AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಮಹಿಳಾ ಸ್ವಸಹಾಯ ಸಂಘಗಳ ಹಣ ದುರುಪಯೋಗಪಡಿಸಿಕೊಂಡ ಬ್ಯಾಂಕ್ ಸಿಬ್ಬಂದಿ

ಮಹಿಳಾ ಸ್ವಸಹಾಯ ಸಂಘಗಳು ಸ್ಥಳೀಯ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್​​​ನಿಂದ ಸಾಲ ಪಡೆಯಲು ಠೇವಣಿ ಹಣವನ್ನು ಬ್ಯಾಂಕ್​​ಗೆ ಜಮೆ ಮಾಡಿದ್ದರು. ಆದರೆ ಬ್ಯಾಂಕ್ ಸಿಬ್ಬಂದಿ ಹಾಗೂ ಡೈರೆಕ್ಟರ್​ಗಳು ಮಹಿಳಾ ಸಂಘಗಳಿಗೆ ಸಾಲ ನೀಡುವುದಿರಲಿ, ಸಂಘಗಳು ಜಮೆ ಮಾಡಿದ್ದ ಹಣವನ್ನು ದುರುಪಯೋಗ ಮಾಡಿಕೊಂಡ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ: ಮಹಿಳಾ ಸ್ವಸಹಾಯ ಸಂಘಗಳ ಹಣ ದುರುಪಯೋಗಪಡಿಸಿಕೊಂಡ ಬ್ಯಾಂಕ್ ಸಿಬ್ಬಂದಿ
ಚಿಕ್ಕಬಳ್ಳಾಪುರ: ಮಹಿಳಾ ಸ್ವಸಹಾಯ ಸಂಘಗಳ ಹಣ ದುರುಪಯೋಗಪಡಿಸಿಕೊಂಡ ಬ್ಯಾಂಕ್ ಸಿಬ್ಬಂದಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jan 25, 2025 | 4:14 PM

Share

ಚಿಕ್ಕಬಳ್ಳಾಪುರ, ಜನವರಿ 25: ಚಿಕ್ಕಬಳ್ಳಾಪುರ ತಾಲೂಕಿನ ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಸಾಲ ಪಡೆಯಲು ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್​​​ಗೆ, ಲಕ್ಷ ಲಕ್ಷ ರೂಪಾಯಿ ಹಣವನ್ನು ಜಮೆ ಮಾಡಿದ್ದರು. ಲಕ್ಕನಾಯಕ್ಕನಹಳ್ಳಿ, ರೇಣುಮಾಕಲಹಳ್ಳಿ, ಗುಂಡ್ಲುಗುರ್ಕಿ ಸೇರಿದಂತೆ ಐದಾರು ಹಳ್ಳಿಗಳ ಐದಕ್ಕೂ ಹೆಚ್ಚು ಗ್ರಾಮದ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಹಣವನ್ನು ಜಮೆ ಮಾಡಿ ಠೇವಣಿ ಇಟ್ಟಿದ್ದರು. ನಂತರ ಸಾಲ ಕೇಳಲು ಬ್ಯಾಂಕ್ ಬಳಿ ಹೋದರೆ ಬ್ಯಾಂಕ್ ಸಿಬ್ಬಂದಿ ಬೀಗ ಜಡಿದು ಪರಾರಿಯಾಗಿದ್ದರು!

ಇದರಿಂದ ಅನುಮಾನಗೊಂಡು ಪರಿಶೀಲನೆ ನಡೆಸಿದರೆ ಮಹಿಳಾ ಸಂಘಗಳ ಜಮೆ ಹಣ ಬ್ಯಾಂಕ್​ನಲ್ಲಿ ಇರಲಿಲ್ಲ, ಸುಮಾರು ಹತ್ತು ಲಕ್ಷ ರೂಪಾಯಿ ಹಣವನ್ನು ಸ್ವತಃ ಬ್ಯಾಂಕ್ ಸಿಬ್ಬಂದಿ ದುರುಪಯೋಗಪಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ.

ಇನ್ನು ಮಹಿಳಾ ಸ್ವಸಹಾಯ ಸಂಘಗಳ ಹಣ ದುರುಪಯೋಗ ಸುದ್ದಿ ತಿಳಿಯುತ್ತಿದ್ದಂತೆಯೇ ಮಹಿಳೆಯರು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಕಾರ್ಯದರ್ಶಿ ಕಾರ್ತಿಕ್​​ರನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ.

ಕಾಂಗ್ರೆಸ್​ ಮುಖಂಡಗೆ ಅನಧಿಕೃತವಾಗಿ ಹಣ

ಹಣ ದುರುಪಯೋಗ ಮಾಡಿರುವುದನ್ನು ಕಾರ್ತಿಕ್ ಒಪ್ಪಿಕೊಂಡಿದ್ದಾರೆ. ಸುಮಾರು ಆರು ಲಕ್ಷ ರೂಪಾಯಿ ಹಣವನ್ನು ಬ್ಯಾಂಕ್ ನಿರ್ದೇಶಕ ಹಾಗೂ ಕಾಂಗ್ರೆಸ್ ಮುಖಂಡ ಸುಬ್ಬರಾಯಪ್ಪ ಅನಧಿಕೃತವಾಗಿ ಪಡೆದಿದ್ದು ಅವರು ಹಣ ನೀಡಿದ ತಕ್ಷಣ ಮಹಿಳಾ ಸ್ವಸಹಾಯ ಸಂಘಗಳಿಗೆ ಹಣ ನೀಡುವುದಾಗಿ ತಿಳಿಸಿದ್ದಾನೆ.

ಇದನ್ನೂ ಓದಿ: ಮೈಕ್ರೋ ಫೈನಾನ್ಸ್‌ ಹಾವಳಿ: ಸಿಎಂ ಸಿದ್ದರಾಮಯ್ಯ ನೇತೃತ್ವದ ಉನ್ನತ ಮಟ್ಟದ ಸಭೆಯಲ್ಲಿ ಏನೇನು ಚರ್ಚೆಯಾಯ್ತ? ಇಲ್ಲಿದೆ ಮಾಹಿತಿ

ಒಟ್ಟಿನಲ್ಲಿ ಮೈಕ್ರೋ ಪೈನಾನ್ಸ್​​​ಗಳಿಂದ ಸಾಲ ಪಡೆದರೆ ಕಿರುಕುಳ ಹೆಚ್ಚಾಗುತ್ತದೆ ಎಂದು ಸ್ಥಳಿಯ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್​ನಿಂದ ಸಾಲ ಪಡೆಯಲು ಠೇವಣಿ ಹಣ ಜಮೆ ಮಾಡಿದರೆ ಸಹಕಾರ ಬ್ಯಾಂಕ್​​ನಿಂದಲೂ ಮಹಾ ಮೋಸವಾಗಿರುವುದು ವಿಪರ್ಯಾಸ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ