AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾಲಕ್ಕಿ ಬಾಳೆಹಣ್ಣಿಗೆ ಚಿನ್ನದ ಬೆಲೆ; ಟೊಮೆಟೊ, ದಾಳಿಂಬೆ ನಂತರ ಬಾಳೆತೋಟಕ್ಕೆ ಕಳ್ಳರ ಕಾಟ

ಟೊಮೆಟೊ, ದಾಳಿಂಬೆ, ಈರುಳ್ಳಿ ನಂತರ ಈಗ ಯಾಲಕ್ಕಿ ಬಾಳೆಹಣ್ಣಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಬಂದಿದೆ. ಇದರಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕು ಮಂಚೇನಹಳ್ಳಿಯಲ್ಲಿ ಕಳ್ಳರ ಕಣ್ಣು ರೈತರು ಬೆಳೆದ ಯಾಲಕ್ಕಿ ಬಾಳೆತೋಟಗಳ ಮೇಲೆ ಬಿದ್ದಿದೆ. ರಾತ್ರೋರಾತ್ರಿ ಬಾಳೆತೋಟಕ್ಕೆ ನುಗ್ಗಿ ಬಾಳೆಗೊನೆಗಳನ್ನು ಕಳ್ಳತನ ಮಾಡುತ್ತಿದ್ದಾರೆ. 

ಯಾಲಕ್ಕಿ ಬಾಳೆಹಣ್ಣಿಗೆ ಚಿನ್ನದ ಬೆಲೆ; ಟೊಮೆಟೊ, ದಾಳಿಂಬೆ ನಂತರ ಬಾಳೆತೋಟಕ್ಕೆ ಕಳ್ಳರ ಕಾಟ
ಯಾಲಕ್ಕಿ ಬಾಳೆಹಣ್ಣಿಗೆ ಕಳ್ಳರ ಕಾಟ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Nov 23, 2023 | 9:52 PM

Share

ಚಿಕ್ಕಬಳ್ಳಾಪುರ, ನ.23: ರುಚಿ ಹಾಗೂ ಗುಣಮಟ್ಟಕ್ಕೆ ಯಾಲಕ್ಕಿ ಬಾಳೆಹಣ್ಣು ಖ್ಯಾತಿ ಪಡೆದಿದೆ. ಇನ್ನು ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಸುತ್ತಮುತ್ತ ಬೆಳೆಯುವ ಯಾಲಕ್ಕಿ ಬಾಳೆಹಣ್ಣು(Banana)ಗಳಿಗೆ ಹೆಚ್ಚಿನ ಡಿಮ್ಯಾಂಡ್ ಇದೆ. ರೈತರ ಬಾಳೆತೋಟಗಳಲ್ಲೇ ಕೆಜಿ ಬಾಳೆ ಗೊನೆಗೆ 60 ರೂಪಾಯಿಯಿಂದ 80 ರೂಪಾಯಿ ಬೆಲೆ ಇದೆ. ಇನ್ನು ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿ ಯಾಲಕ್ಕಿ ಬಾಳೆ ಹಣ್ಣಿಗೆ 90 ರೂಪಾಯಿಯಿಂದ ರಿಂದ 120 ರೂಪಾಯಿ ಬೆಲೆ ಇದೆ. ಇದರಿಂದ ಕಳ್ಳರು ರೈತರು ಬೆಳೆದ ಬಾಳೆತೋಟಕ್ಕೆ ನುಗ್ಗಿ ರಾತ್ರೋರಾತ್ರಿ ಬಾಳೆಗೊನೆಗಳನ್ನು ಕಳ್ಳತನ ಮಾಡುತ್ತಿದ್ದಾರೆ.

ಇನ್ನು ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಜಿ.ಬೊಮ್ಮಸಂದ್ರ ಗ್ರಾಮದ ರೈತ ಪದ್ಮನಾಭಯ್ಯನವರಿಗೆ ಸೇರಿದ ಬಾಳೆತೋಟ ಕಳ್ಳರ ಪಾಲಾಗಿದೆ. ರೈತ ಪದ್ಮನಾಭಯ್ಯ ಅವರು ಒಂದೂವರೆ ಎಕರೆಯಲ್ಲಿ ಒಂದೂವರೆ ಲಕ್ಷ ರೂಪಾಯಿ ಬಂಡವಾಳ ಹಾಕಿ ಬಾಳೆಹಣ್ಣು ಬೆಳೆದಿದ್ದಾರೆ. ಇನ್ನೇನು ಕಟಾವು ಮಾಡಿ ಮಾರುಕಟ್ಟೆಗೆ ಸಾಗಿಸಬೇಕೆನ್ನುವಷ್ಟರಲ್ಲಿ ತಲಾ 15 ಕೆಜಿ ತೂಕದ 150ಕ್ಕೂ ಹೆಚ್ಚು ಬಾಳೆಗೊನೆ ಸುಮಾರು ಒಂದೂವರೆ ಟನ್‍ನಷ್ಟು ಬಾಳೆಗೊನೆಗಳನ್ನು ಕಳ್ಳರು ಕಟಾವು ಮಾಡಿಕೊಂಡು ಪರಾರಿಯಾಗಿದ್ದಾರೆ.

ಇದನ್ನೂ ಓದಿ:ಬಾಳೆಹಣ್ಣು ಸುಲಿದಷ್ಟು ಸುಲಭವಲ್ಲ ಅದನ್ನು ತಿನ್ನುವುದು! ಜಸ್ಟ್​ ಎರಡು ನಿಮಿಷದಲ್ಲಿ ನೀವು ಎಷ್ಟು ಬಾಳೆಹಣ್ಣು ತಿನ್ನಬಲ್ಲಿರಿ?

ರೈತನಿಗೆ ವರ್ಷ, ದೊಣ್ಣೆಗೆ ನಿಮಿಷ ಎನ್ನುವ ಹಾಗೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಹಗಲು-ರಾತ್ರಿ ಕಷ್ಟಪಟ್ಟು ರೈತ ಯಾಲಕ್ಕಿ ಬಾಳೆ ಬೆಳೆದಿದ್ದಾನೆ. ಇದೀಗ ಕೈಗೆ ಬಂದ ತುತ್ತು ಬಾಯಿಗೆ ಬಂತು ಎನ್ನುವಷ್ಟರಲ್ಲಿ ಕಿಡಿಗೇಡಿ ಕಳ್ಳರು ಹುಲುಸಾದ ಬಾಳೆ ಕದ್ದಿದ್ದಾರೆ. ಇದರಿಂದ ನೊಂದಿರುವ ರೈತ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ