AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಹೆರಿಗೆ ಲಂಚಕ್ಕಾಗಿ ಗರ್ಭಿಣಿ ಪತಿಯ ಮೊಬೈಲ್ ಅಡವಿಟ್ಟುಕೊಂಡ ವೈದ್ಯರು

ಚಿಕ್ಕಬಳ್ಳಾಪುರ ಜಿಲ್ಲೆಯ ಜನರ ಆರೋಗ್ಯದ ಹಿತದೃಷ್ಠಿಯಿಂದ ರಾಜ್ಯಸರ್ಕಾರ ಚಿಕ್ಕಬಳ್ಳಾಪುರದಲ್ಲಿ 525 ಕೋಟಿಗೂ ಹೆಚ್ಚು ಮೊತ್ತದ ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯ ಪ್ರಾರಂಭ ಮಾಡಿದ್ದು, ಇದೇ ವೈದ್ಯಕೀಯ ಕಾಲೇಜಿಗೆ ಒಪ್ಪಂದದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಚಿಕ್ಕಬಳ್ಳಾಪುರ ನಗರದಲ್ಲಿರುವ ಜಿಲ್ಲಾಸ್ಪತ್ರೆಯನ್ನು ನೀಡಿದೆ. ಆದರೆ, ವೈದ್ಯರು ಹೆರಿಗೆ ಮಾಡಲು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ.

ಚಿಕ್ಕಬಳ್ಳಾಪುರ: ಹೆರಿಗೆ ಲಂಚಕ್ಕಾಗಿ ಗರ್ಭಿಣಿ ಪತಿಯ ಮೊಬೈಲ್ ಅಡವಿಟ್ಟುಕೊಂಡ ವೈದ್ಯರು
ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Sep 25, 2023 | 5:48 PM

Share

ಚಿಕ್ಕಬಳ್ಳಾಪುರ, ಸೆ.25: ಜನರ ಆರೋಗ್ಯದ ಹಿತದೃಷ್ಠಿಯಿಂದ ರಾಜ್ಯಸರ್ಕಾರ ಚಿಕ್ಕಬಳ್ಳಾಪುರದಲ್ಲಿ (Chikkaballapur) 525 ಕೋಟಿಗೂ ಹೆಚ್ಚು ಮೊತ್ತದ ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯ ಪ್ರಾರಂಭ ಮಾಡಿದ್ದು, ಇದೇ ವೈದ್ಯಕೀಯ ಕಾಲೇಜಿಗೆ ಒಪ್ಪಂದದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಚಿಕ್ಕಬಳ್ಳಾಪುರ ನಗರದಲ್ಲಿರುವ ಜಿಲ್ಲಾಸ್ಪತ್ರೆಯನ್ನು ನೀಡಿದೆ. ಆದರೆ ವೈದ್ಯಕೀಯ ಕಾಲೇಜಿನ ವೈದ್ಯರುಗಳು ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಸಮರ್ಪಕ ಮಾನವೀಯತೆಯಿಂದ ಕರ್ತವ್ಯ ಸಮರ್ಪಣೆಯಿಂದ ಚಿಕಿತ್ಸೆ ನೀಡದೇ ಬೇಜವಬ್ದಾರಿಯಿಂದ ವರ್ತಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.

ಇನ್ನೂ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರದ ಹಿರೇಬಿದನೂರು ನಿವಾಸಿ ಎನ್.ಅಮೃತಾ ಹೆರಿಗೆಗೆಂದು ಸೆಪ್ಟೆಂಬರ್-18 ರಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೆಪ್ಟೆಂಬರ್-19 ರಂದು ಬೆಳಿಗ್ಗೆ 1-00 ಗಂಟೆಗೆ ಸಿಜರಿಯನ್ ಹೆರಿಗೆ ಮಾಡಿಸಲಾಗಿದೆ. ಹೆರಿಗೆ ಸಂದರ್ಭದಲ್ಲಿ 4000 ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿದೆ. ಅಮೃತ ಹಾಗೂ ಆಕೆಯ ಗಂಡ ರಘು ಹಾಗೂ ತಂದೆ-ತಾಯಿ ಕಡುಬಡವರಾಗಿದ್ದು, ಲಂಚ ನೀಡಲು ಹಣವಿರಲಿಲ್ಲ. ಆಗ ಕರ್ತವ್ಯನಿರತ ವೈದ್ಯರು ಬಾಣಂತಿಯ ಗಂಡ ರಘುವಿನ ಮೊಬೈಲ್ ಪೋನ್‍ನನ್ನು ಲಂಚಕ್ಕಾಗಿ ಅಡವಿಟ್ಟುಕೊಂಡಿದ್ದರು. ಅಂದು ಬೆಳಿಗ್ಗೆ ಬಾಣಂತಿಯ ಕಾಲು, ಚೈನನ್ನು ಅಡವಿಟ್ಟು, 2000 ರೂಪಾಯಿ ಲಂಚ ನೀಡಿದ್ದಾರೆ. ನಂತರ ಅವರ ಮೊಬೈಲ್‍ನ್ನು ಹಿಂತಿರುಗಿಸಲಾಗಿದೆ. ನಂತರ ಸೆಪ್ಟೆಂಬರ್-23 ರಂದು ಬೆಳಿಗ್ಗೆ ಬಾಣಂತಿಯನ್ನು ಡಿಸ್ಚಾರ್ಜ್ ಮಾಡಬೇಕಿತ್ತು. ಆದರೆ ಬಾಕಿ 2000 ರೂಪಾಯಿ ಲಂಚದ ಹಣ ನೀಡುವವರೆಗೂ ಚಿಕಿತ್ಸೆಗೆ ಹಾಗೂ ಡಿಸ್ಚಾರ್ಜ್‍ಗೆ ಮುಂದಾಗಿಲ್ಲ. ಅಂದು ಮಧ್ಯಾಹ್ನ ಬಾಣಂತಿಯ ನೊಂದ ತಂದೆ ಟಿವಿ-9ಗೆ ಕರೆ ಮಾಡಿ, ಲಂಚದ ವಿಚಾರ ಹೇಳಿಕೊಂಡು ಸಹಾಯಕ್ಕೆ ಮೊರೆಹಿಟ್ಟಿದ್ದರು.

ಅಂದು ಟಿವಿ-9 ಪ್ರತಿನಿಧಿ ಭೀಮಪ್ಪ ಪಾಟೀಲ, ಸಾರ್ವಜನಿಕ ಕಳಕಳಿ ಹಾಗೂ ಮಾನವೀಯತೆಯಿಂದ ಆಸ್ಪತ್ರೆಗೆ ತೆರೆಳಿ ಅವರ ಬಳಿ ಮಾಹಿತಿ ಪಡೆಯುತ್ತಿದ್ದಂತೆ, ನಂತರವಷ್ಟೆ ವೈದ್ಯರು ಬಾಣಂತಿಗೆ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಿದ್ದಾರೆ.

ಇದನ್ನೂ ಓದಿ: HN Valley ಎಫೆಕ್ಟ್​! ಜಿಲ್ಲೆಯೆಲ್ಲಾ ಬರ ಇದ್ದರೂ ಚಿಕ್ಕಬಳ್ಳಾಪುರ ತಾಲ್ಲೂಕು ಹಸಿರು ಸಿರಿಸಂಪನ್ನ

ಆಗಲೂ ನೊಂದವರು ವೈದ್ಯರ ಲಂಚಾವತಾರವನ್ನು ಟಿವಿ-9ಗೆ ತಿಳಿಸಿದ ಕಾರಣ, ಬಾಣಂತಿಗೆ ಎದೆಹಾಲು ಬರುವುದಿಲ್ಲವೆಂದು ಆಕೆಗೆ ಭಯ, ಭೀತಿ ಉಂಟು ಮಾಡಿ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಹೆರಿಗೆಗೆಂದು ದಾಖಲಾದ ಸಮಯದಲ್ಲಿ ದಾದಿಯರು, ವೈದ್ಯರು ಸೇರಿದಂತೆ ಕಡುಬಡವರಿಂದ 24,000 ರೂಪಾಯಿ ಹಣ ವಸೂಲಿ ಮಾಡಿರುವ ಬಗ್ಗೆ ಆರೋಪ ಕೇಳಿಬಂದಿದೆ.

ಆಸ್ಪತ್ರೆಗೆ ಬರುವವರು ಕಡುಬಡವರೆನ್ನದೇ ಮಾನವೀಯತೆ ಇಲ್ಲದೇ, ತಾವು ಸರ್ಕಾರಿ ವೈದ್ಯರೂ ಎನ್ನುವ ಸೌಜನ್ಯವೂ ಇಲ್ಲದೇ ಪ್ರತಿಯೊಂದು ಹೆರಿಗೆಗೂ ಗಂಡು ಮಗುವಿಗಿಷ್ಟು, ಹೆಣ್ಣು ಮಗುವಿಗಿಷ್ಟು ಎಂಬುದಾಗಿ ಲಂಚ ಫಿಕ್ಸ್ ಮಾಡಿರುವ ಆರೋಪ ಹಾಗೂ ದೂರುಗಳು ಕೇಳಿಬಂದಿವೆ.

ಇನ್ನೂ ಇಂದು ನಡೆದ ಜನತಾ ದರ್ಶನದಲ್ಲಿ ಈ ವಿಚಾರವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಗಮನಕ್ಕೆ ತರಲಾಯಿತು. ಸಚಿವರು ಅಯ್ಯೊ ಚಿಕ್ಕಬಳ್ಳಾಪುರ ಅಷ್ಟೆ ಅಲ್ಲಾ ಚಿಂತಾಮಣಿಯಲ್ಲೂ ಈ ರೀತಿಯ ಘಟನೆಗಳು ನಡೆದಿವೆ. ಈ ಪ್ರಕರಣವನ್ನು ತನಿಖೆ ನಡೆಸಿ ಸೂಕ್ತ ವರದಿ ನೀಡುವಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್