AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಆಲೂಗಡ್ಡೆ ಬೆಳೆದು ಉತ್ತಮ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ ರೈತರು

ಬೇಸಿಗೆಯಲ್ಲಿ ಆಲೂಗಡ್ಡೆ ಬೆಳೆದರೆ, ನಾಲ್ಕು ಕಾಸು ಮಾಡಬಹುದು ಎಂದು ಆ ಜಿಲ್ಲೆಯ ರೈತರು ಹಗಲು ರಾತ್ರಿ ಕಷ್ಟಪಟ್ಟು ಸಾವಿರಾರು ಹೆಕ್ಟರ್ ಪ್ರದೇಶದಲ್ಲಿ ಆಲೂಗಡ್ಡೆ ಬೆಳೆದಿದ್ದರು. ಆದರೆ ಬೆಳೆದ ಆಲೂಗಡ್ಡೆಗೆ ಮಾರುಕಟ್ಟೆಯಲ್ಲಿ ಯಾರು ಕೇಳುತ್ತಿಲ್ಲ. ಹೀಗಾಗಿ ಸ್ವಲ್ಪ ದಿನ ಬಿಟ್ಟು ಮಾರೋಣವೆಂದು ಕೋಲ್ಡ್ ಸ್ಟೋರೇಜ್​ನಲ್ಲಿ ಇಡಲು ಜಾಗವಿಲ್ಲ. ಇದರಿಂದ ಆಲೂಗಡ್ಡೆ ಬೆಳೆದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಚಿಕ್ಕಬಳ್ಳಾಪುರ: ಆಲೂಗಡ್ಡೆ ಬೆಳೆದು ಉತ್ತಮ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ ರೈತರು
ಕಂಗಾಲಾದ ರೈತರು
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 10, 2023 | 10:18 AM

Share

ಚಿಕ್ಕಬಳ್ಳಾಪುರ: ಹೀಗೆ ನೂರಾರು ಲೋಡ್​ಗಳಲ್ಲಿ ಆಲೂಗಡ್ಡೆಯನ್ನ(Potato) ತುಂಬಿ ನಿಲ್ಲಿಸಿರುವುದು ನಗರದ ನಂದಿ ಕೋಲ್ಡ್ ಸ್ಟೋರೇಜ್ ಬಳಿ, ಮತ್ತೊಂದೆಡೆ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಆಲೂಗಡ್ಡೆಯನ್ನ ಗುಡ್ಡೆ ಹಾಕಿರುವುದು. ಹೌದು ಯಾವುದೇ ಕಾಲದಲ್ಲಾದರೂ ಆಲೂಗಡ್ಡೆ ಬೆಳೆಯುವುದಕ್ಕೆ ಪೇಮಸ್ ಆಗಿರುವ ಚಿಕ್ಕಬಳ್ಳಾಪುರದ ಆಲೂಗಡ್ಡೆ ಬೆಳೆಗಾರರು, ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಗಲು ರಾತ್ರಿ ಕಷ್ಟ ಪಟ್ಟು ಆಲೂಗಡ್ಡೆ ಬೆಳೆದರೆ ಈ ಭಾರಿ ಆಲೂಗಡ್ಡೆಯನ್ನು ಅದ್ಯಾಕೋ ಯಾರು ಕೇಳುತ್ತಿಲ್ಲ. ಇದರಿಂದ ಬೆಳೆದ ಆಲೂಗಡ್ಡೆಯನ್ನ ಮಾರುಕಟ್ಟೆಗೆ ತಂದರೆ ಮೂಟೆ ಆಲೂಗಡ್ಡೆಯ ಬೆಲೆ ಇನ್ನೂರು ರೂಪಾಯಿ ಆಗಿದೆ. ಹೀಗಾಗಿ ಕೈಗೆ ಬಂದ ಆಲೂಗಡ್ಡೆಗೆ, ಬೆಲೆ ಇಲ್ಲದೆ ರೈತರು ಕಂಗಲಾಗಿದ್ದಾರೆ.

ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಆಲೂಗಡ್ಡೆಗೆ ಬೆಲೆಯಿಲ್ಲದ ಕಾರಣ ಬೆಳೆದ ಆಲೂಗಡ್ಡೆಯನ್ನ ಕೋಲ್ಡ್ ಸ್ಟೋರೇಜ್​ನಲ್ಲಿ ಇಡಲು ರೈತರು ಮುಂದಾಗಿದ್ದಾರೆ. ಆದರೆ ಒಂದೇ ಸಮಯಕ್ಕೆ ಸಾವಿರಾರು ಲೋಡ್ ಆಲೂಗಡ್ಡೆ ಬರುತ್ತಿರುವ ಕಾರಣ, ಕೋಲ್ಡ್ ಸ್ಟೋರೇಜ್​ನಲ್ಲಿ ಜಾಗ ಇಲ್ಲವಾಗಿದೆ. ಇದರಿಂದ ರೈತರು, ವರ್ತಕರು, ವ್ಯಾಪಾರಿಗಳು ಸೇರಿದಂತೆ ರಾಜಕಾರಣಿಗಳಿಗೆ ಶಾಪ ಹಾಕುತ್ತಿದ್ದಾರೆ.

ಇದನ್ನೂ ಓದಿ:ರಾಮನಗರ: ಮಾವು ಬೆಳೆಯಿಂದ ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್​; ನಿರೀಕ್ಷಿತ ಬೆಲೆ ಸಿಗದೇ ರೈತ ಕಂಗಾಲು

ಚಿಕ್ಕಬಳ್ಳಾಪುರ ಜಿಲ್ಲೆಯೊಂದರಲ್ಲಿ ಸಾವಿರಾರು ಹೆಕ್ಟರ್ ಪ್ರದೇಶದಲ್ಲಿ ಆಲೂಗಡ್ಡೆ ಸೇರಿದಂತೆ ತರೇವಾರಿ ತರಕಾರಿ ಹಣ್ಣುಗಳನ್ನು ಬೆಳೆಯುತ್ತಾರೆ. ಆದರೆ ಬೆಲೆ ಕುಸಿತವಾದಾಗ ನಾಲ್ಕು ದಿನ ಕೋಲ್ಡ್ ಸ್ಟೋರೇಜ್​ನಲ್ಲಿ ಇಡೋಣ ಅಂದರೆ ಸರ್ಕಾರದಿಂದ ಒಂದು ಕೋಲ್ಡ್ ಸ್ಟೋರೇಜ್ ಕೂಡ ಇಲ್ಲ. ಇರುವ ಒಂದು ಖಾಸಗಿ ಸ್ಟೋರೇಜ್​ಗೆ ಇದೀಗ ರೈತರು ಮುಗಿಬಿಳುತ್ತಿದ್ದಾರೆ.

ವರದಿ: ಭೀಮಪ್ಪ ಪಾಟೀಲ್ ಟಿವಿ9 ಚಿಕ್ಕಬಳ್ಳಾಾಪುರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ