AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur News: ಚಿಂತಾಮಣಿಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್​​ಗಿರಿ

ಮುಸ್ಲಿಂ ಯುವತಿ ಜತೆ ಹಿಂದೂ ಯುವಕ ಇದ್ದಿದ್ದಕ್ಕೆ ಆತನ ಮೇಲೆ ಹಲ್ಲೆ ಯತ್ನ ನಡೆಸಲಾಗಿದೆ. ಜತೆಗೆ ಮುಸ್ಲಿಂ ಯುವತಿ ಮೇಲೆಯೂ ಹಲ್ಲೆಗೆ ಯತ್ನ ನಡೆಸಿದ್ದಾರೆ.

ಗಣಪತಿ ಶರ್ಮಾ
|

Updated on:Jun 07, 2023 | 4:19 PM

Share

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ (Chintamani) ಮೆಹಬೂಬ್​​ ನಗರದಲ್ಲಿ ಯುವಕರು  ನೈತಿಕ ಪೊಲೀಸ್​​ಗಿರಿ (Moral Policing) ನಡೆಸಿರುವುದು ತಿಳಿದುಬಂದಿದೆ. ಮುಸ್ಲಿಂ ಯುವತಿ ಜತೆ ಹಿಂದೂ ಯುವಕ ಇದ್ದಿದ್ದಕ್ಕೆ ಆತನ ಮೇಲೆ ಹಲ್ಲೆ ಯತ್ನ ನಡೆಸಲಾಗಿದೆ. ಜತೆಗೆ ಮುಸ್ಲಿಂ ಯುವತಿ ಮೇಲೆಯೂ ಹಲ್ಲೆಗೆ ಯತ್ನ ನಡೆಸಿದ್ದಾರೆ. ಚೇಳೂರು ಮೂಲದ ಯುವತಿ, ಚಿಂತಾಮಣಿ ಮೂಲದ ಯುವಕ ಜತೆಗೆ ಇದ್ದಾಗ ಸ್ಥಳಕ್ಕೆ ಬಂದ ಯುವಕರು ಯುವಕನನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದಲ್ಲಿ ಇನ್ಮುಂದೆ ನೈತಿಕ ಪೊಲೀಸ್​ಗಿರಿಗೆ ಅವಕಾಶ ಇಲ್ಲ, ಹೀಗೆ ಮಾಡುವವರ‌ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಇತ್ತೀಚೆಗೆ ಪೊಲೀಸ್​ ಇಲಾಖೆಗೆ ಖಡಕ್ ಸೂಚನೆ ನೀಡಿದ್ದರು. ಬಳಿಕ ಅಧಿಕಾರಿಗಳು ಕೂಡ ನೈತಿಕ ಪೊಲೀಸ್​ ಗಿರಿ ನಡೆಸುವವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಇದಾದ ಬೆನ್ನಲ್ಲೇ ರಾಜ್ಯದ ಹಲವು ಕಡೆ ನೈತಿಕ ಪೊಲೀಸ್​ಗಿರಿ ನಡೆದಿರುವ ಬಗ್ಗೆ ವರದಿಯಾಗಿವೆ.

ಇದನ್ನೂ ಓದಿ: Mangaluru News: ಸೋಮೇಶ್ವರ ಬೀಚ್​ನಲ್ಲಿ ನೈತಿಕ ಪೊಲೀಸ್​ಗಿರಿ; ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ

ಕರಾವಳಿ ನಗರ ಮಂಗಳೂರಿನ ಸೋಮೇಶ್ವರ ಬೀಚ್​ನಲ್ಲಿ ಕೆಲವು ದಿನಗಳ ಹಿಂದಷ್ಟೇ ನೈತಿಕ ಪೊಲೀಸ್​ಗಿರಿ ನಡೆದಿದ್ದು, ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿತ್ತು. ಅದಕ್ಕೂ ಮುನ್ನ, ಚಿಕ್ಕಬಳ್ಳಾಪುರ ನಗರದ ಗೋಪಿಕಾ ಚಾಟ್ಸ್ ಬಳಿ ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಹೋಟೆಲ್​ಗೆ ಹೋಗಿದಕ್ಕೆ ಮುಸ್ಲಿಂ ಯುವಕರ ಗುಂಪು ನೈತಿಕ ಪೊಲೀಸ್ ಗಿರಿ ನಡೆಸಿತ್ತು. ಆ ನಂತರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಕೂಡ ನೈತಿಕ ಪೊಲೀಸ್ ಗಿರಿ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:09 pm, Wed, 7 June 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?