AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಸುದ್ದಿಯಲ್ಲಿ ಶಾಸಕ ಪ್ರದೀಪ್ ಈಶ್ವರ್, ಸಿಗುತ್ತಾ ಸಚಿವ ಸ್ಥಾನ?

ಅಚ್ಚರಿ ಎಂಬಂತೆ ಪ್ರದೀಪ್ ಈಶ್ವರ್ ಅವರು ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಡಾ ಕೆ ಸುಧಾಕರ್ ಅವರನ್ನು ಸೋಲಿಸಿದ್ದಾರೆ. ಅಂದಿನ ಬಿಜೆಪಿಯ ಪ್ರಭಾವಿ ಮಂತ್ರಿಯಾಗಿದ್ದ ಸುಧಾಕರ್‌ರವರನ್ನು ಸೋಲಿಸಿ  ಎಲ್ಲರ ಹುಬ್ಬೇರುವಂತೆ ಮಾಡಿದ್ದು ಇತಿಹಾಸ. ರಾಜಕೀಯ ಪ್ರವೇಶ ಮಾಡಿದ ಮೊದಲ ಹಂತದಲ್ಲೇ ವಿಧಾಸಭೆ ಪ್ರವೇಶ ಮಾಡಿರುವ ಪ್ರದೀಪ್ ಈಶ್ವರ್, ತಮ್ಮ ಭಾಷಣ, ಮಾತುಗಳಿಂದಲೇ ಚಿರಪರಿಚಿತರಾಗಿದ್ದಾರೆ. ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.

ಮತ್ತೆ ಸುದ್ದಿಯಲ್ಲಿ ಶಾಸಕ ಪ್ರದೀಪ್ ಈಶ್ವರ್, ಸಿಗುತ್ತಾ ಸಚಿವ ಸ್ಥಾನ?
ಪ್ರದೀಪ್ ಈಶ್ವರ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jun 24, 2024 | 10:37 PM

Share

ಚಿಕ್ಕಬಳ್ಳಾಪುರ, (ಜೂನ್ 24) : ಒಂದೆಡೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಡಿಸಿಎಂ ಹುದ್ದೆ ಹೆಚ್ಚಿಸುವ ಬಗ್ಗೆ ಚರ್ಚೆ ಮತ್ತೆ ಜೋರಾಗಿದೆ. ಸಚಿವರಾದ ಕೆಎನ್ ರಾಜಣ್ಣ ಮತ್ತು ಸತೀಶ್ ಜಾರಕಿಹೊಳಿ ಅವರು ಡಿಸಿಎಂ ಹುದ್ದೆ ಹೆಚ್ಚಿಸಬೇಕೆಂದು ಹೈಕಮಾಂಡ್​ಗೆ ಮನವಿ ಮಾಡಿದ್ದಾರೆ. ಇದರ ಮಧ್ಯೆ ಇತ್ತ ಮತ್ತೆ ಸಚಿವ ಸಂಪುಟ ವಿಸ್ತರಣೆ ಮಾಡಿ ಪ್ರದೀಪ್ ಈಶ್ವರ್​ಗೆ ಮಂತ್ರ ಮಾಡಬೇಕೆಂಬ ಕೂಗು ಕೇಳಿಬಂದಿದೆ. ಹೌದು…  ಪ್ರದೀಪ್ ಈಶ್ವರ್ ಇದೇ ಮೊದಲ ಬಾರಿಗೆ ಶಾಸಕರಾಗಿದ್ದು, ಈ ಒಂದು ವರ್ಷ ಕಳೆದಿದೆ ಅಷ್ಟೇ. ಆಗಲೇ ಶಾಸಕ ಪ್ರದೀಪ್ ಈಶ್ವರ್​ಗೆ ಸಚಿವ ಸ್ಥಾನ ನೀಡುವಂತೆ ಚಿಕ್ಕಬಳ್ಳಾಪುರದಲ್ಲಿ ಬಲಿಜ ಸಮುದಾಯ ಒತ್ತಾಯಿಸಿದೆ.

ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದಲ್ಲಿ ಬಲಿಜ ಸಮುದಾಯ ಹಾಗೂ ಬೆಂಬಲಿಗರು ಸುದ್ದಿಗೋಷ್ಟಿ ನಡೆಸಿ, ರಾಜ್ಯದಲ್ಲಿ ಬಲಿಜ ಸಮುದಾಯದಲ್ಲಿ ಏಕೈಕ ಶಾಸಕ ಪ್ರದೀಪ್ ಈಶ್ವರ್. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಬೇಕು ಆಗ್ರಹಿಸಿದ್ದಾರೆ.

ಪ್ರಥಮ ಬಾರಿಗೆ ಶಾಸಕರಾಗಿದ್ದರೂ ಮಂತ್ರಿಸ್ಥಾನಕ್ಕೆ ಬೇಡಿಕೆ

ಇನ್ನು ಪ್ರದೀಪ್‌ ಈಶ್ವರ್ ಚಿಕ್ಕಬಳ್ಳಾಪುರದ ಶಾಸಕರಾಗಿ ಒಂದು ವರ್ಷವಾಗಿದೆ. ಶಾಸಕರಾಗಿ ಒಂದು ವರ್ಷವಾಗಿದೆ. ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಎಸ್.ಎನ್.ಸುಬ್ಬಾರೆಡ್ಡಿ ಮೂರು ಬಾರಿ ಶಾಸಕರಾಗಿದ್ದು, ಮಂತ್ರಿಸ್ಥಾನಕ್ಕಾಗಿ ಕಾದು ಕುಳಿತಿದ್ದಾರೆ. ಇನ್ನೂ ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿದ್ದ ಡಾ. ಎಂ.ಸಿ.ಸುಧಾಕರ್ ಹಾಲಿ ಸಚಿವರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಇನ್ನು ಗೌರಿಬಿದನೂರಿನಲ್ಲಿ ಪಕ್ಷೇತರ ಶಾಸಕರಾಗಿರುವ ಕೆ.ಹೆಚ್.ಪುಟ್ಟಸ್ವಾಮಿಗೌಡ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಆದರೂ ಶಾಸಕ ಪ್ರದೀಪ್‌ ಈಶ್ವರ್‌ಗೆ ಮಂತ್ರಿಸ್ಥಾನ ನೀಡುವಂತೆ ಶಾಸಕ ಪ್ರದೀಪ್‌ ಈಶ್ವರ್ ಬೆಂಬಲಿಗರು, ಬಲಿಜ ಸಮುದಾಯದ ಮುಖಂಡರು, ಅಹಿಂದ ಸಂಘಟನೆಗಳ ಕೆಲವು ಮುಖಂಡರು ಸುದ್ಧಿಗೋಷ್ಠಿ ನಡೆಸಿ ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯ ಮಾಡಿದರು.

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಜೋರಾಗುತ್ತಿದೆ ಡಿಸಿಎಂ ಫೈಟ್: ಶೀಘ್ರದಲ್ಲೇ ದೆಹಲಿಗೆ ಕಾಂಗ್ರೆಸ್ ನಾಯಕರು

ಅಹಿಂದ, ಬಲಿಜ, ಯುವ ಖೋಟಾದಡಿಯಲ್ಲಿ ಮಂತ್ರಿಸ್ಥಾನಕ್ಕೆ ಬೇಡಿಕೆ

ಇನ್ನು ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯಕಾಂಗ್ರೆಸ್‌ನಲ್ಲಿ 3-4 ಬಾರಿ ಶಾಸಕರಾದ ಹಿರಿಯ ಶಾಸಕರಿದ್ದಾರೆ. ಅವರವರದೇ ಖೋಟಾಗಳಲ್ಲಿ ಮಂತ್ರಿಸ್ಥಾನಕ್ಕಾಗಿ ಕಾದು ಕುಳಿತಿದ್ದಾರೆ. ಇಂತಹದ್ದರಲ್ಲಿ ಶಾಸಕ ಪ್ರದೀಪ್‌ಈಶ್ವರ್‌ಗೆ ಮಂತ್ರಿಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಾಯ ಮಾಡಲಾಗುತ್ತಿದೆ. ಪ್ರಥಮ ಬಾರಿಗೆ ಶಾಸಕರಾಗಿರುವ ಪ್ರದೀಪ್‌ಈಶ್ವರ್‌ಗೆ ಅಹಿಂದ, ಬಲಿಜ, ಯುವಖೋಟಾದಡಿಯಲ್ಲಿ ಮಂತ್ರಿಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:32 pm, Mon, 24 June 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್