AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಕಳೆದ ವರ್ಷ ಸುರಿದ ಮಳೆಗೆ ಜಲಾವೃತವಾದ ದೇವಾಲಯ ರೀ ಓಪನ್! ದೇವಾಲಯಕ್ಕೆ ಮುಗಿಬಿದ್ದ ಭಕ್ತರು

ಇದು ರಾಜ್ಯದಲ್ಲೇ ಪ್ರಸಿದ್ಧಿ ಪಡೆದಿರುವ ಗಂಗಾಭಾಗೀರಥಿ ದೇಗುಲ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಮದುಗಾನಕುಂಟೆ ಬಳಿ ಇರುವ ಬೃಹತ್ ಕೆರೆಯೊಂದು, ಸಂಪೂರ್ಣ ತುಂಬಿ ಕೆರೆಯಂಗಳದಲ್ಲಿರುವ ಗಂಗಾಭಾಗೀರಥಿ ದೇವಸ್ಥಾನವೂ ಸಂಫೂರ್ಣ ಜಲಾವೃತವಾಗಿತ್ತು.

ಚಿಕ್ಕಬಳ್ಳಾಪುರದಲ್ಲಿ ಕಳೆದ ವರ್ಷ ಸುರಿದ ಮಳೆಗೆ ಜಲಾವೃತವಾದ ದೇವಾಲಯ ರೀ ಓಪನ್!  ದೇವಾಲಯಕ್ಕೆ ಮುಗಿಬಿದ್ದ ಭಕ್ತರು
ಗಂಗಾಭಾಗೀರಥಿ ದೇಗುಲ
TV9 Web
| Edited By: |

Updated on:Mar 22, 2022 | 3:20 PM

Share

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರಿನ ಮದುಗಾನಕುಂಟೆ ಬಳಿ ಇರುವ ದೇವಸ್ಥಾನವು ದೇವಿ ಮಹತ್ಮೆ ಇರುವ ಪ್ರಸಿದ್ದ ದೇವಸ್ಥಾನ. ಇಲ್ಲಿಗೆ ಹೋಗಿ ಪ್ರಾರ್ಥನೆ ಸಲ್ಲಿಸಿ ಹರಕೆ ಕಟ್ಟಿಕೊಂಡ್ರೆ ಇಷ್ಟಾರ್ಥಗಳು ಈಡೇರುತ್ತೆ ಅನ್ನೋ ಅಚಲ ನಂಬಿಕೆ ಭಕ್ತರಲ್ಲಿದೆ. ಕಳೆದ ವರ್ಷ ಸುರಿದ ಭಾರಿ ಮಳೆಗೆ ಇಲ್ಲಿರುವ ಕೆರೆ ತುಂಬಿ ದೇವಸ್ಥಾನವೇ ಜಲಾವೃತವಾಗಿತ್ತು. ಆದ್ರೆ ಈಗ ನೀರು ಕಡಿಮೆಯಾದ ಕಾರಣ ದೇಗುಲ ರೀ ಓಪನ್ ಆಗಿದೆ. ಭಕ್ತರು ಇಲ್ಲಿರುವ ಕೆರೆಯ ನೀರಿನಲ್ಲಿ ಸ್ನಾನ ಮಾಡಿ ದೇವಿಯ ದರ್ಶನ ಮಾಡ್ತಾರೆ. ಎಡೆಯಿಟ್ಟು ಪೂಜೆ ಸಲ್ಲಿಸಿ ಮುಕ್ತ ಮನಸಿನ ಧ್ಯಾನ ಮಾಡ್ತಾರೆ. ಸದ್ಯ ವಿಶಿಷ್ಟ ಶಕ್ತಿಯಿರೋ ಈ ದೇವರ ದರ್ಶನ ಪಡೆಯಲು ಜನರ ದಂಡೇ ಆಗಮಿಸುತ್ತಿದೆ.

ಇದು ರಾಜ್ಯದಲ್ಲೇ ಪ್ರಸಿದ್ಧಿ ಪಡೆದಿರುವ ಗಂಗಾಭಾಗೀರಥಿ ದೇಗುಲ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಮದುಗಾನಕುಂಟೆ ಬಳಿ ಇರುವ ಬೃಹತ್ ಕೆರೆಯೊಂದು, ಸಂಪೂರ್ಣ ತುಂಬಿ ಕೆರೆಯಂಗಳದಲ್ಲಿರುವ ಗಂಗಾಭಾಗೀರಥಿ ದೇವಸ್ಥಾನವೂ ಸಂಫೂರ್ಣ ಜಲಾವೃತವಾಗಿತ್ತು. ಇದ್ರಿಂದ ಜಿಲ್ಲಾಡಳಿತ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಆದೇಶ ಮಾಡಿತ್ತು. ಆದ್ರೀಗ ಕೆರೆಯಲ್ಲಿ ನೀರು ಕಡಿಮೆಯಾದ ಕಾರಣ ಮತ್ತೆ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದ್ರಿಂದ ದೇವಸ್ಥಾನಕ್ಕೆ ದೇಶ ವಿದೇಶದಿಂದ ಭಕ್ತರು ಆಗಮಿಸ್ತಿದ್ದಾರೆ.

Chikkaballapur ganga Bhagirathi 2

ಗಂಗಾಭಾಗೀರಥಿ ದೇಗುಲ

ಇನ್ನು ಈ ದೇವಿಗೆ ಹರಕೆ ಹೊತ್ತು ಪೂಜೆ ಸಲ್ಲಿಸಿದ್ರೆ ಇಷ್ಟಾರ್ಥಗಳು ಈಡೇರುತ್ತವೆಂಬ ನಂಬಿಕೆ ಭಕ್ತರಲ್ಲಿದೆ. ವಿಶೇಷವಾಗಿ ಮಹಿಳೆಯರು ಪ್ರತಿ ಸೋಮವಾರ ದೇವಸ್ಥಾನಕ್ಕೆ ಆಗಮಿಸಿ ಬೊಮ್ಮಕಲ್ಲು ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಕೆಲ ನಿಮಿಷ ಭಕ್ತಿಯಿಂದ ಪೂಜೆ ಸಲ್ಲಿಸ್ತಾರೆ. ಇದ್ರಿಂದ ಆಸ್ಪತ್ರೆಗಳಲ್ಲಿ ವಾಸಿಯಾಗದ ಕಾಯಿಲೆಗಳು ಇಲ್ಲಿ ವಾಸಿಯಾಗುತ್ತವೆ ಅನ್ನೋದು ಭಕ್ತರ ಅಭಿಪ್ರಾಯ. ಇಲ್ಲಿ ಮತ್ತೊಂದು ವಿಶೇಷ ಏನಂದ್ರೆ ಈ ದೇವಸ್ಥಾನದಲ್ಲಿ ಅರ್ಚಕರು, ಸಿಬ್ಬಂದಿ ಯಾರು ಇರಲ್ಲ. ದೇವಸ್ಥಾನಕ್ಕೆ ಬಂದ ಭಕ್ತರೇ ದೇವಿಗೆ ಪೂಜೆ ಮಾಡ್ತಾರೆ. ಒಟ್ಟಾರೆ ಬಂದ್ ಆಗಿದ್ದ ದೇವಸ್ಥಾನ ಈಗ ಮತ್ತೆ ಓಪನ್ ಆಗಿದ್ದು ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗ್ತಿದೆ.

ವರದಿ: ಭೀಮಪ್ಪ ಪಾಟೀಲ, ಟಿವಿ9, ಚಿಕ್ಕಬಳ್ಳಾಪುರ

Chikkaballapur ganga Bhagirathi 2

ಚಿಕ್ಕಬಳ್ಳಾಪುರದಲ್ಲಿ ಕಳೆದ ವರ್ಷ ಸುರಿದ ಮಳೆಗೆ ಜಲಾವೃತವಾದ ದೇವಾಲಯ ರೀ ಓಪನ್! ಐತಿಹಾಸಿಕ ಮಹಾತ್ಮೆಯ ದೇವಾಲಯಕ್ಕೆ ಮುಗಿಬಿದ್ದ ಭಕ್ತರು

ಇದನ್ನೂ ಓದಿ: The Kashmir Files: ಬಾಕ್ಸಾಫೀಸ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ನಾಗಾಲೋಟ; ಹಲವು ದಾಖಲೆ ಸೃಷ್ಟಿ; ಕಲೆಕ್ಷನ್ ವಿವರ ಇಲ್ಲಿದೆ

Published On - 3:05 pm, Tue, 22 March 22

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!