AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ KSRTC ಬಸ್​​ಗೆ ನುಗ್ಗಿ ಬ್ಯಾಗ್​​ ಕದ್ದು ಎಸ್ಕೇಪ್​: ಕಳುವಾಗಿದ್ದು ಅರ್ಧಕೋಟಿ ಹಣ!

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂಪಾಯಿ ನಗದು ಕಳ್ಳತನವಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಉದ್ಯಮಿಯೊಬ್ಬರು ಮನೆಯ ಮಾರಾಟದಿಂದ ಬಂದ ಹಣವನ್ನು ಬಸ್‌ನಲ್ಲಿ ಕೊಂಡೊಯ್ಯುತ್ತಿದ್ದಾಗ ಕಳ್ಳರು ದೋಚಿ ಪರಾರಿಯಾಗಿದ್ದಾರೆ. ನಕಲಿ ನಂಬರ್ ಪ್ಲೇಟ್ ಕಾರು ಬಳಸಿ ಕೃತ್ಯ ಎಸಗಲಾಗಿದೆ. ಪೊಲೀಸರು ಆರೋಪಿಗಾಗಿ ತನಿಖೆ ನಡೆಸುತ್ತಿದ್ದು, ಇದು ರಾಜ್ಯದಲ್ಲಿ ನಡೆದ ಮತ್ತೊಂದು ದೊಡ್ಡ ನಗದು ಕಳ್ಳತನ ಪ್ರಕರಣವಾಗಿದೆ.

ಚಿಕ್ಕಬಳ್ಳಾಪುರದಲ್ಲಿ KSRTC ಬಸ್​​ಗೆ ನುಗ್ಗಿ ಬ್ಯಾಗ್​​ ಕದ್ದು ಎಸ್ಕೇಪ್​: ಕಳುವಾಗಿದ್ದು ಅರ್ಧಕೋಟಿ ಹಣ!
ಬಸ್​​ನಲ್ಲಿದ್ದ ಹಣ ಕಳವು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Dec 19, 2025 | 7:59 AM

Share

ಚಿಕ್ಕಬಳ್ಳಾಪುರ, ಡಿಸೆಂಬರ್​​ 19: ಬೆಂಗಳೂರಲ್ಲಿ ಎಟಿಂಗೆ ಹಣ ಸಾಗಿಸುತ್ತಿದ್ದ ವಾಹನವನ್ನು ಹಾಡಹಗಲೇ ತಡೆದು ಕೋಟ್ಯಾಂತರ ರೂಪಾಯಿ ದರೋಡೆ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಕೆಎಸ್​​ಆರ್​ಟಿಸಿ ಬಸ್​ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ನಗದನ್ನು ಕದ್ದು ಕಳ್ಳರು ಎಸ್ಕೇಪ್​​ ಆಗಿದ್ದಾರೆ. ಕಳುವಾದ ಹಣ ಉದ್ಯಮಿಯೋರ್ವರಿಗೆ ಸೇರಿದ್ದು ಎನ್ನಲಾಗಿದೆ.

ಬೆಂಗಳೂರಿನಿಂದ ಹೈದರಾಬಾದ್​ಗೆ ಹೊರಟಿದ್ದ ಕೆಎಸ್​​ಆರ್​ಟಿಸಿ ಬಸ್ ಅನ್ನು ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಪ್ರಯಾಣಿಕರ ಊಟಕ್ಕೆಂದು ಕೆಎ 57 ಎಫ್​-3911 ಸಂಖ್ಯೆಯ ಬಸ್​​ ನಿಲ್ಲಿಸಲಾಗಿತ್ತು. ಊಟಕ್ಕೆಂದು ಕೆಳಗೆ ಇಳಿದು ಬರೋವಷ್ಟರಲ್ಲಿ ಸೀಟ್​​ನಲ್ಲಿ ಇಟ್ಟಿದ್ದ ಹಣದ ಬ್ಯಾಗ್​​ ನಾಪತ್ತೆಯಾಗಿದೆ. ಕಳುವಾದ ಹಣ ಹೈದರಾಬಾದ್ ಮೂಲದ ಉದ್ಯಮಿ ಕೆ.ವೆಂಕಟೇಶ್ವರ ರಾವ್​ಗೆ ಸೇರಿದ್ದು, ಬೆಂಗಳೂರಿನಲ್ಲಿದ್ದ ಮನೆ ಮಾರಾಟದಿಂದ ಬಂದಿದ್ದ ನಗದನ್ನು ಅವರು ಕೊಂಡೊಯ್ಯುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ:

ಕ್ಷಣಮಾತ್ರದಲ್ಲಿ ಹಣಕದ್ದು ಎಸ್ಕೇಪ್​​

ಟಾಟಾ ಇಂಡಿಕಾ ಕಾರಿನಲ್ಲಿ ಬಂದಿದ್ದ ವ್ಯಕ್ತಿ ಹಣ ದೋಚಿದ್ದಾನೆ ಎಂದು ಬಸ್​ನಲ್ಲಿದ್ದ ಇತರ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ. ಕಾರಿನಿಂದ ಇಳಿದು ನೇರವಾಗಿ ಬಸ್​ನೊಳಗೆ ನುಗ್ಗಿದ್ದ ವ್ಯಕ್ತಿ ಸೀಟ್ ನಂ.4ರಲ್ಲಿದ್ದ ಬ್ಯಾಗ್ ತೆಗೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಪೆರೇಸಂದ್ರ ಠಾಣೆಗೆ ಉದ್ಯಮಿ ಕೆ.ವೆಂಕಟೇಶ್ವರ ರಾವ್ ದೂರು ನೀಡಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕಾರಿಗೆ ನಕಲಿ ನಂಬರ್ ಪ್ಲೇಟ್ ಬಳಸಿ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:59 am, Fri, 19 December 25

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ