AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾಲಕ್ಕಿ ಬಾಳೆಹಣ್ಣಿಗೆ ಚಿನ್ನದ ಬೆಲೆ; ಟೊಮೆಟೊ, ದಾಳಿಂಬೆ ನಂತರ ಬಾಳೆತೋಟಕ್ಕೆ ಕಳ್ಳರ ಕಾಟ

ಟೊಮೆಟೊ, ದಾಳಿಂಬೆ, ಈರುಳ್ಳಿ ನಂತರ ಈಗ ಯಾಲಕ್ಕಿ ಬಾಳೆಹಣ್ಣಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಬಂದಿದೆ. ಇದರಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕು ಮಂಚೇನಹಳ್ಳಿಯಲ್ಲಿ ಕಳ್ಳರ ಕಣ್ಣು ರೈತರು ಬೆಳೆದ ಯಾಲಕ್ಕಿ ಬಾಳೆತೋಟಗಳ ಮೇಲೆ ಬಿದ್ದಿದೆ. ರಾತ್ರೋರಾತ್ರಿ ಬಾಳೆತೋಟಕ್ಕೆ ನುಗ್ಗಿ ಬಾಳೆಗೊನೆಗಳನ್ನು ಕಳ್ಳತನ ಮಾಡುತ್ತಿದ್ದಾರೆ. 

ಯಾಲಕ್ಕಿ ಬಾಳೆಹಣ್ಣಿಗೆ ಚಿನ್ನದ ಬೆಲೆ; ಟೊಮೆಟೊ, ದಾಳಿಂಬೆ ನಂತರ ಬಾಳೆತೋಟಕ್ಕೆ ಕಳ್ಳರ ಕಾಟ
ಯಾಲಕ್ಕಿ ಬಾಳೆಹಣ್ಣಿಗೆ ಕಳ್ಳರ ಕಾಟ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 23, 2023 | 9:52 PM

Share

ಚಿಕ್ಕಬಳ್ಳಾಪುರ, ನ.23: ರುಚಿ ಹಾಗೂ ಗುಣಮಟ್ಟಕ್ಕೆ ಯಾಲಕ್ಕಿ ಬಾಳೆಹಣ್ಣು ಖ್ಯಾತಿ ಪಡೆದಿದೆ. ಇನ್ನು ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಸುತ್ತಮುತ್ತ ಬೆಳೆಯುವ ಯಾಲಕ್ಕಿ ಬಾಳೆಹಣ್ಣು(Banana)ಗಳಿಗೆ ಹೆಚ್ಚಿನ ಡಿಮ್ಯಾಂಡ್ ಇದೆ. ರೈತರ ಬಾಳೆತೋಟಗಳಲ್ಲೇ ಕೆಜಿ ಬಾಳೆ ಗೊನೆಗೆ 60 ರೂಪಾಯಿಯಿಂದ 80 ರೂಪಾಯಿ ಬೆಲೆ ಇದೆ. ಇನ್ನು ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿ ಯಾಲಕ್ಕಿ ಬಾಳೆ ಹಣ್ಣಿಗೆ 90 ರೂಪಾಯಿಯಿಂದ ರಿಂದ 120 ರೂಪಾಯಿ ಬೆಲೆ ಇದೆ. ಇದರಿಂದ ಕಳ್ಳರು ರೈತರು ಬೆಳೆದ ಬಾಳೆತೋಟಕ್ಕೆ ನುಗ್ಗಿ ರಾತ್ರೋರಾತ್ರಿ ಬಾಳೆಗೊನೆಗಳನ್ನು ಕಳ್ಳತನ ಮಾಡುತ್ತಿದ್ದಾರೆ.

ಇನ್ನು ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಜಿ.ಬೊಮ್ಮಸಂದ್ರ ಗ್ರಾಮದ ರೈತ ಪದ್ಮನಾಭಯ್ಯನವರಿಗೆ ಸೇರಿದ ಬಾಳೆತೋಟ ಕಳ್ಳರ ಪಾಲಾಗಿದೆ. ರೈತ ಪದ್ಮನಾಭಯ್ಯ ಅವರು ಒಂದೂವರೆ ಎಕರೆಯಲ್ಲಿ ಒಂದೂವರೆ ಲಕ್ಷ ರೂಪಾಯಿ ಬಂಡವಾಳ ಹಾಕಿ ಬಾಳೆಹಣ್ಣು ಬೆಳೆದಿದ್ದಾರೆ. ಇನ್ನೇನು ಕಟಾವು ಮಾಡಿ ಮಾರುಕಟ್ಟೆಗೆ ಸಾಗಿಸಬೇಕೆನ್ನುವಷ್ಟರಲ್ಲಿ ತಲಾ 15 ಕೆಜಿ ತೂಕದ 150ಕ್ಕೂ ಹೆಚ್ಚು ಬಾಳೆಗೊನೆ ಸುಮಾರು ಒಂದೂವರೆ ಟನ್‍ನಷ್ಟು ಬಾಳೆಗೊನೆಗಳನ್ನು ಕಳ್ಳರು ಕಟಾವು ಮಾಡಿಕೊಂಡು ಪರಾರಿಯಾಗಿದ್ದಾರೆ.

ಇದನ್ನೂ ಓದಿ:ಬಾಳೆಹಣ್ಣು ಸುಲಿದಷ್ಟು ಸುಲಭವಲ್ಲ ಅದನ್ನು ತಿನ್ನುವುದು! ಜಸ್ಟ್​ ಎರಡು ನಿಮಿಷದಲ್ಲಿ ನೀವು ಎಷ್ಟು ಬಾಳೆಹಣ್ಣು ತಿನ್ನಬಲ್ಲಿರಿ?

ರೈತನಿಗೆ ವರ್ಷ, ದೊಣ್ಣೆಗೆ ನಿಮಿಷ ಎನ್ನುವ ಹಾಗೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಹಗಲು-ರಾತ್ರಿ ಕಷ್ಟಪಟ್ಟು ರೈತ ಯಾಲಕ್ಕಿ ಬಾಳೆ ಬೆಳೆದಿದ್ದಾನೆ. ಇದೀಗ ಕೈಗೆ ಬಂದ ತುತ್ತು ಬಾಯಿಗೆ ಬಂತು ಎನ್ನುವಷ್ಟರಲ್ಲಿ ಕಿಡಿಗೇಡಿ ಕಳ್ಳರು ಹುಲುಸಾದ ಬಾಳೆ ಕದ್ದಿದ್ದಾರೆ. ಇದರಿಂದ ನೊಂದಿರುವ ರೈತ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ