AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆ ಮಾಡುವ ಭರವಸೆ ನೀಡಿ ಮೋಸ: ಪ್ರೇಯಸಿಯನ್ನ ದೂರ ಮಾಡಿದ್ದಕ್ಕೆ ಪ್ರಿಯಕರ ಆತ್ಮಹತ್ಯೆಗೆ ಯತ್ನ

ಪ್ರೇಯಸಿಯನ್ನು ತನ್ನಿಂದ ದೂರ ಮಾಡಿದ್ದಕ್ಕೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಕೌರನಹಳ್ಳಿಯ ಶೇಖರ್ ಎಂಬುವರುಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಕೌರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಹಾಗಿದ್ದರೆ, ಪ್ರೇಮಿಗಳನ್ನು ದೂರ ಮಾಡಲು ಕಾರಣವೇನು? ಯುವತಿ ಪೋಷಕರಿಗೆ ಯುವಕನ ಮೇಲೆ ಏಕೆ ಸಿಟ್ಟು? ಇಲ್ಲಿದೆ ಕಾರಣ

ಮದ್ವೆ ಮಾಡುವ ಭರವಸೆ ನೀಡಿ ಮೋಸ: ಪ್ರೇಯಸಿಯನ್ನ ದೂರ ಮಾಡಿದ್ದಕ್ಕೆ ಪ್ರಿಯಕರ ಆತ್ಮಹತ್ಯೆಗೆ ಯತ್ನ
ಆತ್ಮಹತ್ಯೆಗೆ ಯತ್ನಿಸಿದ ಶೇಖರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 04, 2025 | 10:42 PM

Share

ಚಿಕ್ಕಬಳ್ಳಾಪುರ, ಜುಲೈ 04: ಪ್ರಿಯತಮೆಯನ್ನು ತನ್ನಿಂದ ದೂರ ಮಾಡಿದ್ದಕ್ಕೆ ಪ್ರಿಯಕರ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಕೌರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕೌರನಹಳ್ಳಿ ಗ್ರಾಮದ ನಿವಾಸಿ ಶೇಖರ್ (35 ವರ್ಷ) ವಿಷ ಸೇವಿಸಿದ ಪ್ರಿಯಕರ. ಶೇಖರ ಚಿಕ್ಕಬಳ್ಳಾಪುರ ನಗರದ ಖಾಸಗಿ ಕಾಲೇಜಿನ ಬಸ್ ಚಾಲಕರಾಗಿದ್ದಾರೆ. ಶೇಖರ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ದಂಡಿಗಾನಹಳ್ಳಿ ಗ್ರಾಮದ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದಾರೆ.

ಯುವತಿ ಚಿಕ್ಕಬಳ್ಳಾಪುರ ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಾಂಗ ಮಾಡುತ್ತಿದ್ದಾರೆ. ಯುವತಿ ಪ್ರತಿದಿನ ಕಾಲೇಜು ಬಸ್ಸಿನಲ್ಲಿ ಕಾಲೇಜಿಗೆ ಹೋಗಿ ಬರುತ್ತಿದ್ದರು. ಇಬ್ಬರ ಮಧ್ಯೆ ಸ್ನೇಹ ಬಳೆದಿದೆ, ಸ್ನೇಹ ಪ್ರೇಮಕ್ಕೆ ತಿರುಗಿದೆ. ಇಬ್ಬರೂ ಪ್ರೀತಿಸಲು ಆರಂಭಿಸಿದ್ದಾರೆ.

ಇದನ್ನೂ ಓದಿ
Image
ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರಿಂದಲೇ ಪೊಲೀಸರಿಗೆ ದೂರು!
Image
ಮನೆ ಕೆಲಸದವನಿಂದಲೇ ಮಹಿಳೆ, ಮಗನ ಗಂಟಲು ಸೀಳಿ ಬರ್ಬರ ಹತ್ಯೆ
Image
ಮದುವೆಯಾಗಿ 45 ದಿನಕ್ಕೆ ಗಂಡನ ಕೊಂದು, ಮಾವನ ಜತೆ ಓಡಿ ಹೋದ ಮಹಿಳೆ
Image
ಡೆಲಿವರಿ ಬಾಯ್​ನಿಂದ ಯುವತಿ ಮೇಲೆ ಅತ್ಯಾಚಾರ

ಕಳೆದ ಕೆಲವು ದಿನಗಳ ಹಿಂದೆ ಪ್ರೇಮಿಗಳು ಮನೆ ಬಿಟ್ಟು ಹೋಗಿ ದೇವಸ್ಥಾನವೊಂದರಲ್ಲಿ ಮದುವೆನೂ ಆಗಿದ್ದರು. ಆದರೆ, ಯುವತಿಯ ಪೊಷಕರು ತಮ್ಮ ಮಗಳು ಕಾಣೆಯಾದ ಬಗ್ಗೆ ದೂರು ನೀಡಿದ್ದರು. ಆಗ ಜೋಡಿ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ಬಂದಾಗ ಆಗಬಾರದ ಘಟನೆ ಆಗಿದೆ.

ಠಾಣೆಯಲ್ಲೇ ದಂಪತಿಯನ್ನು ದೂರ ಮಾಡಲು ಯುವತಿಯ ಪೊಷಕರು ಪ್ರಯತ್ನ ಮಾಡಿದ್ದಾರೆ. ಪೊಲೀಸರ ಮೇಲೆ ರಾಜಕೀಯ ಒತ್ತಡ ಹೇರಿದ್ದಾರಂತೆ. ಆದರೂ, ಯುವತಿ ಏನೇ ಆದ್ರು ಶೇಖರ್ ಜೊತೆ ಹೋಗುವುದಾಗಿ ಪಟ್ಟು ಹಿಡಿದಿದ್ದಳಂತೆ.

ಇದನ್ನೂ ಓದಿ: ಕೆಲಸದಾಕೆ ಜತೆ ಚಕ್ಕಂದ ಆಡ್ತಾನೆಂದು ಪತಿಗೆ ಚಟ್ಟ ಕಟ್ಟಿದ ಪತ್ನಿ: ಶವಕ್ಕೆ ಸ್ನಾನ ಮಾಡಿ ಮಲಗಿಸಿ ನಾಟಕ!

ಆಗ, ಆಷಾಢ ಮಾಸ ಕಳೆದ ನಂತರ ಇಬ್ಬರಿಗೆ ಕಲ್ಯಾಣ ಮಂಟಪದಲ್ಲಿ ಮರು ಮದುವೆ ಮಾಡುವುದಾಗಿ ನಂಬಿಸಿ ಇಬ್ಬರನ್ನೂ ಯುವತಿ ಪೋಷಕರು ತಮ್ಮ ಕಾರಿನಲ್ಲಿ ಕರೆದುಕೊಂಡು ಚಿಕ್ಕಬಳ್ಳಾಪುರದಿಂದ ದೇವನಹಳ್ಳಿ ಹೊರಟಿದ್ದಾರೆ. ದಾರಿ ಮಧ್ಯೆ ಶೇಖರ್​ನನ್ನು ಕಾರಿನಿಂದ ಕೆಳಗೆ ತಳ್ಳಿ, ತಮ್ಮ ಹುಡುಗಿಯನ್ನು ಕರೆದುಕೊಂಡು ಹೋಗಿದ್ದಾರಂತೆ.

ಶುಕ್ರವಾರ (ಜು.04) ಬೆಳಿಗ್ಗೆ ಶೇಖರ್ ತನ್ನ ಪ್ರಿಯತಮೆಯನ್ನು ಭೇಟಿ ಮಾಡಲು ಆಕೆಯ ಮನೆ ಬಳಿ ಹೋಗಿದ್ದಾರೆ. ಆಗ ಆಕೆಯ ಪೋಷಕರು ಬೈಯ್ದು ವಾಪಸ್ ಕಳುಹಿಸಿದ್ದಾರೆ. ಇದರಿಂದ ಮನನೊಂದ ಶೇಖರ್ ವಾಪಸ್ ತನ್ನೂರಿಗೆ ಆಗಮಿಸಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ