AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur News: ಚಿಂತಾಮಣಿಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್​​ಗಿರಿ

ಮುಸ್ಲಿಂ ಯುವತಿ ಜತೆ ಹಿಂದೂ ಯುವಕ ಇದ್ದಿದ್ದಕ್ಕೆ ಆತನ ಮೇಲೆ ಹಲ್ಲೆ ಯತ್ನ ನಡೆಸಲಾಗಿದೆ. ಜತೆಗೆ ಮುಸ್ಲಿಂ ಯುವತಿ ಮೇಲೆಯೂ ಹಲ್ಲೆಗೆ ಯತ್ನ ನಡೆಸಿದ್ದಾರೆ.

Follow us
Ganapathi Sharma
|

Updated on:Jun 07, 2023 | 4:19 PM

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ (Chintamani) ಮೆಹಬೂಬ್​​ ನಗರದಲ್ಲಿ ಯುವಕರು  ನೈತಿಕ ಪೊಲೀಸ್​​ಗಿರಿ (Moral Policing) ನಡೆಸಿರುವುದು ತಿಳಿದುಬಂದಿದೆ. ಮುಸ್ಲಿಂ ಯುವತಿ ಜತೆ ಹಿಂದೂ ಯುವಕ ಇದ್ದಿದ್ದಕ್ಕೆ ಆತನ ಮೇಲೆ ಹಲ್ಲೆ ಯತ್ನ ನಡೆಸಲಾಗಿದೆ. ಜತೆಗೆ ಮುಸ್ಲಿಂ ಯುವತಿ ಮೇಲೆಯೂ ಹಲ್ಲೆಗೆ ಯತ್ನ ನಡೆಸಿದ್ದಾರೆ. ಚೇಳೂರು ಮೂಲದ ಯುವತಿ, ಚಿಂತಾಮಣಿ ಮೂಲದ ಯುವಕ ಜತೆಗೆ ಇದ್ದಾಗ ಸ್ಥಳಕ್ಕೆ ಬಂದ ಯುವಕರು ಯುವಕನನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದಲ್ಲಿ ಇನ್ಮುಂದೆ ನೈತಿಕ ಪೊಲೀಸ್​ಗಿರಿಗೆ ಅವಕಾಶ ಇಲ್ಲ, ಹೀಗೆ ಮಾಡುವವರ‌ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಇತ್ತೀಚೆಗೆ ಪೊಲೀಸ್​ ಇಲಾಖೆಗೆ ಖಡಕ್ ಸೂಚನೆ ನೀಡಿದ್ದರು. ಬಳಿಕ ಅಧಿಕಾರಿಗಳು ಕೂಡ ನೈತಿಕ ಪೊಲೀಸ್​ ಗಿರಿ ನಡೆಸುವವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಇದಾದ ಬೆನ್ನಲ್ಲೇ ರಾಜ್ಯದ ಹಲವು ಕಡೆ ನೈತಿಕ ಪೊಲೀಸ್​ಗಿರಿ ನಡೆದಿರುವ ಬಗ್ಗೆ ವರದಿಯಾಗಿವೆ.

ಇದನ್ನೂ ಓದಿ: Mangaluru News: ಸೋಮೇಶ್ವರ ಬೀಚ್​ನಲ್ಲಿ ನೈತಿಕ ಪೊಲೀಸ್​ಗಿರಿ; ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ

ಕರಾವಳಿ ನಗರ ಮಂಗಳೂರಿನ ಸೋಮೇಶ್ವರ ಬೀಚ್​ನಲ್ಲಿ ಕೆಲವು ದಿನಗಳ ಹಿಂದಷ್ಟೇ ನೈತಿಕ ಪೊಲೀಸ್​ಗಿರಿ ನಡೆದಿದ್ದು, ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿತ್ತು. ಅದಕ್ಕೂ ಮುನ್ನ, ಚಿಕ್ಕಬಳ್ಳಾಪುರ ನಗರದ ಗೋಪಿಕಾ ಚಾಟ್ಸ್ ಬಳಿ ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಹೋಟೆಲ್​ಗೆ ಹೋಗಿದಕ್ಕೆ ಮುಸ್ಲಿಂ ಯುವಕರ ಗುಂಪು ನೈತಿಕ ಪೊಲೀಸ್ ಗಿರಿ ನಡೆಸಿತ್ತು. ಆ ನಂತರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಕೂಡ ನೈತಿಕ ಪೊಲೀಸ್ ಗಿರಿ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:09 pm, Wed, 7 June 23

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ