AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲವಾಗಿ ಕಬಾಬ್ ಕೊಡದಿದ್ದಕ್ಕೆ ಅಡುಗೆ ಭಟ್ಟನ ಮೇಲೆ ಮನಸ್ಸೋ ಇಚ್ಛೆ ಹಲ್ಲೆ

ಸಾಲವಾಗಿ ಕಬಾಬ್ ನೀಡದ್ದಕ್ಕೆ ಅಡುಗೆ ಭಟ್ಟನ ಮೇಲೆ ಪುಂಡರ ಗುಂಪೊಂದು ಕೈಗೆ ಸಿಕ್ಕ ಸಿಕ್ಕ ವಸ್ತುಗಳಿಂದ ಮಾರಣಾಂತಿಕ ಹಲ್ಲೆ ಮಾಡಿರುವಂತಹ ಘಟನೆ ಚಿಕ್ಕಬಳ್ಳಾಪುರದ ಎಪಿಎಂಸಿ ಮಾರುಕಟ್ಟೆ ಬಳಿ ನಡೆದಿದೆ. ಹಲ್ಲೆ ಮಾಡುತ್ತಿರುವ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಾಲವಾಗಿ ಕಬಾಬ್ ಕೊಡದಿದ್ದಕ್ಕೆ ಅಡುಗೆ ಭಟ್ಟನ ಮೇಲೆ ಮನಸ್ಸೋ ಇಚ್ಛೆ ಹಲ್ಲೆ
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Nov 02, 2025 | 8:35 PM

Share

ಚಿಕ್ಕಬಳ್ಳಾಪುರ, ನವೆಂಬರ್ 02: ಸಾಲವಾಗಿ ಕಬಾಬ್ (Kabab)​​ ನೀಡದ್ದಕ್ಕೆ ಪುಂಡರ ಗುಂಪೊಂದು ಅಡುಗೆ ಭಟ್ಟನ ಮೇಲೆ ಮನಸ್ಸೋ ಇಚ್ಛೆ ಹಲ್ಲೆ (Assault) ಮಾಡಿರುವಂತಹ ಘಟನೆ ನಗರದ ಎಪಿಎಂಸಿ ಮಾರುಕಟ್ಟೆ ಬಳಿ ನಡೆದಿದೆ. ಪುಂಡರ ಅಟ್ಟಹಾಸದ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಗಾಯಾಳು ಅಡುಗೆ ಭಟ್ಟ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ತಿಪ್ಪೇನಹಳ್ಳಿ ಮೂಲದ ಯುವಕ ಸುನೀಲ್, ಎಪಿಎಂಸಿ ಮಾರುಕಟ್ಟೆಯ ಚೇತನ್ ಬಾರ್ ಪಕ್ಕ ಹಲವು ವರ್ಷಗಳಿಂದ ಸಿರಿ ಎಂಬ ಹೆಸರಿನಲ್ಲಿ ಎಗ್​ರೈಸ್, ಕಬಾಬ್ ಹೋಟೆಲ್ ಇಟ್ಟುಕೊಂಡು ಬಿಸಿನೆಸ್ ಮಾಡುತ್ತಿದ್ದರು.

ಇದನ್ನೂ ಓದಿ: ಎಂಥ ಕಾಲ ನೋಡ್ರಪ್ಪಾ …ಬುದ್ಧಿ ಹೇಳಿದ್ದಕ್ಕೆ ಕುಚಿಕು ಗೆಳೆಯನನ್ನ ಹತ್ಯೆಗೈದ ಸ್ನೇಹಿತ

ಅವರ ಅಂಗಡಿಗೆ ಬಹುತೇಕರು ಬಾರ್​ಗೆ ಬರುವವರೇ ಹೋಗುತ್ತಾರೆ. ಮೂರು ನಾಲ್ಕು ದಿನಗಳಿಂದ ಕಣಜೇನಹಳ್ಳಿ ಗ್ರಾಮದ ನಾಗರಾಜು ಎಂಬಾತ ಸಮೀಪದ ಬಾರ್​ನಲ್ಲಿ ಕಂಠಪೂರ್ತಿ ಕುಡಿದು ಹೋಟೆಲ್​ ಬಳಿ ಬಂದು ಕಬಾಬ್​​ ಅನ್ನು ಸಾಲ ಕೇಳಿದ್ದಾರೆ. ಇದಕ್ಕೆ ಅಡುಗೆ ಭಟ್ಟ ಗಣೇಶ್​​, ಮಾಲೀಕರು ಇಲ್ಲ, ಅವರು ಬಂದ ನಂತರ ಸಾಲ ತೆಗೆದುಕೊಳ್ಳುವಂತೆ ಹೇಳಿದ್ದಾರೆ.

ಹಲ್ಲೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಇಷ್ಟಕ್ಕೆ ಆಕ್ರೋಶಗೊಂಡ ನಾಗರಾಜ್, ತನ್ನ ಹುಡುಗರನ್ನು ಸ್ಥಳಕ್ಕೆ ಕರೆಸಿ ಕೈಗೆ ಸಿಕ್ಕ ಸಿಕ್ಕ ವಸ್ತುಗಳಿಂದ ಗಣೇಶ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ತೀಪ್ಪೇನಹಳ್ಳಿ ಗ್ರಾಮದ ಸುನೀಲ್ ಜೀವನ ನಡೆಸಲು ಸಾಲಸೋಲ ಮಾಡಿ ಕಬಾಬ್, ಎಗ್​ರೈಸ್ ಹೋಟೆಲ್ ಇಟ್ಟುಕೊಂಡಿದ್ದರು. ಪ್ರತಿನಿತ್ಯ ಒಂದಿಷ್ಟು ಹಣ ಅಂತ ಸಂಪಾದನೆ ಮಾಡಿಕೊಳ್ಳುತ್ತಿದ್ದರು. ಆದರೆ ಕೆಲ ಮದ್ಯಪ್ರಿಯರು ಆಗಾಗ ಬಂದು ಕಬಾಬ್ ಅನ್ನು ಸಾಲವಾಗಿ ಪಡೆಯುತ್ತಿದ್ದರು. ಆದರೆ ಮೂರು ದಿನಗಳಿಂದ ನಾಗರಾಜ್ ಎಂಬುವವರು ಸಾಲಕ್ಕೆ ಕಬಾಬ್ ಕೇಳಿ ಗಲಾಟೆ ಮಾಡುತ್ತಿದ್ದರು.

ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ: ಸಾವಿನ ಕಾರಣ ನಿಗೂಢ

ಇಂದು ಹೋಟೆಲ್ ಬಳಿ ಗಣೇಶ್ ಒಬ್ಬರೇ ಇರುವಾಗ ನಾಗರಾಜ್ ಕುಡಿದು ಬಂದು ಹೋಟೆಲ್ ಬಳಿ ಗಲಾಟೆ ಮಾಡಿ ಹುಡುಗರನ್ನು ಕರೆಸಿ ಏನೂ ಅರಿಯದ ಗಣೇಶ್ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. ಇನ್ನು ಪುಂಡರ ಥಳಿತಕ್ಕೆ ಗಾಯಗೊಂಡ ಗಣೇಶ್, ಪ್ರಾಣ ರಕ್ಷಣೆಗೆ ಓಡಿಹೋಗಿ ಬಚ್ಚಿಟ್ಟುಕೊಂಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್