AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾಲಕ್ಕಿ ಬಾಳೆಹಣ್ಣಿಗೆ ಚಿನ್ನದ ಬೆಲೆ; ಟೊಮೆಟೊ, ದಾಳಿಂಬೆ ನಂತರ ಬಾಳೆತೋಟಕ್ಕೆ ಕಳ್ಳರ ಕಾಟ

ಟೊಮೆಟೊ, ದಾಳಿಂಬೆ, ಈರುಳ್ಳಿ ನಂತರ ಈಗ ಯಾಲಕ್ಕಿ ಬಾಳೆಹಣ್ಣಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಬಂದಿದೆ. ಇದರಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕು ಮಂಚೇನಹಳ್ಳಿಯಲ್ಲಿ ಕಳ್ಳರ ಕಣ್ಣು ರೈತರು ಬೆಳೆದ ಯಾಲಕ್ಕಿ ಬಾಳೆತೋಟಗಳ ಮೇಲೆ ಬಿದ್ದಿದೆ. ರಾತ್ರೋರಾತ್ರಿ ಬಾಳೆತೋಟಕ್ಕೆ ನುಗ್ಗಿ ಬಾಳೆಗೊನೆಗಳನ್ನು ಕಳ್ಳತನ ಮಾಡುತ್ತಿದ್ದಾರೆ. 

ಯಾಲಕ್ಕಿ ಬಾಳೆಹಣ್ಣಿಗೆ ಚಿನ್ನದ ಬೆಲೆ; ಟೊಮೆಟೊ, ದಾಳಿಂಬೆ ನಂತರ ಬಾಳೆತೋಟಕ್ಕೆ ಕಳ್ಳರ ಕಾಟ
ಯಾಲಕ್ಕಿ ಬಾಳೆಹಣ್ಣಿಗೆ ಕಳ್ಳರ ಕಾಟ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 23, 2023 | 9:52 PM

Share

ಚಿಕ್ಕಬಳ್ಳಾಪುರ, ನ.23: ರುಚಿ ಹಾಗೂ ಗುಣಮಟ್ಟಕ್ಕೆ ಯಾಲಕ್ಕಿ ಬಾಳೆಹಣ್ಣು ಖ್ಯಾತಿ ಪಡೆದಿದೆ. ಇನ್ನು ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಸುತ್ತಮುತ್ತ ಬೆಳೆಯುವ ಯಾಲಕ್ಕಿ ಬಾಳೆಹಣ್ಣು(Banana)ಗಳಿಗೆ ಹೆಚ್ಚಿನ ಡಿಮ್ಯಾಂಡ್ ಇದೆ. ರೈತರ ಬಾಳೆತೋಟಗಳಲ್ಲೇ ಕೆಜಿ ಬಾಳೆ ಗೊನೆಗೆ 60 ರೂಪಾಯಿಯಿಂದ 80 ರೂಪಾಯಿ ಬೆಲೆ ಇದೆ. ಇನ್ನು ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿ ಯಾಲಕ್ಕಿ ಬಾಳೆ ಹಣ್ಣಿಗೆ 90 ರೂಪಾಯಿಯಿಂದ ರಿಂದ 120 ರೂಪಾಯಿ ಬೆಲೆ ಇದೆ. ಇದರಿಂದ ಕಳ್ಳರು ರೈತರು ಬೆಳೆದ ಬಾಳೆತೋಟಕ್ಕೆ ನುಗ್ಗಿ ರಾತ್ರೋರಾತ್ರಿ ಬಾಳೆಗೊನೆಗಳನ್ನು ಕಳ್ಳತನ ಮಾಡುತ್ತಿದ್ದಾರೆ.

ಇನ್ನು ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಜಿ.ಬೊಮ್ಮಸಂದ್ರ ಗ್ರಾಮದ ರೈತ ಪದ್ಮನಾಭಯ್ಯನವರಿಗೆ ಸೇರಿದ ಬಾಳೆತೋಟ ಕಳ್ಳರ ಪಾಲಾಗಿದೆ. ರೈತ ಪದ್ಮನಾಭಯ್ಯ ಅವರು ಒಂದೂವರೆ ಎಕರೆಯಲ್ಲಿ ಒಂದೂವರೆ ಲಕ್ಷ ರೂಪಾಯಿ ಬಂಡವಾಳ ಹಾಕಿ ಬಾಳೆಹಣ್ಣು ಬೆಳೆದಿದ್ದಾರೆ. ಇನ್ನೇನು ಕಟಾವು ಮಾಡಿ ಮಾರುಕಟ್ಟೆಗೆ ಸಾಗಿಸಬೇಕೆನ್ನುವಷ್ಟರಲ್ಲಿ ತಲಾ 15 ಕೆಜಿ ತೂಕದ 150ಕ್ಕೂ ಹೆಚ್ಚು ಬಾಳೆಗೊನೆ ಸುಮಾರು ಒಂದೂವರೆ ಟನ್‍ನಷ್ಟು ಬಾಳೆಗೊನೆಗಳನ್ನು ಕಳ್ಳರು ಕಟಾವು ಮಾಡಿಕೊಂಡು ಪರಾರಿಯಾಗಿದ್ದಾರೆ.

ಇದನ್ನೂ ಓದಿ:ಬಾಳೆಹಣ್ಣು ಸುಲಿದಷ್ಟು ಸುಲಭವಲ್ಲ ಅದನ್ನು ತಿನ್ನುವುದು! ಜಸ್ಟ್​ ಎರಡು ನಿಮಿಷದಲ್ಲಿ ನೀವು ಎಷ್ಟು ಬಾಳೆಹಣ್ಣು ತಿನ್ನಬಲ್ಲಿರಿ?

ರೈತನಿಗೆ ವರ್ಷ, ದೊಣ್ಣೆಗೆ ನಿಮಿಷ ಎನ್ನುವ ಹಾಗೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಹಗಲು-ರಾತ್ರಿ ಕಷ್ಟಪಟ್ಟು ರೈತ ಯಾಲಕ್ಕಿ ಬಾಳೆ ಬೆಳೆದಿದ್ದಾನೆ. ಇದೀಗ ಕೈಗೆ ಬಂದ ತುತ್ತು ಬಾಯಿಗೆ ಬಂತು ಎನ್ನುವಷ್ಟರಲ್ಲಿ ಕಿಡಿಗೇಡಿ ಕಳ್ಳರು ಹುಲುಸಾದ ಬಾಳೆ ಕದ್ದಿದ್ದಾರೆ. ಇದರಿಂದ ನೊಂದಿರುವ ರೈತ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ