AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿ ಮೇಲೆ ಕ್ಲರ್ಕ್ ಅತ್ಯಾಚಾರ: ಪರೀಕ್ಷೆ ಗೈಡ್ ಮಾಡ್ತೇನೆಂದು ಬಲೆಗೆ ಬೀಳಿಸಿಕೊಂಡಿದ್ದ SDA

ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಗೈಡ್ ಮಾಡುತ್ತೇನೆಂದು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿರುವ ಆರೋಪ ಕಾಲೇಜಿನ ಕ್ಲರ್ಕ್ ಮೇಲೆ ಕೇಳಿಬಂದಿದೆ. ಸರ್ಕಾರಿ ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅದೇ ಕಾಲೇಜಿನ ಕ್ಲರ್ಕ್ ಅತ್ಯಾಚಾರ ಎಸಗಿ ಗರ್ಭೀಣಿ ಮಾಡಿದ ಆರೋಪ ಕೇಳಿ ಬಂದಿದ್ದು, ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ವಿದ್ಯಾರ್ಥಿನಿ ಮೇಲೆ ಕ್ಲರ್ಕ್ ಅತ್ಯಾಚಾರ: ಪರೀಕ್ಷೆ ಗೈಡ್ ಮಾಡ್ತೇನೆಂದು ಬಲೆಗೆ ಬೀಳಿಸಿಕೊಂಡಿದ್ದ SDA
Bhimaraj
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ರಮೇಶ್ ಬಿ. ಜವಳಗೇರಾ|

Updated on:Jul 08, 2025 | 2:13 PM

Share

ಚಿಕ್ಕಬಳ್ಳಾಪುರ, (ಜುಲೈ 07): ಡಿಗ್ರಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸ (sexual assault) ಆಕೆಯನ್ನು ಗರ್ಭಿಣಿ ಮಾಡಿರುವ ಆರೋಪ ಚಿಕ್ಕಬಳ್ಳಾಪುರ (Chikkaballapur) ಡಿಗ್ರಿ ಕಾಲೇಜಿನ ಕ್ಲರ್ಕ್​ ವಿರುದ್ಧ ಕೇಳಿಬಂದಿದೆ. ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಗೈಡ್ ಮಾಡುವ ನೆಪದಲ್ಲಿ SDA ಭೀಮರಾಜ್ ಎನ್ನುವಾತ ವಿದ್ಯಾರ್ಥಿನಿಯನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದಾನೆಂದು ಆರೋಪಿಸಲಾಗಿದ್ದು, ಈ ಸಂಬಂಧ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪೊಲೀಸರು ಕ್ಲಕ್​ ಭೀಮರಾಜ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮತ್ತೊಂದೆಡೆ ಏಕೆ ದೂರು ಕೊಟ್ಟೆ ಎಂದು ಆರೋಪಿ ಭೀಮರಾಜ್ ಪರವಾಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಲಾಗುತ್ತಿದೆ ಎನ್ನಲಾಗಿದೆ.

ಈ ಸಂಬಂಧ ವಿದ್ಯಾರ್ಥಿನಿ ಈಗ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಕ್ಲರ್ಕ್​ ವಿರುದ್ಧ ಅತ್ಯಾಚಾರ ಪ್ರಕರಣ ದೂರು ದಾಖಲು ಮಾಡಿದ್ದಾಳೆ. ಯು.ಪಿ.ಎಸ್.ಸಿ. ಪರೀಕ್ಷೆ ಬರೆದು ಐ.ಎ.ಎಸ್ ಅಧಿಕಾರಿಯಾಗಬೇಕು ಎಂದುಕೊಂಡಿದ್ದ ಬಿಎಸ್ಸಿ ವಿದ್ಯಾರ್ಥಿನಿಯೊರ್ವಳು, ತಾನು ವಿದ್ಯಾಭ್ಯಾಸ ಮಾಡುತ್ತಿದ್ದ ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿದವರನ್ನು ಹುಡುಕಾಡುತ್ತಿದ್ದಾಗ ಕ್ಲರ್ಕ್​ ಭೀಮರಾಜ್ ಬಿ ಎನ್ನುವತ ಸಿಕ್ಕಿದ್ದಾನೆ. ಇಬ್ಬರ ಪರಿಚಯ ಬಳಿಕ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಗೈಡ್ ಮಾಡುತ್ತೇನೆ. ಹಾಗೇ ನನ್ನ ಪತ್ನಿಯಿಂದಲೂ ಗೈಡ್ ಮಾಡಿಸ್ತಿನಿ ಎಂದು ಪುಸಲಾಯಿಸಿ ವಿದ್ಯಾರ್ಥಿನಿಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಅನುಮಾನದ ಭೂತ: ಪತ್ನಿಯ ಮುಖವನ್ನು ಚಾಕುವಿನಿಂದ ವಿರೂಪಗೊಳಿಸಿದ ಪತಿ

ಇನ್ನೂ ಪೊಲೀಸರು ಆರೋಪಿ ಭೀಮರಾಜ್ ಬಿ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಆರೋಪಿ ತಾನು ಮಾಡಿದ ಪಾಪದ ಕೆಲಸ ಒಪ್ಪಿಕೊಂಡಿದ್ದಾನಂತೆ. ಇದರಿಂದ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮತ್ತೊಂದೆಡೆ ಆರೋಪಿಗೆ ಮದುವೆಯಾಗಿ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ. ಪತ್ನಿ ಚಿಕ್ಕಬಳ್ಳಾಪುರದ ಸರ್ಕಾರಿ ಕಚೇರಿಯೊಂದರಲ್ಲಿ ಸರ್ಕಾರಿ ನೌಕರಳಾಗಿ ಕೆಲಸ ಮಾಡ್ತಿದ್ದಾಳೆ. ಹೀಗಿದ್ದರೂ ತನ್ನದೆ ಕಾಲೇಜಿನ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಆಕೆ ವಿದ್ಯಾಬ್ಯಾಸಕ್ಕೆ ಮುಳ್ಳಾಗಿದ್ದಾನೆ.

ಚಿಕ್ಕಬಳ್ಳಾಪುರ ಮಹಿಳಾ ಠಾಣೆ ಪೊಲೀಸರು, ಆರೋಪಿ ಭೀಮರಾಜ್ ಬಿ ವಿರುದ್ದ ಭಾರತೀಯ ನ್ಯಾಯ ಸಂಹಿತೆಯಡಿ ಅತ್ಯಾಚಾರ, ಪ್ರಾಣ ಬೆದರಿಕೆ, ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿಕೊಂಡಿದ್ದು ತನಿಖೆ ತೀವ್ರಗೋಳಿಸಿದ್ದಾರೆ.

Published On - 8:46 pm, Mon, 7 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ