AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಕಾಂಕ್ರೀಟ್ ಕುಸಿತ ಪ್ರಕರಣ: ಕಾಮಗಾರಿ ತ್ವರಿತವಾಗಿ ಮುಗಿಸಲು ರಾತ್ರಿಪಾಳಿಯಲ್ಲೂ ಕೆಲಸ ಮಾಡಿರುವ ಶಂಕೆ

ಕಾಲೇಜು ನಿರ್ಮಾಣ ಕಾಮಗಾರಿ ವೇಳೆ ಕಾಂಕ್ರೀಟ್ ಕುಸಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಇಂಜಿನಿಯರ್ ತಿಳಿಸಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಕಾಂಕ್ರೀಟ್ ಕುಸಿತ ಪ್ರಕರಣ: ಕಾಮಗಾರಿ ತ್ವರಿತವಾಗಿ ಮುಗಿಸಲು ರಾತ್ರಿಪಾಳಿಯಲ್ಲೂ ಕೆಲಸ ಮಾಡಿರುವ ಶಂಕೆ
ಕುಸಿತಗೊಂಡ ಕಾಂಕ್ರೀಟ್ ಸ್ಲ್ಯಾಬ್ ಮತ್ತು ನಿರ್ಮಾಣ ಹಂತದ ಮೆಡಿಕಲ್ ಕಾಲೇಜು ಕಟ್ಟಡ
TV9 Web
| Updated By: Rakesh Nayak Manchi|

Updated on:Dec 25, 2022 | 6:53 AM

Share

ಚಿಕ್ಕಬಳ್ಳಾಪುರ: ನಿರ್ಮಾಣ ಹಂತದ ಸರ್ಕಾರಿ ಮೆಡಿಕಲ್ ಕಾಲೇಜಿನ (Government Medical College) ಕಾಮಗಾರಿ ವೇಳೆ 20X30 ಅಳತೆಯ ಕಾಂಕ್ರೀಟ್ ಸ್ಲ್ಯಾಬ್​​ ಕುಸಿತವಾಗಿದೆ (Concrete slab collapse) ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ (Chikkaballapura DC N.M.Nagaraj)​ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಕ್ರೀಟ್ ಹಾಕುವ ವೇಳೆ ಘಟನೆ ನಡೆದಿದೆ. ಇದಕ್ಕೆ ಏನು ಕಾರಣವೆಂದು ಇಂಜಿನಿಯರ್ ಹೇಳಬೇಕಿದೆ. ಕಾಂಕ್ರೀಟ್ ಹಾಕುವ ಸಂದರ್ಭದಲ್ಲಿ ಏಕಾಏಕಿ ಕುಸಿದುಬಿದ್ದಿದೆ. ಸಣ್ಣಪುಟ್ಟ ಲೋಪದೋಷಗಳು ಆಗಿರುತ್ತದೆ, ಸರಿಪಡಿಸುತ್ತಾರೆ. ಕಾಮಗಾರಿ ತ್ವರಿತವಾಗಿ ಮುಗಿಸಲು ಕಾರ್ಮಿಕರು ರಾತ್ರಿ ಪಾಳಿಯಲ್ಲೂ ಕೆಲಸ ಮಾಡಿರಬೇಕು. ಸುರಕ್ಷತಾ ಕ್ರಮ ಕೈಗೊಂಡಿದ್ದಾರೋ ಇಲ್ಲವೋ ಎಂದು ನೋಡುತ್ತೇವೆ. ನಿರ್ಲಕ್ಷ್ಯ ಮಾಡಿದ್ದರೆ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ: ಚಾಮರಾಜನಗರ: ಬಿಆರ್​ಟಿ ಅರಣ್ಯ ವಲಯದಲ್ಲಿ ಕರಡಿ ದಾಳಿಗೆ ದನಗಾಹಿ ಬಲಿ

ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದ ಬಳಿ ನಿರ್ಮಾಣ ಹಂತದ ಮೆಡಿಕಲ್ ಕಾಲೇಜು ಕಟ್ಟಡದ ಸ್ಲ್ಯಾಬ್​ ಕುಸಿದಿತ್ತು. ಈ ದುರ್ಘಟನೆಯಲ್ಲಿ 10 ಕಾರ್ಮಿಕರು ಗಾಯಗೊಂಡಿದ್ದರು. ಕೂಡಲೇ ಗಾಯಾಳು ಕಾರ್ಮಿಕರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಅದೃಷ್ಟವಶಾವತ್ ಕಾರ್ಮಿಕರು ಪ್ರಾಣಾಪಯದಿಂದ ಪಾರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 am, Sun, 25 December 22