AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೈರಿ ಸಿಬ್ಬಂದಿಯಿಂದಲೇ ನಂದಿನಿ ಹಾಲಿಗೆ ನೀರು ಬೆರಸಿ ವಂಚನೆ

ಚಿಕ್ಕಬಳ್ಳಾಪುರದ ಚಿಮುಲ್ ಡೈರಿಯಲ್ಲಿ ಹಾಲಿಗೆ ನೀರು ಮಿಶ್ರಣ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮಾಡಿಕೆರೆ ಡೈರಿಯ ಸಿಬ್ಬಂದಿ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಚಿಮುಲ್ ಎಂ.ಡಿ. ತನಿಖಾ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಮಾಡಿಕೆರೆ ಹಾಲಿನ ಡೈರಿ ಬಿ.ಎಂ.ಸಿ ಕೇಂದ್ರ ಸಹಾಯಕನನ್ನು ವಜಾ ಮಾಡಲಾಗಿದೆ.

ಡೈರಿ ಸಿಬ್ಬಂದಿಯಿಂದಲೇ ನಂದಿನಿ ಹಾಲಿಗೆ ನೀರು ಬೆರಸಿ ವಂಚನೆ
ಡೈರಿ ಸಿಬ್ಬಂದಿಯಿಂದಲೇ ನಂದಿನಿ ಹಾಲಿಗೆ ನೀರು ಬೆರಸಿ ವಂಚನೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jan 17, 2025 | 10:20 PM

Share

ಚಿಕ್ಕಬಳ್ಳಾಪುರ, ಜನವರಿ 17: ರೈತರು ಹಗಲು ರಾತ್ರಿ ಕಷ್ಟ ಪಟ್ಟು ಹೈನೋದ್ಯಮದ ಮೂಲಕ ಹಾಲಿನ (milk) ಡೈರಿಗಳಿಗೆ ಶುದ್ದ ಹಾಲು ಸರಬರಾಜು ಮಾಡಿದರೆ, ಇತ್ತ ಸ್ವತಃ ಡೈರಿಗಳ ಸಿಬ್ಬಂದಿಗಳು ಶುದ್ದ ಹಾಲಿಗೆ ನೀರು ಮಿಶ್ರಣ ಮಾಡಿ ಹಾಲಿನ ಒಕ್ಕೂಟ ಹಾಗೂ ನಂದಿನಿ ಹಾಲಿನ ಗ್ರಾಹಕರಿಗೆ ವಂಚನೆ ಮಾಡುತ್ತಿರುವ ಪ್ರಕರಣ ಬಯಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಾಡಿಕೆರೆ ಹಾಲಿನ ಡೈರಿ ಬಿ.ಎಂ.ಸಿ ಕೇಂದ್ರದಲ್ಲಿ ಹಸುವಿನ ಹಾಲಿಗೆ ಮನಸ್ಸೊ ಇಚ್ಚೆ ನೀರು ಮಿಶ್ರಣ ಮಾಡಿ ನಂದಿನಿ ಗ್ರಾಹಕರು ಹಾಗೂ ಚಿಮುಲ್​ಗೆ ವಂಚನೆ ಮಾಡಲು ಯತ್ನಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಹಾಲು ಉತ್ಪಾದನೆಯಲ್ಲಿ ಕುಂಠಿತ: ಹೈನೋದ್ಯಮದಿಂದ ವಿಮುಖರಾಗುತ್ತಿದ್ದಾರಾ ರೈತರು?

ಹೌದು ಸ್ವತಃ ಮಾಡಿಕೆರೆ ಹಾಲಿನ ಡೈರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು  ಹಾಲಿನ ಡಂಪ್ ಟ್ಯಾಂಲ್​ಗೆ ನೀರು ಕಲಬೆರಕೆ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದ ಮೆಗಾ ಡೈರಿಗೆ ಸರಬರಾಜು ಮಾಡಿ ಈಗ ಸಿಕ್ಕಿ ಬಿದ್ದಿದ್ದಾರೆ. ಸ್ವತಃ ಡೈರಿ ಸಿಬ್ಬಂದಿಗಳ ಕಳ್ಳಾಟವನ್ನು ಮತ್ತೊರ್ವ ಸಿಬ್ಬಂದಿ ತಮ್ಮ ಮೊಬೈಲ್​ನಲ್ಲಿ ರೆಕಾರ್ಡ ಮಾಡಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಇನ್ನೂ ಮಾಡಿಕೆರೆ ಹಾಲಿನ ಡೈರಿ ಬಿ.ಎಂ.ಸಿ ಕೇಂದ್ರದಲ್ಲಿ ನಡೆದಿದೆ ಎನ್ನಲಾದ ಹಾಲಿನ ಮಿಶ್ರಣ ಅಕ್ರಮ ವಿಚಾರ ಬಯಲಾಗುತ್ತಿದ್ದಂತೆ ಸ್ವತಃ ಚಿಮುಲ್ ಎಂ.ಡಿ. ಶ್ರೀನಿವಾಸಗೌಡ ಅಲರ್ಟ ಆಗಿದ್ದು, ಡೈರಿಯ ಸಹಾಯಕ ಚೇತನ್ ನನ್ನು ಕೆಲಸದಿಂದ ವಜಾ ಮಾಡಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಸರ್ಕಾರಿ ಬಾಲಕಿಯರ ಮಂದಿರದಲ್ಲಿ ರಾಕ್ಷಸೀಯ ಕೃತ್ಯಗಳು ಬಯಲು

ಹಾಗೂ ಹಾಲಿನ ಟ್ಯಾಂಕರ್ ನ ಚಾಲಕನ ಮಾರ್ಗ ಬದಲಾವಣೆ ಮಾಡಿ, ಹಾಲಿಗೆ ನೀರು ಮಿಶ್ರಣ ಕಳ್ಳಾಟ ತನಿಖೆಗೆ ಸಮಿತಿಯೊಂದನ್ನು ರಚಿಸಿದ್ದು, ಅಕ್ರಮ ತಡೆಗಟ್ಟುವ ಭರವಸೆ ನೀಡಿದ್ದಾರೆ. ನಂದಿನಿ ಹಾಲು ಹಾಗೂ ಅದರ ಉತ್ಪನ್ನಗಳು ಪರಿಶುದ್ದ ಅನ್ನೊ ಮಾತಿದೆ. ಇಂಥದರಲ್ಲಿ ಕೆಲವು ಡೈರಿ ಸಿಬ್ಬಂದಿಗಳು ದುರಾಸೆಗೆ ಬಿದ್ದು, ಹಾಲಿಗೆ ನೀರು ಮಿಶ್ರಣ ಮಾಡಿ ನಂದಿನಿ ನಂಬಿಕೆಗೆ ಧಕ್ಕೆ ತರುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ