Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಪೊಲೀಸರಿಗೆ ಪ್ರಾಣ ಬೆದರಿಕೆ; ಆರೋಪಿ ಬಂಧನ!, ಏನಿದು ಕಥೆ ಅಂತೀರಾ?

ಪೊಲೀಸರ ತನಿಖೆಗೆ ಸಹಕರಿಸದೇ ಪೊಲೀಸರ ನೋಟಿಸನ್ನು ಸ್ವೀಕರಿಸದೇ ಭೇಟಿಗೆ ಬಂದ ಪೊಲೀಸರನ್ನು ತಳ್ಳಿ ಪ್ರಾಣ ಬೆದರಿಕೆ ಹಾಕಿದ ಆರೋಪದ ಹಿನ್ನಲೆ ಚಿಕ್ಕಬಳ್ಳಾಪುರ (Chikkaballapur) ನಗರಠಾಣೆ ಪೊಲೀಸರು ಆರೋಪಿ ಸೂರ್ಯನಾರಾಯಣಾಚಾರಿ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ: ಪೊಲೀಸರಿಗೆ ಪ್ರಾಣ ಬೆದರಿಕೆ; ಆರೋಪಿ ಬಂಧನ!, ಏನಿದು ಕಥೆ ಅಂತೀರಾ?
ಚಿಕ್ಕಬಳ್ಖಾಪುರ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 22, 2023 | 7:53 PM

ಚಿಕ್ಕಬಳ್ಳಾಪುರ, ನ.22: ಐಪಿಸಿ ಕಲಂ 420 ವಂಚನೆ ಪ್ರಕರಣವೊಂದರಲ್ಲಿ ತನಿಖೆ ನಡೆಸುತ್ತಿದ್ದ ಪೊಲೀಸರ ತನಿಖೆಗೆ ಸಹಕರಿಸದೇ ಪೊಲೀಸರ ನೋಟಿಸನ್ನು ಸ್ವೀಕರಿಸದೇ ಭೇಟಿಗೆ ಬಂದ ಪೊಲೀಸರನ್ನು ತಳ್ಳಿ ಪ್ರಾಣ ಬೆದರಿಕೆ ಹಾಕಿದ ಆರೋಪದ ಹಿನ್ನಲೆ ಚಿಕ್ಕಬಳ್ಳಾಪುರ (Chikkaballapur) ನಗರಠಾಣೆ ಪೊಲೀಸರು ಆರೋಪಿ ಸೂರ್ಯನಾರಾಯಣಾಚಾರಿ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ ನಗರ ನಿವಾಸಿ ಸೂರ್ಯನಾರಾಯಣಾಚಾರಿ ಮೇಲೆ ಐಪಿಸಿ ಕಲಂ 420ರಂತೆ ಪ್ರಕರಣ ಸಂಖ್ಯೆ : 103/2023 ಹಾಗೂ 104/2023 ಮೊಕದ್ದಮೆಗಳು ದಾಖಲಾಗಿವೆ. ಇದೇ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಚಿಕ್ಕಬಳ್ಳಾಪುರ ನಗರಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರಕರಣದ ಆರೋಪಿಯಾಗಿರುವ ಸೂರ್ಯನಾರಾಯಣಚಾರಿ ಪೊಲೀಸರ ತನಿಖೆಗೆ ಸಹಕರಿಸದ ಕಾರಣ ನಗರಠಾಣೆ ಪೊಲೀಸರು ಆರೋಪಿ ಸೂರ್ಯನಾರಾಯಣಚಾರಿಗೆ ನೋಟೀಸ್ ಜಾರಿ ಮಾಡಿ,  ಸ್ವೀಕೃತಿ ಪಡೆಯಲು ಮುಂದಾಗಿದ್ದಾರೆ. ಆಗ ಆರೋಪಿ ರಂಪಾಟ ಮಾಡಿ, ಗೂಂಡಾವರ್ತನೆ ತೋರಿದ್ದಾನೆ.

ಇದನ್ನೂ ಓದಿ:ಪ್ರೀತಿಸಿದವನ ಜೊತೆಗೇ ಬಾಳಬೇಕೆಂದು ನಿರ್ಧರಿಸಿ ಮನೆ ಬಿಟ್ಟು ಬಂದಿದ್ದಾಳೆ ಯುವತಿ, ಪ್ರಾಣ ಬೆದರಿಕೆಯಿದೆ ರಕ್ಷಿಸಿ ಅಂತಾ ಯಾದಗಿರಿ ಎಸ್​​​ಪಿ ಕಚೇರಿ ಎದುರು ನಿಂತುಬಿಟ್ಟಿದ್ದಾಳೆ!

ಪೊಲೀಸರನ್ನು ತಳ್ಳಿ ಪ್ರಾಣ ಬೆದರಿಕೆ ಆರೋಪ

ಪ್ರಕರಣದ ಎ1 ಆರೋಪಿಯಾಗಿರುವ ಸೂರ್ಯನಾರಾಯಣಚಾರಿಗೆ ನೋಟೀಸ್ ನೀಡಲು ಚಿಕ್ಕಬಳ್ಳಾಪುರ ನಗರಠಾಣೆ ಸಿಬ್ಬಂದಿ ಪಕ್ಕೀರಜ್ಜ ಗೊಂದಿ ಹಾಗೂ ಹರೀಶ್ ಎನ್ನುವವರು ನಿನ್ನೆ(ನ.21) ಚಿಕ್ಕಬಳ್ಳಾಪುರ ನಗರದ ಗಂಗಮ್ಮಗುಡಿ ರಸ್ತೆ ಬಳಿ ಸೂರ್ಯನಾರಾಯಣಚಾರಿಗೆ ನೋಟೀಸ್ ಕೊಡಲು ಮುಂದಾಗಿದ್ದಾರೆ. ಆಗ ಪೊಲೀಸರಿಗೆ ಆರೋಪಿ ಪರಿಚಿತನಾಗಿದ್ದರೂ, ಪೊಲೀಸ್ ಸಿಬ್ಬಂದಿಗಳನ್ನು ತಳ್ಳಿ, ತನ್ನನ್ನು ಮುಟ್ಟಿದರೆ ಪೊಲೀಸರನ್ನು ಸುಮ್ಮನೇ ಬಿಡುವುದಿಲ್ಲವೆಂದು ಪ್ರಾಣ ಬೆದರಿಕೆ ಹಾಕಿ, ಸರ್ಕಾರಿ ಕರ್ತವ್ಯಕ್ಕೆ ಅಡಚಣೆ ಉಂಟು ಮಾಡಿದ್ದಾನೆ. ಇದರಿಂದ ಚಿಕ್ಕಬಳ್ಳಾಪುರ ನಗರಠಾಣಾ ಪೊಲೀಸರು ಆರೋಪಿಯ ವಿರುದ್ಧ ಐಪಿಸಿ 353 ಸೆಕ್ಷನ್‍ಯಡಿ ಮೊಕದ್ದಮೆ ದಾಖಲಿಸಿದ್ದಾರೆ.

ಆರೋಪಿ ಬಂಧಿಸಿ ವಿಚಾರಣೆ

ಇನ್ನು ಪ್ರಕರಣದ ಆರೋಪಿ ಸೂರ್ಯನಾರಾಯಣಚಾರಿ ಪೊಲೀಸರ ತನಿಖೆಗೆ ಸಹಕರಿಸದೇ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಗೂಂಡಾ ವರ್ತನೆ ಮಾಡಿದ ಹಿನ್ನಲೆ ಚಿಕ್ಕಬಳ್ಳಾಪುರ ನಗರಠಾಣೆಯ ಹೆಚ್ಚುವರಿ ಸಿಬ್ಬಂದಿಗಳು ಆಗಮಿಸಿ ಸೂರ್ಯನಾರಾಯಣಚಾರಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ