AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ಯೂಟಿ ಮುಗಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಕಾರಿನಲ್ಲೇ ಹೃದಯಾಘಾತವಾಗಿ ವಿಧಿವಿಜ್ಞಾನ ತಜ್ಞ ಡಾ. ಭಗವಾನ್​ ನಿಧನ

ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಆಸ್ಪತ್ರೆಯ ಹಿರಿಯ ವೈದ್ಯ ಡಾ.ಭಗವಾನ್ ಅವರು ತಮ್ಮ ಕರ್ತವ್ಯ ಮುಗಿಸಿ ಬೆಂಗಳೂರಿಗೆ ವಾಪಸಾಗುವ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

ಡ್ಯೂಟಿ ಮುಗಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಕಾರಿನಲ್ಲೇ ಹೃದಯಾಘಾತವಾಗಿ ವಿಧಿವಿಜ್ಞಾನ ತಜ್ಞ ಡಾ. ಭಗವಾನ್​ ನಿಧನ
ಡಾ.ಎಸ್​​.ಭಗವಾನ್​​
TV9 Web
| Updated By: ಆಯೇಷಾ ಬಾನು|

Updated on:Feb 04, 2023 | 11:18 AM

Share

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಕಾರಿನಲ್ಲೇ ಹೃದಯಾಘಾತವಾಗಿ(Heart Attack) ವಿಧಿ ವಿಜ್ಞಾನ ತಜ್ಞ ಡಾ.ಭಗವಾನ್(Dr S Bhagwan)​ ನಿಧನರಾದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಚದಲಪುರ ಗ್ರಾಮದ ಸಮೀಪ ನಡೆದಿದೆ. ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಆಸ್ಪತ್ರೆಯ ಹಿರಿಯ ವೈದ್ಯ ಡಾ.ಭಗವಾನ್ ಅವರು ತಮ್ಮ ಕರ್ತವ್ಯ ಮುಗಿಸಿ ಬೆಂಗಳೂರಿಗೆ ವಾಪಸಾಗುವ ವೇಳೆ ಹೃದಯಾಘಾತವಾಗಿದೆ. ತಕ್ಷಣ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಭಗವಾನ್​ರನ್ನ ಕರೆ ತರಲಾಗಿತ್ತು. ಆದ್ರೆ ವೈದ್ಯರು ಪರೀಕ್ಷೆ ಮಾಡುವಷ್ಟರಲ್ಲಿ ಡಾ.ಎಸ್​​.ಭಗವಾನ್​​ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಕಾರಿನಲ್ಲಿ ಹಿಂಬದಿ ಕುಳಿತಿದ್ದ ಡಾ.ಭಗವಾನ್ ಅವರು ತಮ್ಮ ಕಾರಿನ ಚಾಲಕನಿಗೆ ತಲೆಸುತ್ತು ಬರ್ತಿದೆ, ಬೇವರು ಬರ್ತಿದೆ ಎಂದು ಹೇಳಿದ್ದರು. ಬಳಿಕ ಚಾಲಕ ಕಾರು ನಿಲ್ಲಿಸುವಷ್ಟರಲ್ಲಿ ಕಾರಿನಲ್ಲಿ ಮೃತಪಟ್ಟಿದ್ದಾರೆ. ತಕ್ಷಣ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕರೆತರಲಾದರೂ ವೈದ್ಯರು ಪರೀಕ್ಷೆ ಮಾಡುವಷ್ಟರಲ್ಲಿ ಪ್ರಾಣ ಹೋಗಿದೆ. ಪತ್ನಿ, ಇಬ್ಬರು ಮಕ್ಕಳನ್ನು ಭಗವಾನ್ ಅಗಲಿದ್ದಾರೆ. ಕಳೆದ ಐದು ವರ್ಷಗಳಿಂದ ಡಾ.ಭಗವಾನ್ ಚಿಕ್ಕಬಳ್ಳಾಪುರ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ: Sindhnur: 74ನೇ ಗಣರಾಜ್ಯೋತ್ಸವ ಹಿನ್ನೆಲೆ ನೃತ್ಯ ಮಾಡುವಾಗ ಹೃದಯಾಘಾತದಿಂದ ಕೊನೆಯುಸಿರೆಳೆದ ಸ್ಟಾಫ್ ನರ್ಸ್

ಚಳಿಗಾಲದ ಚಳಿಯು ಭಾರತದಲ್ಲಿ ಹೃದಯಾಘಾತ ಮತ್ತು ಬ್ರೈನ್‍ಸ್ಟ್ರೋಕ್‍ನ್ನು ಏಕೆ ಉಂಟು ಮಾಡುತ್ತದೆ?

ಚಳಿಗಾಲದಲ್ಲಿ ಹೃದಯಾಘಾತವು ಸಾಮಾನ್ಯ. ಹೃದ್ರೋಗಗಳು ಪಾಶ್ರ್ವವಾಯುವಿಗೆ ಕಾರಣವಾಗುತ್ತದೆ. ಮತ್ತು ಹೃದಯ ಕುಸಿತವು ಶೀತ ತಿಂಗಳುಗಳಲ್ಲಿ ಬಹಳ ಸಾಮಾನ್ಯ ವಿದ್ಯಾಮಾನವಾಗಿದೆ. ತಾಪಮಾನದಲ್ಲಿನ ಹಠಾತ್ ಕುಸಿತದಿಂದಾಗಿ ಹೃದಯಾತದಿಂದ ಉಂಟಾಗುವ ಸಾವಿನಲ್ಲಿ ಏರಿಕೆಯಾಗಿದೆ. ವೈದ್ಯರ ಪ್ರಕಾರ ಶೀತ ಹವಾಮಾನವು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ಇದು ಹಠಾತ್ ಹೃದಯಾಘಾತ, ಮೆದುಳಿನ ಪಾಶ್ರ್ವವಾಯು ಮುಂತಾದ ಹೃದಯ ಸಂಬಂಧಿ ಕಾಯಿಲೆಗಳನ್ನು ಪ್ರಚೋದಿಸುತ್ತದೆ.

ಮೆದುಳಿನ ಸ್ಟ್ರೋಕ್‍ನ ಸಾಮಾನ್ಯ ಲಕ್ಷಣಗಳು

  • ತಲೆ ತಿರುಗುವಿಕೆ
  • ಮಾತನಾಡುವಾಗ ಗೊಂದಲ
  • ದೃಷ್ಟಿ ಸಮಸ್ಯೆಗಳು
  • ಸಮತೋಲನದ ತೊಂದರೆ
  • ಮುಖ, ತೋಳು ಅಥವಾ ಕಾಲಿನಲ್ಲಿ ಮರಗಟ್ಟುವಿಕೆ ಅಥವಾ ದೌರ್ಬಲ್ಯ
  • ತೀವ್ರ ತಲೆನೋವು

ಹೃದಯಾಘಾತದ ಲಕ್ಷಣಗಳು

  • ದೀರ್ಘಕಾಲದ ಎದೆನೋವು
  • ಎದೆಯ ಅಸ್ವಸ್ಥತೆ
  • ಸರಿಯಾಗಿ ಉಸಿರಾಡಲು ಆಗದಿರುವಂತಹದ್ದು
  • ದವಡೆ, ಕುತ್ತಿಗೆ, ಬೆನ್ನು, ತೋಳು ಅಥವಾ ಭುಜದಲ್ಲಿ ನೋವು ಅಥವಾ ಅಸ್ವಸ್ಥತೆ
  • ವಾಕರಿಕೆ
  • ತೀವ್ರ ಆಯಾಸ

Published On - 11:13 am, Sat, 4 February 23

ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?