AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ ಪ್ರಮಾಣದ ಹೂಗಳನ್ನು ತಿಪ್ಪೆಗೆ ಸುರಿದ ಚಿಕ್ಕಬಳ್ಳಾಪುರ ರೈತರು

ಭಾರಿ ಮಳೆಯಿಂದಾಗಿ ಹೂವು ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ. ತೋಟಗಳಲ್ಲಿಯೇ ಹೂವುಗಳು ಹಾಳಾಗುತ್ತಿವೆ. ಮಾರುಕಟ್ಟೆಗೆ ತಂದರೂ ಹೂಗಳನ್ನು ಖರೀದಿಸುತ್ತಿಲ್ಲ.

ಅಪಾರ ಪ್ರಮಾಣದ ಹೂಗಳನ್ನು ತಿಪ್ಪೆಗೆ ಸುರಿದ ಚಿಕ್ಕಬಳ್ಳಾಪುರ ರೈತರು
ರೈತರು ಹೂಗಳನ್ನು ಸುರಿದಿದ್ದಾರೆ
TV9 Web
| Edited By: |

Updated on: Oct 10, 2021 | 1:17 PM

Share

ಚಿಕ್ಕಬಳ್ಳಾಪುರ: ಕಳೆದ ಎರಡು ಮೂರು ದಿನಗಳಿಂದ ಸುರಿದ ಧಾರಾಕರ ಮಳೆಗೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹೂ ಬೆಳೆಗಾರರು ಕಂಗಾಲಾಗಿದ್ದಾರೆ. ಮಳೆಗೆ ಹೂಗಳು ತೋಟದಲ್ಲೇ ಕಮರಿವೆ. ಅಳಿದುಳಿದ ಹೂಗಳನ್ನು ಮಾರುಕಟ್ಟೆಗೆ ತಂದರೆ ಅಲ್ಲಿಯೂ ಮಳೆ ನೀರಿನ ಪಾಲಾಗಿವೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಹೂವಿಗೆ ಬೆಲೆಯೂ ಸಿಗಿಲಿಲ್ಲ, ಮಳೆ ಬಂದು ಎಲ್ಲಾ ಹಾಳಾಗಿ ಹೋಯಿತು ಅಂತ ರೈತರು ಟನ್ ಗಟ್ಟಲೆ ಹೂಗಳನ್ನು ನೀರಲ್ಲೇ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಹೂವು ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ. ತೋಟಗಳಲ್ಲಿಯೇ ಹೂವುಗಳು ಹಾಳಾಗುತ್ತಿವೆ. ಮಾರುಕಟ್ಟೆಗೆ ತಂದರೂ ಹೂಗಳನ್ನು ಖರೀದಿಸುತ್ತಿಲ್ಲ. ಹೀಗಾಗಿ ಅಪಾರ ಪ್ರಮಾಣದ ಹೂಗಳನ್ನು ರೈತರು ತಿಪ್ಪೆಗೆ ಸುರಿದಿದ್ದಾರೆ. ದಸರಾ ವೇಳೆ ಹೂವುಗಳಿಗೆ ಒಳ್ಳೆಯ ಬೆಲೆ ಸಿಗುತ್ತಿತ್ತು. ನಿರಂತರ ಮಳೆ ಹಿನ್ನೆಲೆ ತೋಟದಲ್ಲೇ ಹೂವು ಹಾಳಾಗುತ್ತಿದೆ ಅಂತ ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

ನೀರು ಮಯವಾಗಿರುವ ಹೂಗಳನ್ನು ಕೊಂಡುಕೊಳ್ಳಲು ವರ್ತಕರು ನಿರಾಕರಿಸುತ್ತಿದ್ದಾರೆ. ಹೀಗಾಗಿ ದಿಕ್ಕು ತೋಚದೆ ಕಷ್ಟಪಟ್ಟು ಬೆಳೆದ ಹೂಗಳನ್ನು ತಿಪ್ಪೆಗೆ ಹಾಕಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಜಮೀನಿನಲ್ಲಿರುವ ಹೂವುಗಳು ಮಳೆರಾಯನ ಪಾಲಾಗುತ್ತಿವೆ. ನಿರಂತರ ಮಳೆಯಿಂದ ಹೂಗಳು ಗಿಡದಲ್ಲೇ ಕೊಳೆಯುತ್ತಿವೆ.

ಇದನ್ನೂ ಓದಿ

ಪೊಲೀಸ್​ ಠಾಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಸಂತ್ರಸ್ತೆ; ಪೊಲೀಸ್​ ಅಧಿಕಾರಿ ಅಮಾನತು

ರಾಹುಲ್ ಗಾಂಧಿಯ ಲಖಿಂಪುರ್ ಖೇರಿ ಭೇಟಿ ‘ರಾಜಕೀಯ ಪ್ರವಾಸೋದ್ಯಮ’: ಕೇಂದ್ರ ಸಚಿವ ಗಿರಿರಾಜ್ ಸಿಂಗ್

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​