AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಗಿರಿಧಾಮದಲ್ಲಿ ಪ್ರಪಾತಕ್ಕೆ ಬಿದ್ದು 112ಗೆ ಕರೆ ಮಾಡಿ ರಕ್ಷಣೆ ಮಾಡುವಂತೆ ಗೋಗರೆದ ಯುವಕರು

ನಂದಿಗಿರಿಧಾಮದಲ್ಲಿ ಟ್ರಕ್ಕಿಂಗ್​ಗೆ ಹೋಗಿದ್ದ ಇಬ್ಬರು ಯುವಕರು ಪ್ರಪಾತಕ್ಕೆ ಬಿದ್ದು, ಬಳಿಕ 112 ಗೆ ಕರೆ ಮಾಡಿ ರಕ್ಷಣೆ ಮಾಡುವಂತೆ ಗೋಗರೆದಿದ್ದಾರೆ.

ನಂದಿಗಿರಿಧಾಮದಲ್ಲಿ ಪ್ರಪಾತಕ್ಕೆ ಬಿದ್ದು 112ಗೆ ಕರೆ ಮಾಡಿ ರಕ್ಷಣೆ ಮಾಡುವಂತೆ ಗೋಗರೆದ ಯುವಕರು
ನಂದಿಗಿರಿಧಾಮದಲ್ಲಿ ಪ್ರಪಾತಕ್ಕೆ ಬಿದ್ದಿದ್ದ ಇಬ್ಬರು ಯುವಕರ ರಕ್ಷಣೆ
TV9 Web
| Edited By: |

Updated on:Jan 29, 2023 | 3:38 PM

Share

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ(Nandi Hills) ಟ್ರಕ್ಕಿಂಗ್​ಗೆ ಹೋಗಿದ್ದ ಇಬ್ಬರು ಯುವಕರು ಪ್ರಪಾತಕ್ಕೆ ಬಿದ್ದಿದ್ದಾರೆ. ವೀರಭದ್ರೇಶ್ವರ ದೇವಸ್ಥಾನ ಇಳಿಜಾರಿನಲ್ಲಿ ಸಿಲುಕಿದ್ದು, ಬಳಿಕ 112 ಗೆ ಕರೆ ಮಾಡಿ ರಕ್ಷಣೆಗೆ ಮೊರೆಯಿಟ್ಟಿದ್ದಾರೆ. ಕೂಡಲೇ ಸ್ಥಳಕ್ಕೆ ನಂದಿಗಿರಿಧಾಮ ಠಾಣೆ ಪೊಲೀಸರು  ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಅಪಾಯಕಾರಿ ಪ್ರಪಾತದಲ್ಲಿ ರಕ್ಷಣಾ ಸಾಮಾಗ್ರಿಗಳ ಮೂಲಕ ಕಾರ್ಯಾಚರಣೆ.ನಡೆಸಿ ಯುವಕರನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಸವರಾಜ್ ಕರಲಿಂಗನ್ನವರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ದೊಡ್ಡಬಳ್ಳಾಪುರದ ಮನೋಜ್ ಕುಮಾರ್, ಮಂಜುನಾಥ್ ಎನ್ನುವರನ್ಜು ರಕ್ಷಣೆ ಮಾಡಿದೆ.

ಅಪಾಯಕಾರಿ ಪ್ರಪಾತದಲ್ಲಿ ಜಾರಿ ಬಿದ್ದಿರುವ ಓರ್ವ ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮತ್ತೋರ್ವ ಯುವಕನಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.  ಗಾಯಗೊಂಡಿದ್ದ ಮನೋಜ್​ನನ್ನು ಅಗ್ನಿಶಾಮಕ ಸಿಬ್ಬಂದಿ ಎರಡ್ಮೂರು ಕಿಲೋ ಮೀಟರ್​ ಹೊತ್ತುಕೊಂಡು ಬಂದಿದ್ದು, ಸದ್ಯ ಗಾಯಾಳು ಮನೋಜ್​ನನ್ನು ಚಿಕ್ಕಬಳ್ಳಾಫುರ ಜಿಲ್ಲಾಆಸ್ಪತ್ರಗೆ ರವಾನಿಸಲಾಗಿದೆ. ಮನೋಜ್ ಹಾಗೂ ಮಂಜುನಾಥ್ ಇಂದು (ಜನವರಿ 29) ಬೆಳಿಗ್ಗೆ ನಂದಿಗಿರಿಧಾಮಕ್ಕೆ ಟ್ರಕ್ಕಿಂಗ್​ ಹೋಗಿದ್ದರು.

ಟ್ರಕಿಂಗ್​ ಹೋದವರು ಪ್ರಪಾತಕ್ಕೆ ಬಿದ್ದಿರುವುದು ಇದು ಮೊದಲೇನಲ್ಲ. ಈ ಹಿಂದೆ ಈ ರೀತಿ ಘಟನೆಗಳು ನಡೆದ ಉದಾಹರಣಗಳು ಇವೆ.

ನಂದಿಗಿರಿಧಾಮದಲ್ಲಿ ಹೊತ್ತಿ ಉರಿದ ಕಾರು

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಪೋರ್ಡ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬಳಿಕ ಹೊತ್ತಿ ಉರಿದಿದೆ. ಕುಟುಂಬವೊಂದು ಬೆಂಗಳೂರಿನಿಂದ ನಂದಿಗಿರಿಧಾಮದ ಪ್ರವಾಸಕ್ಕೆ ಬಂದಿತ್ತು. ಈ ವೇಳೆ ನಂದಿ ಬೆಟ್ಟ ಏರುತ್ತಿದ್ದ ಪೋರ್ಡ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ತಿದ್ದಂತೆ ಎಚ್ಚೆತ್ತ ಚಾಲಕ ಕಾರಿನಲ್ಲಿದ್ದವರನ್ನು ಕೆಳಗೆ ಇಳಿಯುವಂತೆ ಹೇಳಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಕಾರಿನಲ್ಲಿದ್ದವರು ಬಚಾವ್ ಆಗಿದ್ದಾರೆ. ಬಳಿಕ ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಿದೆ.

Published On - 3:31 pm, Sun, 29 January 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?