AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಬಸ್​​ನಲ್ಲಿದ್ದ ಅರ್ಧ ಕೋಟಿ ಹಣ ಕಳವು: ಸಿನೆಮಾ ಸ್ಟೈಲ್​ನಲ್ಲಿ ಆರೋಪಿ ಅರೆಸ್ಟ್​​

ಊಟಕ್ಕೆಂದು KSRTC ಎಸಿ ಸ್ಲೀಪರ್ ಬಸ್‌ ನಿಲ್ಲಿಸಿದ್ದ ವೇಳೆ ಚಿಕ್ಕಬಳ್ಳಾಪುರದಲ್ಲಿ ಪ್ರಯಾಣಿಕರೊಬ್ಬರ 55 ಲಕ್ಷ ರೂ. ಹಣ ಕಳವು ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ಮೂಲದ ವ್ಯಕ್ತಿ ಬಂಧಿತನಾಗಿದ್ದು, ಕಳುವಾಗಿದ್ದ ಹಣವನ್ನು ಸಂಪೂರ್ಣವಾಗಿ ವಸೂಲಿ ಮಾಡಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದ್ದು, ಬಸ್​​ಗಳಲ್ಲಿ ದರೋಡೆ ಮಾಡೋದೆ ಈ ಗ್ಯಾಂಗ್​​ ಕಾಯಕವಾಗಿತ್ತು ಎಂಬುದು ತನಿಖೆ ವೇಳೆ ಬಯಲಾಗಿದೆ.

KSRTC ಬಸ್​​ನಲ್ಲಿದ್ದ ಅರ್ಧ ಕೋಟಿ ಹಣ ಕಳವು: ಸಿನೆಮಾ ಸ್ಟೈಲ್​ನಲ್ಲಿ ಆರೋಪಿ ಅರೆಸ್ಟ್​​
ಬಂಧಿತ ಆರೋಪಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Dec 25, 2025 | 5:48 PM

Share

ಚಿಕ್ಕಬಳ್ಳಾಪುರ, ಡಿಸೆಂಬರ್​​ 25: ಊಟಕ್ಕೆ ನಿಲ್ಲಿಸಿದ್ದ ವೇಳೆ ಬೆಂಗಳೂರು-ಹೈದರಾಬಾದ್​​ KSRTC ಎಸಿ ಸ್ಲೀಪರ್​​ ಬಸ್​ನಲ್ಲಿದ್ದ 55 ಲಕ್ಷ ರೂ. ಹಣ ಕಳವು ಪ್ರಕರಣ ಸಂಬಂಧ ಹುಡಿಬಂಡೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳು ಎಸ್ಕೇಪ್​​ ಆಗಿದ್ದು, ಕಳುವಾಗಿದ್ದ ಹಣವನ್ನ ಬಂಧಿತನಿಂದ ಜಪ್ತಿ ಮಾಡಲಾಗಿದೆ. ಎಲ್ಲ ಆರೋಪಿಗಳು ಮಧ್ಯಪ್ರದೇಶ ಮೂಲದವರು ಎಂಬುದು ತನಿಳೆ ವೇಳೆ ಬಯಲಾಗಿದೆ.

ಪ್ರಕರಣ ಸಂಬಂಧ ಮಧ್ಯ ಪ್ರದೇಶದಲ್ಲಿ ಆರೋಪಿ ಅಸ್ಲಂ ಖಾನ್ ಎಂಬಾತನನ್ನು ಬಂಧಿಸಲಾಗಿದ್ದು, ಕದ್ದ ಹಣವನ್ನೂ ರಿಕವರಿ ಮಾಡಲಾಗಿದೆ. ಈತನಿಗೆ ಕೃತ್ಯವೆಸಗಲು ಸಹಕಾರ ನೀಡಿದ್ದ ಮಧ್ಯ ಪ್ರದೇಶದ್ದೇ ಮೂಲದವರಾದ ಮನೀರ್ ಖಾನ್, ಅಭ್ಯಾಖಾನ್ ಮತ್ತು ಶೇರು ಪರಾರಿಯಾಗಿದ್ದಾರೆ. ಬಸ್​​ನಲ್ಲಿ ಪ್ರಯಾಣಿಸುವವರ ಬೆಲೆಬಾಳುವ ವಸ್ತು, ಚಿನ್ನಾಭರಣ, ಹಣ ಕಳ್ಳತನ ಮಾಡುವುದೇ ಈ ಗ್ಯಾಂಗ್​​ ಕಾಯಕವಾಗಿತ್ತು. ಕಳ್ಳತನ ಮಾಡಲು ಅನುಕೂಲವಾಗುವ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರದ ಜಿಲ್ಲೆಯ ಬೀಚಗಾನಹಳ್ಳಿ ಕ್ರಾಸ್ ಬಳಿ ಬಾಡಿಗೆಗೆ ಇವರು ರೂಮ್ ಕೂಡ​​ ಪಡೆದಿದ್ದರು. ಕದ್ದ ಹಣವನ್ನು ಇಲ್ಲೇ ಇಟ್ಟು ಆರೋಪಿಗಳು ಮಧ್ಯಪ್ರದೇಶಕ್ಕೆ ತೆರಳಿದ್ದರು. ಹೀಗಾಗಿ ಹಣ ಸೇಫ್​​ ಆಗಿ ಇತ್ತು ಎನ್ನಲಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ KSRTC ಬಸ್​​ಗೆ ನುಗ್ಗಿ ಬ್ಯಾಗ್​​ ಕದ್ದು ಎಸ್ಕೇಪ್​; ಕಳುವಾಗಿದ್ದು ಅರ್ಧಕೋಟಿ ಹಣ!

ಘಟನೆ ಏನು?

ಇದೇ ತಿಂಗಳ 8ನೇ ತಾರೀಕು ಬೆಂಗಳೂರಿನಿಂದ ಹೈದರಾಬಾದ್​​ಗೆ ಹೊರಟಿದ್ದ KSRTC ಎಸಿ ಸ್ಲೀಪರ್​​ ಐಷಾರಾಮಿ ಬಸ್​​ನಲ್ಲಿ ವೆಂಕಟೇಶ್ವರ್​ ರಾವ್​ ಎಂಬವರು ಪ್ರಯಾಣಿಸುತ್ತಿದ್ದರು. ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದ ಬಳಿ ಇರುವ ಹೋಟಲ್​​ವೊಂದರಲ್ಲಿ ಪ್ರಯಾಣಿಕರಿಗೆ ಊಟ ಮಾಡಲು ಚಾಲಕ ಬಸ್​​ ನಿಲ್ಲಿಸಿದ್ದ. ಈ ವೇಳೆ ವೆಂಕಟೇಶ್ವರ್​ ರಾವ್ ತಮ್ಮ ಬಳಿ ಇದ್ದ ಹಣದ ಬ್ಯಾಗ್​​ನ ಬಸ್​​ನಲ್ಲೇ ಬಿಟ್ಟು ಊಟಕ್ಕೆ ತೆರಳಿದ್ದರು. ಆದರೆ ಹಿಂದಿರುಗಿ ಬಂದು ನೋಡುವಾಗ ಸೀಟ್​​ನಲ್ಲಿದ್ದ ಬ್ಯಾಗ್​​ ನಾಪತ್ತೆಯಾಗಿತ್ತು. ಕಾರಲ್ಲಿ ಬಂದ ವ್ಯಕ್ತಿ ಸೀದಾ ಬಸ್​​ಗೆ ನುಗ್ಗಿ ಬ್ಯಾಗ್​​ ತೆಗೆದುಕೊಂಡು ಹೋಗಿರುವ ಬಗ್ಗೆ ಸಹ ಪ್ರಯಾಣಿಕರು ಮಾಹಿತಿ ನೀಡಿದ್ದರು. ಘಟನೆ ಬಗ್ಗೆ ವೆಂಕಟೇಶ್ವರ್​ ರಾವ್ ಅವರ ದೂರಿನ ಬೆನ್ನಲ್ಲೇ ಪೊಲೀಸರು ತನಿಖೆಗೆ ಇಳಿದಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.