AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೈರಿ ಸಿಬ್ಬಂದಿಯಿಂದಲೇ ನಂದಿನಿ ಹಾಲಿಗೆ ನೀರು ಬೆರಸಿ ವಂಚನೆ

ಚಿಕ್ಕಬಳ್ಳಾಪುರದ ಚಿಮುಲ್ ಡೈರಿಯಲ್ಲಿ ಹಾಲಿಗೆ ನೀರು ಮಿಶ್ರಣ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮಾಡಿಕೆರೆ ಡೈರಿಯ ಸಿಬ್ಬಂದಿ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಚಿಮುಲ್ ಎಂ.ಡಿ. ತನಿಖಾ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಮಾಡಿಕೆರೆ ಹಾಲಿನ ಡೈರಿ ಬಿ.ಎಂ.ಸಿ ಕೇಂದ್ರ ಸಹಾಯಕನನ್ನು ವಜಾ ಮಾಡಲಾಗಿದೆ.

ಡೈರಿ ಸಿಬ್ಬಂದಿಯಿಂದಲೇ ನಂದಿನಿ ಹಾಲಿಗೆ ನೀರು ಬೆರಸಿ ವಂಚನೆ
ಡೈರಿ ಸಿಬ್ಬಂದಿಯಿಂದಲೇ ನಂದಿನಿ ಹಾಲಿಗೆ ನೀರು ಬೆರಸಿ ವಂಚನೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jan 17, 2025 | 10:20 PM

Share

ಚಿಕ್ಕಬಳ್ಳಾಪುರ, ಜನವರಿ 17: ರೈತರು ಹಗಲು ರಾತ್ರಿ ಕಷ್ಟ ಪಟ್ಟು ಹೈನೋದ್ಯಮದ ಮೂಲಕ ಹಾಲಿನ (milk) ಡೈರಿಗಳಿಗೆ ಶುದ್ದ ಹಾಲು ಸರಬರಾಜು ಮಾಡಿದರೆ, ಇತ್ತ ಸ್ವತಃ ಡೈರಿಗಳ ಸಿಬ್ಬಂದಿಗಳು ಶುದ್ದ ಹಾಲಿಗೆ ನೀರು ಮಿಶ್ರಣ ಮಾಡಿ ಹಾಲಿನ ಒಕ್ಕೂಟ ಹಾಗೂ ನಂದಿನಿ ಹಾಲಿನ ಗ್ರಾಹಕರಿಗೆ ವಂಚನೆ ಮಾಡುತ್ತಿರುವ ಪ್ರಕರಣ ಬಯಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಾಡಿಕೆರೆ ಹಾಲಿನ ಡೈರಿ ಬಿ.ಎಂ.ಸಿ ಕೇಂದ್ರದಲ್ಲಿ ಹಸುವಿನ ಹಾಲಿಗೆ ಮನಸ್ಸೊ ಇಚ್ಚೆ ನೀರು ಮಿಶ್ರಣ ಮಾಡಿ ನಂದಿನಿ ಗ್ರಾಹಕರು ಹಾಗೂ ಚಿಮುಲ್​ಗೆ ವಂಚನೆ ಮಾಡಲು ಯತ್ನಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಹಾಲು ಉತ್ಪಾದನೆಯಲ್ಲಿ ಕುಂಠಿತ: ಹೈನೋದ್ಯಮದಿಂದ ವಿಮುಖರಾಗುತ್ತಿದ್ದಾರಾ ರೈತರು?

ಹೌದು ಸ್ವತಃ ಮಾಡಿಕೆರೆ ಹಾಲಿನ ಡೈರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು  ಹಾಲಿನ ಡಂಪ್ ಟ್ಯಾಂಲ್​ಗೆ ನೀರು ಕಲಬೆರಕೆ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದ ಮೆಗಾ ಡೈರಿಗೆ ಸರಬರಾಜು ಮಾಡಿ ಈಗ ಸಿಕ್ಕಿ ಬಿದ್ದಿದ್ದಾರೆ. ಸ್ವತಃ ಡೈರಿ ಸಿಬ್ಬಂದಿಗಳ ಕಳ್ಳಾಟವನ್ನು ಮತ್ತೊರ್ವ ಸಿಬ್ಬಂದಿ ತಮ್ಮ ಮೊಬೈಲ್​ನಲ್ಲಿ ರೆಕಾರ್ಡ ಮಾಡಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಇನ್ನೂ ಮಾಡಿಕೆರೆ ಹಾಲಿನ ಡೈರಿ ಬಿ.ಎಂ.ಸಿ ಕೇಂದ್ರದಲ್ಲಿ ನಡೆದಿದೆ ಎನ್ನಲಾದ ಹಾಲಿನ ಮಿಶ್ರಣ ಅಕ್ರಮ ವಿಚಾರ ಬಯಲಾಗುತ್ತಿದ್ದಂತೆ ಸ್ವತಃ ಚಿಮುಲ್ ಎಂ.ಡಿ. ಶ್ರೀನಿವಾಸಗೌಡ ಅಲರ್ಟ ಆಗಿದ್ದು, ಡೈರಿಯ ಸಹಾಯಕ ಚೇತನ್ ನನ್ನು ಕೆಲಸದಿಂದ ವಜಾ ಮಾಡಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಸರ್ಕಾರಿ ಬಾಲಕಿಯರ ಮಂದಿರದಲ್ಲಿ ರಾಕ್ಷಸೀಯ ಕೃತ್ಯಗಳು ಬಯಲು

ಹಾಗೂ ಹಾಲಿನ ಟ್ಯಾಂಕರ್ ನ ಚಾಲಕನ ಮಾರ್ಗ ಬದಲಾವಣೆ ಮಾಡಿ, ಹಾಲಿಗೆ ನೀರು ಮಿಶ್ರಣ ಕಳ್ಳಾಟ ತನಿಖೆಗೆ ಸಮಿತಿಯೊಂದನ್ನು ರಚಿಸಿದ್ದು, ಅಕ್ರಮ ತಡೆಗಟ್ಟುವ ಭರವಸೆ ನೀಡಿದ್ದಾರೆ. ನಂದಿನಿ ಹಾಲು ಹಾಗೂ ಅದರ ಉತ್ಪನ್ನಗಳು ಪರಿಶುದ್ದ ಅನ್ನೊ ಮಾತಿದೆ. ಇಂಥದರಲ್ಲಿ ಕೆಲವು ಡೈರಿ ಸಿಬ್ಬಂದಿಗಳು ದುರಾಸೆಗೆ ಬಿದ್ದು, ಹಾಲಿಗೆ ನೀರು ಮಿಶ್ರಣ ಮಾಡಿ ನಂದಿನಿ ನಂಬಿಕೆಗೆ ಧಕ್ಕೆ ತರುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್