AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur News: ಕೆ ಸುಧಾಕರ್ ನೀಡಿರುವ ಹಕ್ಕುಪತ್ರಗಳು ನಕಲಿ ಎಂದ ಪ್ರದೀಪ್ ಈಶ್ವರ್; ಅಧಿಕಾರಿಗಳ ವಿರುದ್ಧ ಗರಂ

ಮಾಜಿ ಸಚಿವ ಡಾ. ಕೆ ಸುಧಾಕರ್ ನೀಡಿರುವ ಹಕ್ಕುಪತ್ರಗಳು ನಕಲಿ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ನೂತನ ಶಾಸಕ ಪ್ರದೀಪ್ ಈಶ್ವರ್ ಅಯ್ಯರ್‌, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Chikkaballapur News: ಕೆ ಸುಧಾಕರ್ ನೀಡಿರುವ ಹಕ್ಕುಪತ್ರಗಳು ನಕಲಿ ಎಂದ ಪ್ರದೀಪ್ ಈಶ್ವರ್; ಅಧಿಕಾರಿಗಳ ವಿರುದ್ಧ ಗರಂ
ಪ್ರದೀಪ್ ಈಶ್ವರ್
Ganapathi Sharma
|

Updated on:May 29, 2023 | 5:35 PM

Share

ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಾ. ಕೆ ಸುಧಾಕರ್ ನೀಡಿರುವ ಹಕ್ಕುಪತ್ರಗಳು ನಕಲಿ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ನೂತನ ಶಾಸಕ ಪ್ರದೀಪ್ ಈಶ್ವರ್ (Pradeep Eshwar), ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅನಧಿಕೃತವಾಗಿ ಹಕ್ಕು ಪತ್ರಗಳನ್ನು ಹಂಚಿದವರು ಯಾರು ಎಂದು ಪ್ರಶ್ನಿಸಿದರು. ಜತೆಗೆ, ನಕಲಿ ಹಕ್ಕುಪತ್ರಗಳನ್ನು ನೀಡಿದ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದರೆ ನಾನು ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಇದರ ಬಗ್ಗೆ ಶಾಸನ ಸಭೆಯಲ್ಲಿ ಪ್ರಶ್ನಿಸಿ ಅಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲು ಮಾಡಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಮಾರ್ಚ್ 28-29 ರಂದು ಮಾಜಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ 21 ಸಾವಿರ ಜನರಿಗೆ ಹಕ್ಕುಪತ್ರಗಳನ್ನು ಹಂಚಿದ್ದರು.

ಚಿಕ್ಕಬಳ್ಳಾಫುರದಲ್ಲಿ ನಿರ್ಮಾಣ ಹಂತದ ಸರ್ಕಾರಿ ಮೆಡಿಕಲ್ ಕಾಲೇಜು ಉದ್ಘಾಟನೆ ಮಾಡಲಾಗಿದೆ. ಇನ್ನೂ 400 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಬೇಕಿದೆ. ಕಾಲೇಜು ಕಟ್ಟಡ ಕಾಮಗಾರಿ ಮುಗಿದ ಮೇಲೆ ಮತ್ತೆ ಉದ್ಘಾಟನೆ ಮಾಡುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕಾಲೇಜು ಉದ್ಘಾಟನೆ ಮಾಡಿಸುತ್ತೇವೆ. ಕಟ್ಟಡ ಕಾಮಗಾರಿ ಇನ್ನೂ ಪ್ರಗತಿಯಲ್ಲಿದೆ. ರಾಜಕೀಯ ಲಾಭಕ್ಕಾಗಿ ಬಿಜೆಪಿ ಸರ್ಕಾರ ಕಾಲೇಜು ಉದ್ಘಾಟನೆ ಮಾಡಿದೆ ಎಂದೂ ಪ್ರದೀಪ್ ಈಶ್ವರ್ ಹೇಳಿದರು.

ಜೈಲಿಗೆ ಹಾಕಿದ್ದಕ್ಕೆ ನಾನು ಎಂಎಲ್ ಎ ಆದೆ‌

ಜೈಲಿಗೆ ಹಾಕಿದ್ದಕ್ಕೆ ನಾನು ಎಂಎಲ್​​ಎ ಆದೆ‌. ಜೈಲಿಗೆ ಹಾಕಿಲ್ಲ ಅಂದಿದ್ದರೆ ನಾನು ಲೆಕ್ಚರರ್ ಆಗಿ ಇರ್ತಿದ್ದೆ. ಕುತಂತ್ರ ಮಾಡಿ ಪೊಲೀಸರಿಂದ ನನ್ನ ಮೇಲೆ ಕೇಸ್ ಗಳು ಹಾಕಿಸಿ ಜೈಲಿಗೆ ಹಾಕಿದ್ರು. ಅದಕ್ಕಾಗಿಯೇ ನಾನು ಪಾಸಿಟಿವ್ ಆಗಿ ತಗೊಂಡು ಎಂಎಲ್ಎ ಆಗಿದ್ದೀನಿ ಎಂದು ಅವರು ಹೇಳಿದರು.

ಇದನ್ನೂ ಓದಿ:  ಚುನಾವಣೆಯಲ್ಲಿ ಡಾ.ಕೆ ಸುಧಾಕರ್ ಸೋಲಿಸಿ ಗೆದ್ದ ಶಾಸಕ ಪ್ರದೀಪ್​ ಈಶ್ವರ್​ಗೆ ರಣ ಬೇಟೆಗಾರ ಬಿರುದು

‘ಚಿಕ್ಕಬಳ್ಳಾಪುರ ನಗರದಲ್ಲಿ ನನ್ನ ಫ್ಲೆಕ್ಸ್ ಇರಬಾರದು’

ಚಿಕ್ಕಬಳ್ಳಾಪುರ ನಗರದಲ್ಲಿ ನನ್ನ ಫ್ಲೆಕ್ಸ್ ಇರಬಾರದು ಎಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರಸಭೆ ಆಯುಕ್ತರಿಗೆ ಪ್ರದೀಪ್ ಈಶ್ವರ್ ಸೂಚನೆ ನೀಡಿದ್ದಾರೆ. ನನ್ನ ಫ್ಲೆಕ್ಸ್ ಇರಬಾರದು ಬೇರೆಯವರ ಫ್ಲೆಕ್ಸ್ ಕೂಡ ಇರಬಾರದು. ಚಿಕ್ಕಬಳ್ಳಾಪುರ ನಗರ ಕ್ಲೀನ್ ಆಗಿರಬೇಕು. ಅಧಿಕಾರಿಗಳೇ, ಶಾಸಕರ ಪೋಟೋ ಇದೆ ಅಂತ ಭಯ ಬೀಳಬೇಡಿ. ನಾಳೆಯಿಂದ ಚಿಕ್ಕಬಳ್ಳಾಪುರ ನಗರದಲ್ಲಿ ಯಾವ ಫ್ಲೆಕ್ಸ್ ಇರಬಾರದು. ಫಸ್ಟ್ ನನ್ನ ಪೋಟೋ ಇರುವ ಫ್ಲೆಕ್ಸ್ ಕಿತ್ತು ಹಾಕಿ. ಚಿಕ್ಕಬಳ್ಳಾಪುರ ದಲ್ಲಿ ಫ್ಲೆಕ್ಸ್ ಕಲ್ಚರ್ ಇರಬಾರದು. ಯಾವ ಇನ್ ಪ್ಲೂಯನ್ಸ್ ಬಂದ್ರೂ ತಲೆ ಕೆಡಿಸಿಕೊಳ್ಳಬೇಡಿ ಅಂತ ಅಧಿಕಾರಿಗಳಿಗೆ ಅಭಯ ನೀಡಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಡಾ. ಕೆ ಸುಧಾಕರ್​ರನ್ನ ಸೋಲಿಸಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್, ರಾಜ್ಯದ ಗಮನವನ್ನು ಸೆಳೆದಿದ್ದಾರೆ. ನಾನು ಪ್ರಭಾವಿ ವ್ಯಕ್ತಿಯನ್ನು ಸೋಲಿಸಿದ್ದಕ್ಕೆ, ನನಗೆ ಅಪಾರ ಗೌರವ ಮನ್ನಣೆ ಸಿಕ್ತಿದೆ. ಸರ್ಕಾರದಲ್ಲಿ ನನಗೆ ಯಾವುದೇ ಸಚಿವ ಸ್ಥಾನ, ನಿಗಮ ಮಂಡಳಿಯೂ ಬೇಡವೆ ಬೇಡ. ನಾನು ಸಾಮಾನ್ಯರಲ್ಲಿ ಸಾಮಾನ್ಯನಾಗಿ ಇರುತ್ತೇನೆ ಎಂದು ಅವರು ಇತ್ತೀಚೆಗೆ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:28 pm, Mon, 29 May 23

ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
ಆಗಸ್ಟ್ ಕೊನೆಯಲ್ಲಿ ಮತ್ತೆ ಟೋಯಿಂಗ್ ಶುರು: ಗೃಹ ಸಚಿವ ಪರಮೇಶ್ವರ್ ಘೋಷಣೆ
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್
‘ಅದೃಷ್ಟ ದೇವತೆ ಬಟ್ಟೆ ಬಿಚ್ಚಿಸುವವರು ದೇವರಿಗೆ ವಂದಿಸುತ್ತಾರೆ’; ಪ್ರಥಮ್