AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಮಳೆ, ಬೆಳೆ ಇಲ್ಲದೇ ದುಬಾರಿಯಾದ ಅವರೇಕಾಯಿ, ಕಡಲೇಕಾಯಿ, ಗೆಣಸು

ರೈತರಂತೂ ಸಕಾಲಕ್ಕೆ ಮಳೆ, ಬೆಳೆ ಇಲ್ಲದೇ ಜಮೀನಿನಲ್ಲಿ ಹಸಿರು ನೋಡಲಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭೂ-ತಾಯಿಗೆ ಸಿರಿಇಲ್ಲದ ಮೇಲೆ ಹಬ್ಬ ಮಾಡುವುದಾದರೂ ಹೇಗೆ ಎಂದು ಅಳಲು ತೋಡಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ: ಮಳೆ, ಬೆಳೆ ಇಲ್ಲದೇ ದುಬಾರಿಯಾದ ಅವರೇಕಾಯಿ, ಕಡಲೇಕಾಯಿ, ಗೆಣಸು
ಚಿಕ್ಕಬಳ್ಳಾಪುರ: ಮಳೆ, ಬೆಳೆ ಇಲ್ಲದೇ ದುಬಾರಿಯಾದ ಅವರೇಕಾಯಿ, ಕಡಲೇಕಾಯಿ, ಗೆಣಸು
TV9 Web
| Edited By: |

Updated on: Jan 13, 2024 | 5:38 PM

Share

ಚಿಕ್ಕಬಳ್ಳಾಪುರ, ಜನವರಿ 13: ಸಂಕ್ರಾಂತಿ (Makar Sankranti) ಎಂದರೆ ರೈತರಿಗೆ ಸುಗ್ಗಿ-ಹುಗ್ಗಿಯ ಹಬ್ಬ. ವರ್ಷವಿಡೀ ಕಷ್ಟಪಟ್ಟು ದುಡಿಯುವ ರೈತರು ಸಂಕ್ರಾಂತಿ ಬಂದರೆ ಸಾಕು ಬೆಳೆದ ಬೆಳೆ, ಜಾನುವಾರು, ಕುಟುಂಬ, ಬಂಧು-ಬಳಗದ ಜೊತೆ ಸುಗ್ಗಿಯನ್ನು ಹುಗ್ಗಿಯನ್ನಾಗಿ ಸಂಭ್ರಮಿಸುವ ಕಾಲವಿತ್ತು. ಆದರೆ ಈ ವರ್ಷ ತೀವ್ರ ಬರಗಾಲ ಹಿನ್ನಲೆ ಸಂಕ್ರಾಂತಿ ಮಾಯವಾಗಿದೆ. ಮತ್ತೊಂದೆಡೆ ಅವರೇಕಾಯಿ, ಕಡಲೇಕಾಯಿ, ಗೆಣಸು ದುಬಾರಿಯಾಗಿದೆ. ಖರೀದಿ ಮಾಡಲಾಗದೇ ಜನ ಹಬ್ಬದ ಸಂದರ್ಭದಲ್ಲೇ ಸಂಕಷ್ಟಕ್ಕೀಡಾಗಿದ್ದಾರೆ.

ಅವರೇಕಾಯಿ, ಕಡಲೇಕಾಯಿ, ಗೆಣಸು, ಕಬ್ಬು ಇಲ್ಲದೇ ಸಂಕ್ರಾಂತಿ ಊಹಿಸಿಕೊಳ್ಳುವುದು ಕಷ್ಟ. ಸಂಕ್ರಾಂತಿಯ ಸುಗ್ಗಿಗೆ ಅವರೇಕಾಯಿ, ಕಡಲೇಕಾಯಿ, ಗೆಣಸು, ಕಬ್ಬು ಬೇಕೇಬೇಕು. ಅವರೇಕಾಯಿ, ಕಡಲೇಕಾಯಿ, ಗೆಣಸನ್ನು ಬೇಯಿಸಿ, ಅದರ ಜೊತೆ ಎಳ್ಳು-ಬೆಲ್ಲ ಸೇರಿಸಿ ಪರಸ್ಪರ ಹಂಚಿ ಶುಭಾಶಯ ಕೋರುವುದು ವಾಡಿಕೆ. ಆದರೆ ಈ ಬಾರಿ ರಾಜ್ಯಾದ್ಯಂತ ತೀವ್ರ ಬರಗಾಲ ಹಿನ್ನಲೆ ಮಳೆಯಿಲ್ಲದೇ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ನಿರೀಕ್ಷೆಯಷ್ಟು ಅವರೇಕಾಯಿ, ಕಡಲೇಕಾಯಿ, ಗೆಣಸು ಬೆಳೆ ಬಂದಿಲ್ಲ. ಅಲ್ಲಿಷ್ಟು ಇಲ್ಲಿಷ್ಟು ಬೆಳೆದಿರುವ ಅವರೇಕಾಯಿ, ಕಡಲೇಕಾಯಿ, ಗೆಣಸು ಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ. ಇದ್ರಿಂದ ಜಿ ಅವರೇಕಾಯಿಗೆ 80 ರೂಪಾಯಿ, ಕೆಜಿ ಕಡಲೇಕಾಯಿಗೆ 100 ರೂಪಾಯಿ, ಕೆಜಿ ಗೆಣಸು 60 ರೂಪಾಯಿಗೆ ಮಾರಾಟ ಮಾಡುತ್ತಿರುವುದಾಗಿ ಚಿಕ್ಕಬಳ್ಳಾಪುರದ ವ್ಯಾಪಾರಿ ಪ್ರದೀಪ್ ತಿಳಿಸಿದ್ದಾರೆ.

ರೈತರಿಗಿಲ್ಲ ಸಂತಸ

ರೈತರಂತೂ ಸಕಾಲಕ್ಕೆ ಮಳೆ, ಬೆಳೆ ಇಲ್ಲದೇ ಜಮೀನಿನಲ್ಲಿ ಹಸಿರು ನೋಡಲಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭೂ-ತಾಯಿಗೆ ಸಿರಿಇಲ್ಲದ ಮೇಲೆ ಹಬ್ಬ ಮಾಡುವುದಾದರೂ ಹೇಗೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಚಿಂತಾಮಣಿ: ಕೈವಾರದ ಬೆಟ್ಟದ ಮೇಲೆ ಶ್ರೀರಾಮನ ಹೆಜ್ಜೆ ಗುರುತು, ವಿಸ್ಮಯಕ್ಕೆ ಕಾರಣವಾಗಿದೆ ಲಕ್ಷ್ಮಣ ತೀರ್ಥ!

ದುಬಾರಿ ಬೆಲೆ ಕೇಳಿ ದಂಗಾದ ಗ್ರಾಹಕರು

ಪೇಟೆಯಲ್ಲಿ ಸರಕು ನಿರೀಕ್ಷೆಯಷ್ಟು ಇಲ್ಲ, ಇದ್ರಿಂದ ಅವರೇಕಾಯಿ, ಕಡಲೇಕಾಯಿ, ಗೆಣಸು, ಕಬ್ಬಿನ ಬೆಲೆ ಕೇಳಿ ಚಿಕ್ಕಬಳ್ಳಾಪುರದ ಗ್ರಾಹಕರು ದಂಗಾಗಿದ್ದಾರೆ. ರಾಜ್ಯಾದ್ಯಂತ ಬರ ಆವರಿಸಿರುವ ಹಿನ್ನಲೆ ರಾಜ್ಯದಲ್ಲಿ ಸಂಕ್ರಾಂತಿಯ ಸುಗ್ಗಿ ಇಲ್ಲದಂತಾಗಿದೆ. ರೈತರಂತು ಜೀವನ ಸಾಗಿಸಲು ಕಷ್ಟಪಡುವಂತಾಗಿದೆ. ಹೊರರಾಜ್ಯದಿಂದ ಬರುವ ಸರಕು ಸಾಮಾನು ಖರೀದಿಸಲಾಗದೇ ಜನರು ಬರಕ್ಕೆ ಶಾಪ ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ