ಇತ್ತ ನಾಳೆ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷರ ಚುನಾವಣೆ; ಅತ್ತ ಜೆಡಿಎಸ್​ನ ಇಬ್ಬರು ಸದಸ್ಯರು ನಾಪತ್ತೆ

ಚಿಕ್ಕಬಳ್ಳಾಪುರ(Chikkaballapur) ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಾಳೆ ನಡೆಯಲಿದ್ದು, ಇತ್ತ ಜೆಡಿಎಸ್​(JDS)ನ ಇಬ್ಬರು ನಗರಸಭೆ ಸದಸ್ಯರು ನಾಪತ್ತೆಯಾಗಿದ್ದಾರೆ. ಇದರ ಜೊತೆಗೆ ಚುನಾವಣೆಯ ಕೊನೆ ಕ್ಷಣದಲ್ಲಿ ಸಂಸದ ಸುಧಾಕರ್ ಬೆಂಬಲಿಗರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಇತ್ತ ನಾಳೆ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷರ ಚುನಾವಣೆ; ಅತ್ತ ಜೆಡಿಎಸ್​ನ ಇಬ್ಬರು ಸದಸ್ಯರು ನಾಪತ್ತೆ
ಇತ್ತ ನಾಳೆ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷರ ಚುನಾವಣೆ; ಅತ್ತ ಜೆಡಿಎಸ್​ನ ಇಬ್ಬರು ಸದಸ್ಯರು ನಾಪತ್ತೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 11, 2024 | 9:25 PM

ಚಿಕ್ಕಬಳ್ಳಾಪುರ, ಸೆ.11: ನಾಳೆ(ಸೆ.12) ಚಿಕ್ಕಬಳ್ಳಾಪುರ(Chikkaballapur) ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆಯಲಿದ್ದು, ಇತ್ತ ಜೆಡಿಎಸ್​(JDS)ನ ಇಬ್ಬರು ನಗರಸಭೆ ಸದಸ್ಯರಾದ ಮಟಮಪ್ಪ ಹಾಗೂ ವೀಣಾ ರಾಮು ಎನ್ನುವವರು ನಾಪತ್ತೆಯಾಗಿದ್ದಾರೆ. ಈ ಹಿನ್ನಲೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಮುನಿಯಪ್ಪ, ‘ಕಾಂಗ್ರೆಸ್ ಮುಖಂಡರೇ ಬಚ್ಚಿಟ್ಟಿದ್ದಾರೆಂದು ಆರೋಪಿಸುತ್ತಿದ್ದಾರೆ.

ಹೈಕೋರ್ಟ್ ಮೆಟ್ಟಿಲೇರಿದ ಸಂಸದ ಸುಧಾಕರ್ ಬೆಂಬಲಿಗರು

ಇನ್ನು ನಾಳೆ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯ ಕೊನೆ ಕ್ಷಣದಲ್ಲಿ ಸಂಸದ ಸುಧಾಕರ್ ಬೆಂಬಲಿಗರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೌದು, ನಗರಸಭೆ ಮತದಾರರ ಪಟ್ಟಿಗೆ ಅಕ್ರಮವಾಗಿ ಪರಿಷತ್ ಸದಸ್ಯರಾದ ಎಂ.ಆರ್  ಸೀತಾರಾಂ ಹಾಗೂ ಅನಿಲ್ ಕುಮಾರ್ ಸ್ಥಳೀಯವಾಗಿ ವಾಸವಿಲ್ಲದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ಸೇರ್ಪಡೆ ಆಗಿದ್ದಾರೆ ಎಂದು ಆರೋಪಿಸಿ ಚಿಕ್ಕಬಳ್ಳಾಪುರ ನಗರಸಭಾ ಸದಸ್ಯ ಆನಂದ್ ರೆಡ್ಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಕುರಿತು ಹೈಕೋರ್ಟ್​ನಿಂದ ಮದ್ಯಂತರ ಆದೇಶ ಬಂದಿದ್ದು, ಮುಚ್ಚಿದ ಲಕೋಟೆಯಲ್ಲಿ ಎಂ.ಎಲ್.ಸಿ ಗಳು ಮತದಾನ ಮಾಡಲು ಅವಕಾಶ ಹಾಗೂ ರಿಟ್ ಅರ್ಜಿ ಅಂತಿಮ ಆದೇಶಕ್ಕೆ ಒಳಪಟ್ಟು ಫಲಿತಾಂಶ ಪ್ರಕಟಿಸಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ:ಕಾಂಗ್ರೆಸ್​ನಲ್ಲಿ ಬಣ ಬಡಿದಾಟ: ಬಿಜೆಪಿ ಕಡೆಯಿಂದ ಗಂಗಾವತಿ ನಗರಸಭೆ ಅಧ್ಯಕ್ಷನಾದ ಮುಸ್ಲಿಂ ಸದಸ್ಯ

ಕೆಎಸ್​ಆರ್​ಟಿಸಿ ಬಸ್​ ಹರಿದು ಬೈಕ್​ ಸವಾರ ಸಾವು

ಮೈಸೂರು: ಗಣಪತಿ ಸಚ್ಚಿದಾನಂದ ಆಶ್ರಮ ಬಳಿ ಕೆಎಸ್​ಆರ್​ಟಿಸಿ ಬಸ್​ ಹರಿದು ಬೈಕ್​ ಸವಾರ ಸಯ್ಯದ್ ನೌಮಾನ್(27) ಸಾವನ್ನಪ್ಪಿದ್ದಾನೆ. ಬೈಕ್​ನಲ್ಲಿ ಹೋಗುತ್ತಿದ್ದಾನೆ ಹಸು ಅಡ್ಡ ಬಂದಿದ್ದಕ್ಕೆ ಕೆಳಗೆ ಬಿದ್ದಿದ್ದ ಸವಾರ ಸಯ್ಯದ್ ಮೇಲೆ ಕೆಎಸ್​ಆರ್​ಟಿಸಿ ಬಸ್ ಹರಿದಿದ್ದು, ಈ ಕುರಿತು ಕೆ.ಆರ್.ಸಂಚಾರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:21 pm, Wed, 11 September 24

ವಿಡಿಯೋ: ದರ್ಶನ್ ಕಾಣಲು ವಿಜಯಲಕ್ಷ್ಮಿ ಜೊತೆ ಬಂದ ಧನ್ವೀರ್
ವಿಡಿಯೋ: ದರ್ಶನ್ ಕಾಣಲು ವಿಜಯಲಕ್ಷ್ಮಿ ಜೊತೆ ಬಂದ ಧನ್ವೀರ್
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ