AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ

ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ ಕೇವಲ 40 ದಿನದ ಹಸುಗೂಸನ್ನು ಅಜ್ಜಿ ಕೊಲೆಗೈದಿರುವಂತಹ ಘಟನೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಚೇಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಜ್ಜಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಮೊಮ್ಮಗನನ್ನೇ ಅಜ್ಜಿ ಕೊಲೆ ಮಾಡಿದ್ದೇಕೆ ಅಂತ ಗೊತ್ತಾದರೆ ಶಾಕ್​ ಆಗುತ್ತೀರಾ.

ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
ಮೆಹಬೂಬಿImage Credit source: tv9 kannada
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Mar 10, 2026 | 3:13 PM

Share

ಚಿಕ್ಕಬಳ್ಳಾಪುರ, ಮಾರ್ಚ್​ 10: ಕೇವಲ 40 ದಿನದ ಹಸುಗೂಸನ್ನು ಹತ್ಯೆಗೈದಿದ್ದ (kill) ಅಜ್ಜಿಯನ್ನು (grandmother) ಚೇಳೂರು ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕತ್ತು ಹಿಸುಕಿ ಮರಿ ಮೊಮ್ಮಗನನ್ನೇ ಮೆಹಬೂಬಿ ಹತ್ಯೆಗೈದಿದ್ದರು. ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 2025ರ ಡಿಸೆಂಬರ್​ 24ರಂದು ಘಟನೆ ನಡೆದಿತ್ತು. ತಡವಾಗಿ ಬೆಳಕಿಗೆ ಬಂದಿದೆ. ಎಫ್​​ಎಸ್​ಎಲ್​ ವರದಿಯಲ್ಲಿ ಮಗುವಿನ ಕೊಲೆ ರಹಸ್ಯ ಬಯಲಾಗಿದೆ. ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಕೇವಲ 40 ದಿನದ ಗಂಡು ಮಗು, ಮರಿ ಮೊಮ್ಮಗನನ್ನೇ ಕತ್ತು ಹಿಸುಕಿ ಕೊಲೆ ಮಾಡಿದ್ದ ಅಜ್ಜಿ ಮೆಹಬೂಬಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಡಿಸೆಂಬರ್ 24ರಂದು ಚೇಳೂರು ಪಟ್ಟಣದಲ್ಲಿ ಮೆಹಮೂಬಿ ಎಂಬಾಕೆಯ ಮನೆಯಲ್ಲಿ ಈಕೆಯ ಮೊಮ್ಮಗಳ 40 ದಿನದ ಗಂಡು ಮಗು ಸಾವನ್ನಪ್ಪಿತ್ತು. ಅನಾರೋಗ್ಯ ಉಸಿರಾಟದ ಸಮಸ್ಯೆಯಿಂದ ಮಗು ಮೃತಪಟ್ಟಿದೆ ಎಂದು ಅಜ್ಜಿ ಮಣ್ಣು ಸಹ ಮಾಡಿಸಿಬಿಟ್ಟಿದ್ದಳು.

ಇದನ್ನೂ ಓದಿ: ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು! ಹನಿಟ್ರ್ಯಾಪ್ ಮಾಡುತ್ತಿದ್ದ ಕತರ್ನಾಕ್ ಲೇಡಿ ಅರೆಸ್ಟ್

ಆದರೆ ಅಜ್ಜಿಯ ಮೇಲೆ ಅನುಮಾನಗೊಂಡ ಮೊಮ್ಮಗಳು, ಚೇಳೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಮೇರೆಗೆ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಎಫ್​ಎಸ್​ಎಲ್​ ವರದಿಗೆ ಕಳುಹಿಸಲಾಗಿತ್ತು. ಎಫ್​ಎಸ್​ಎಲ್​ ವರದಿಯಲ್ಲಿ ಮಗು ಉಸಿರುಗಟ್ಟಿಸಿ ಕೊಂದಿರುವುದಾಗಿ ಬೆಳಕಿಗೆ ಬಂದಿದೆ. ಹೀಗಾಗಿ ಮಗುವಿನ ಅಜ್ಜಿಯೇ ಕೊಲೆ ಮಾಡಿರುವುದು ಬಯಲಾಗಿದ್ದು, ಮೆಹಬೂಬಿಯನ್ನ ಬಂಧಿಸಿ ಜೈಲಿಗಟ್ಟಲಾಗಿದೆ.

ಅಜ್ಜಿಯ ಮೊಮ್ಮಗಳು ಅನ್ಯಧರ್ಮದ ಯುವಕನೊಂದಿಗೆ ಪ್ರೇಮವಿವಾಹವಾಗಿದ್ದು, ಬಾಣಂತನಕ್ಕೆ ಅಂತ ಅಜ್ಜಿಯ ಮನೆಗೆ ಬಂದಿದ್ದಳು. ಅಜ್ಜಿಗೆ ಅನ್ಯಧರ್ಮದ ಯುವಕನೊಂದಿಗೆ ಪ್ರೇಮ ವಿವಾಹವಾಗಿರುವುದು ಇಷ್ಟವಿರಲಿಲ್ಲ. ಹಾಗೂ ಮಗುವನ್ನ ನೋಡಿಕೊಳ್ಳಲು ಆಗುವುದಿಲ್ಲ ಎನ್ನುವ ಕಾರಣಕ್ಕೆ ಕೊಲೆ ಮಾಡಿರುವುದಾಗಿ ಪೊಲೀಸರ ಬಳಿ ಬಾಯ್ಬಿಟ್ಟಿದ್ದಾರೆ.

ಇದನ್ನೂ ಓದಿ: ರಾಯಚೂರಿನಲ್ಲಿ ಘೋರ ದುರಂತ: ದಂಪತಿಯನ್ನು ಬಲಿಪಡೆದ ಕನಸಿನ ಮನೆ!

ಒಟ್ಟಿನಲ್ಲಿ ಪ್ರಪಂಚ ನೋಡವ ಮೊದಲೇ ಹಸುಗೂಸನ್ನು ಹತ್ಯೆಗೈಯುವ ಮೂಲಕ ಅಜ್ಜಿ ಜೈಲುಪಾಲಾದರೆ, ಇತ್ತ 9 ತಿಂಗಳ ನವ ಮಾಸ ಹೊತ್ತು ಹೆತ್ತ ತಾಯಿ ತನ್ನ ಮಗನನ್ನ ಕಳೆದುಕೊಂಡು ಜೀವನಪರ್ಯಂತ ನೋವು ಅನುಭವಿಸುವಂತಾಗಿದೆ.

ಕರ್ನಾಕಟ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್