಲ್ಲೂ ಈ ಮಳೆಗಾಲದಲ್ಲೂ ಇಲ್ಲಿನ ವೆದರ್ ನೋಡಲು ಸುಂದರವಾಗಿರುತ್ತೆ. ಆದ್ರೆ ಈ ಭಾನುವಾರ ನಂದಿಬೆಟ್ಟಕ್ಕೆ ಹೋಗಬೇಕು ಅಂತ ಪ್ಲಾನ್ ಮಾಡಿಕೊಂಡವರಿಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಶಾಕ್ ಕೊಟ್ಟಿದೆ. ಆಗಸ್ಟ್ 9ರಂದು ನಂದಿ ಬೆಟ್ಟಕ್ಕೆ ಹೋಗುವ ಮುನ್ನ ಇದನ್ನು ಓದಲೇ ಬೇಕು.

ಅಲರ್ಟ್: ಈ ಭಾನುವಾರ ನಂದಿಬೆಟ್ಟಕ್ಕೆ ಹೋಗುವ ಪ್ಲ್ಯಾನ್ ಇದ್ರೆ ಮುಂದೂಡಿ
Nandi Hills
Edited By:

Updated on: Aug 07, 2026 | 8:14 PM

ಚಿಕ್ಕಬಳ್ಳಾಪುರ, (ಆಗಸ್ಟ್ 07): ನಂದಿಬೆಟ್ಟದಲ್ಲಿ  ಮಾನ್ಸೂನ್‌ ಮ್ಯಾರಥಾನ್‌ ಹಿನ್ನೆಲೆಯಲ್ಲಿ, ನಂದಿಬೆಟ್ಟಕ್ಕೆ (nandi hills) ವಾಹನಗಳ ಸಂಚಾರ ಬಂದ್‌ ಮಾಡಲಾಗಿದೆ. ಹೌದು…ಇದೇ ಆಗಸ್ಟ್ 9ರಂದು ನಂದಿಹಿಲ್ಸ್‌ ಮಾನ್ಸೂನ್‌ ಮ್ಯಾರಥಾನ್‌ (monsoon marathon) ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಂದಿಬೆಟ್ಟದ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಆಗಸ್ಟ್‌ 8ರ ರಾತ್ರಿ 11 ಗಂಟೆಯಿಂದ ಆಗಸ್ಟ್‌ 9ರ ಮಧ್ಯಾಹ್ನ 12 ಗಂಟೆಯವರೆಗೆ ನಂದಿಬೆಟ್ಟದ ರಸ್ತೆಯಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಿ ಚಿಕ್ಕಬಳ್ಳಾಪುರ (Chikkaballapur) ಜಿಲ್ಲಾಧಿಕಾರಿ ಜಿ. ಪ್ರಭು ಅವರು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಕಾರಹಳ್ಳಿ ಕ್ರಾಸ್‌ನಿಂದ ನಂದಿಬೆಟ್ಟದವರೆಗೆ ವಾಹನಗಳ ಸಂಚಾರ ಬಂದ್‌ ಇರಲಿದೆ.

ನಂದಿಬೆಟ್ಟದಲ್ಲಿ ನಡೆಯಲಿರುವ ನಂದಿಹಿಲ್ಸ್ ಮಾನ್ಸೂನ್‌ ಮ್ಯಾರಥಾನ್‌ನಲ್ಲಿ 10 ಕಿಲೋಮೀಟರ್‌ ಹಾಗೂ 21 ಕಿಲೋಮೀಟರ್‌ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಸುಮಾರು 4,500ಕ್ಕೂ ಹೆಚ್ಚು ಕ್ರೀಡಾಪಟುಗಳು ಮ್ಯಾರಥಾನ್‌ನಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಮ್ಯಾರಥಾನ್‌ ಯಶಸ್ವಿಯಾಗಿ ನಡೆಸಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು, ನಂದಿಹಿಲ್ಸ್‌ ಮಾನ್ಸೂನ್‌ ಮ್ಯಾರಥಾನ್‌ಗೆ ಡಿಸಿಎಂ ಜಿ. ಪರಮೇಶ್ವರ್‌ ಚಾಲನೆ ನೀಡಲಿದ್ದಾರೆ. ಮ್ಯಾರಥಾನ್‌ ನಲ್ಲಿ ಭಾಗವಹಿಸುವ ವಾನಹಗಳಿಗೆ ಪಾಸ್‌ ನೀಡಲಾಗಿದ್ದು, ಆ ವಾಹನಗಳಿಗೆ ಮಾತ್ರ ಅವಕಾಶ ಇರಲಿದೆ. ಇನ್ನುಳಿದ ಬೇರೆ ವಾಹನಗಳಿಗೆ ನಿರ್ಬಂಧವಿರಲಿದೆ.

ಇದನ್ನೂ ಓದಿ: Karnataka Weather Forecast: ಆ.13ರ ವರೆಗೆ ರಾಜ್ಯದಲ್ಲಿ ಮಳೆ; ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ

ಒಟ್ನಲ್ಲಿ ವಿಶ್ವವಿಖ್ಯಾತ ಪ್ರವಾಸಿ ತಾಣವಾಗಿರುವ ನಂದಿಗಿರಿಧಾಮದಲ್ಲಿ, ಭಾನುವಾರ ನಡೆಯಲಿರುವ ಮ್ಯಾರಥಾನ್‌ ಹಿನ್ನೆಲೆಯಲ್ಲಿ, ಪ್ರವಾಸಿಗರು ಜಿಲ್ಲಾಡಳಿತದ ಸೂಚನೆ ಪಾಲಿಸುವುದು ಅನಿವಾರ್ಯವಾಗಿದೆ. ಹೀಗಾಗಿ ವೀಕೆಂಡ್‌ನಲ್ಲಿ ನಂದಿಬೆಟ್ಟಕ್ಕೆ ಬರೋ ಪ್ಲಾನ್‌ ಇದ್ರೆ ಸ್ವಲ್ಪ ಬದಲಾಯಿಸಿಕೊಳ್ಳಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us