AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ ಕೆ ಸುಧಾಕರ್​ ಪತ್ನಿಗೆ ಡಿಜಿಟಲ್ ಅರೆಸ್ಟ್: 14 ಲಕ್ಷ ರೂ ವಂಚನೆ

ನಿತ್ಯ ಒಂದಿಲ್ಲೊಂದು ಸೈಬರ್ ವಂಚನೆ ಪ್ರಕರಣಗಳು ವರದಿ ಆಗುತ್ತಿವೆ. ಈ ಸೈಬರ್ ವಂಚನೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಜನ ಸಾಮಾನ್ಯರಿಂದ ಹಿಡಿದು ಸ್ಟಾರ್ ನಟ-ನಟಿಯರು ಸೇರಿದಂತೆ ರಾಜಕಾರಣಿಗಳನ್ನು ಟಾರ್ಗೆಟ್​ ಮಾಡುತ್ತಿದ್ದಾರೆ. ಇದೀಗ ಬಿಜೆಪಿ ಸಂಸದರ​ ಪತ್ನಿಗೆ ಡಿಜಿಟಲ್ ಅರೆಸ್ಟ್ ಮಾಡಿ ಲಕ್ಷಾಂತರ ರೂ ಹಣ ದೋಚಿದ್ದಾರೆ.

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ ಕೆ ಸುಧಾಕರ್​ ಪತ್ನಿಗೆ ಡಿಜಿಟಲ್ ಅರೆಸ್ಟ್: 14 ಲಕ್ಷ ರೂ ವಂಚನೆ
ಡಾ.ಪ್ರಿಯಾ
ಗಂಗಾಧರ​ ಬ. ಸಾಬೋಜಿ
| Edited By: |

Updated on:Sep 22, 2025 | 3:51 PM

Share

ಬೆಂಗಳೂರು, ಸೆಪ್ಟೆಂಬರ್​ 22: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್​ ಪತ್ನಿಗೆ (k sudhakar wife) ಡಿಜಿಟಲ್ ಅರೆಸ್ಟ್ (Digital arrest) ಮಾಡಿ ವಂಚಕರು ಬರೋಬ್ಬರಿ 14 ಲಕ್ಷ ರೂ ಹಣ ದೋಚಿರುವಂತಹ ಘಟನೆ ಬೆಳಕಿಗೆ ಬಂದಿದೆ. ಆ.26ರಂದೇ ಪಶ್ಚಿಮ ಸೈಬರ್ ಠಾಣೆಗೆ ಡಾ.ಪ್ರಿಯಾ ದೂರು ನೀಡಿದ್ದರು. ಗೋಲ್ಡನ್ ಅವರ್​ನಲ್ಲಿ ದೂರು‌ ನೀಡಿದ್ದರಿಂದ 14 ಲಕ್ಷ ರೂ ಹಣ ಕೂಡ ವಾಪಸ್ ಬಂದಿದೆ. ಸದ್ಯ ಸೈಬರ್​ ವಂಚಕರ ಜಾಲ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಬಿಜೆಪಿ ಸಂಸದ ಡಾ.ಕೆ.ಸುಧಾಕರ್​ ಪತ್ನಿ ಡಾ.ಪ್ರಿಯಾ ಅವರಿಗೆ ಆಗಸ್ಟ್ 26ರಂದು ಸೈಬರ್ ವಂಚಕರಿಂದ ಫೋನ್​ ಕಾಲ್​ ಬಂದಿದೆ. ನಾವು ಮುಂಬೈ ಸೈಬರ್​ ಡಿಪಾರ್ಟ್ಮೆಂಟ್ ಸಿಬ್ಬಂದಿ ಎಂದು ಹೇಳಿಕೊಂಡು ವಂಚಿಸಿದ್ದಾರೆ.

ವಂಚಿಸಿದ್ದು ಹೇಗೆ

ಅಪರಿಚಿತ ವ್ಯಕ್ತಿಯೊಬ್ಬ ನಿಮ್ಮ ದಾಖಲೆಗಳನ್ನು ಬಳಸಿಕೊಂಡಿದ್ದಾರೆ. ನಿಮ್ಮ ಹೆಸರಲ್ಲಿ ಕ್ರೆಡಿಟ್ ಕಾರ್ಡ್ ಮಾಡಿಸಿ ಅಕ್ರಮವಾಗಿ ವರ್ಗಾವಣೆ ಮಾಡಿದ್ದಾನೆ ಎಂದು ಸೈಬರ್​​ ವಂಚಕರು ಕಥೆ ಕಟ್ಟಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಹಬ್ಬದ ಸಂದರ್ಭದಲ್ಲಿ ಆ್ಯಕ್ಟೀವ್ ಆದ ಸೈಬರ್​ ವಂಚಕರು: ಬ್ಯಾಂಕ್​​​ ಆಫರ್​​ ಹೆಸರಿನಲ್ಲಿ ವಂಚನೆ​​

ಇನ್ನು ವಂಚನೆಗೆ ಒಳಗಾಗಿರುವುದು ಗೊತ್ತಾಗುತ್ತಿದ್ದಂತೆ ರಾಷ್ಟ್ರೀಯ ಸೈಬರ್ ಸಹಾಯವಾಣಿ 1930ನಲ್ಲಿ ಡಾ. ಪ್ರಿಯಾ ದೂರು ದಾಖಲಿಸಿದ್ದರು. ಇದರಿಂದ ತಕ್ಷಣ ಹಣ ವರ್ಗಾವಣೆಯಾಗಿದ್ದ ಅಕೌಂಟ್ ಫ್ರೀಜ್ ಆಗಿದೆ. ಬಳಿಕ ಹಣ ವಾಪಸ್​ಗೆ ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು.

ಇದನ್ನೂ ಓದಿ: ಹಿರಿಯ ಐಎಎಸ್ ಅಧಿಕಾರಿ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ; ಸೈಬರ್ ಪೊಲೀಸರ ಮೊರೆ ಹೋದ ಮಣಿವಣ್ಣನ್!

ಸೆ.3ರಂದು ಹಣ ವಾಪಸ್ ಮಾಡಲು ಸಂಬಂಧಪಟ್ಟ ಬ್ಯಾಂಕ್​ಗೆ ಕೋರ್ಟ್ ಆದೇಶಿಸಿದೆ. ಇದರಿಂದ ಸಂಪೂರ್ಣ 14 ಲಕ್ಷ ರೂ. ಹಣ ಕೂಡ ವಾಪಸ್ ಬಂದಿದೆ. ಸದ್ಯ ಸೈಬರ್​ ವಂಚಕರ ಜಾಲ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಐಎಎಸ್ ಅಧಿಕಾರಿ ಹೆಸರಲ್ಲೂ ವಂಚನೆ

ಇನ್ನು ಇತ್ತೀಚೆಗೆ ಹಿರಿಯ ಐಎಎಸ್ ಅಧಿಕಾರಿ ಮೇಜರ್ ಮಣಿವಣ್ಣನ್​ಗೆ ಸೈಬರ್ ವಂಚಕರು ವಂಚಿಸಿದ್ದರು.  ಅವರ ಹೆಸರಿನಲ್ಲಿ ಫೇಸ್ ಬುಕ್ ಖಾತೆ ತೆರೆದು ಫರ್ನಿಚರ್ ಮಾರಾಟದ ಹೆಸರಿನಲ್ಲಿ ಅವರ ಆಪ್ತರಿಗೆ ವಂಚಿಸಲಾಗಿತ್ತು. ಬಳಿಕ ಆರೋಪಿಗಳ ಪತ್ತೆ ಮಾಡಿ ಅಕೌಂಟ್ ಡಿಆ್ಯಕ್ಟಿವೇಟ್ ಮಾಡುವಂತೆ ಪೊಲೀಸರಲ್ಲಿ ಮಣಿವಣ್ಣನ್ ಮನವಿ ಮಾಡಿಕೊಂಡಿದ್ದರು.

ವರದಿ: ಪ್ರದೀಪ್​ ಚಿಕ್ಕಾಟೆ, ಟಿವಿ9 ಬೆಂಗಳೂರು 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:59 pm, Mon, 22 September 25

Follow Us
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!