AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಕನಸು ಈಡೇರುವ ಮುನ್ನ ವಿಧಿಯಾಟಕ್ಕೆ ಬಲಿಯಾದ ಪತಿಯ ನೆನೆದು ಕಣ್ಣೀರಿಟ್ಟ ನಂದಿ ಗ್ರಾಮ ಪಂ. ನೂತನ ಅಧ್ಯಕ್ಷೆ

ತನ್ನ ಪತ್ನಿಯನ್ನು ನಂದಿ ಗ್ರಾಮ ಪಂಚಾಯತ್ ಅಧ್ಯಕ್ಷೆಯನ್ನಾಗಿಸುವ ಕನಸು ಕಂಡಿದ್ದ ಶ್ರೀನಿವಾಸ್ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಇದೀಗ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಮೃತನ ಪತ್ನಿ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

ಚಿಕ್ಕಬಳ್ಳಾಪುರ: ಕನಸು ಈಡೇರುವ ಮುನ್ನ ವಿಧಿಯಾಟಕ್ಕೆ ಬಲಿಯಾದ ಪತಿಯ ನೆನೆದು ಕಣ್ಣೀರಿಟ್ಟ ನಂದಿ ಗ್ರಾಮ ಪಂ. ನೂತನ ಅಧ್ಯಕ್ಷೆ
ನಂದಿ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಮಾಲಿನಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: Rakesh Nayak Manchi|

Updated on: Aug 08, 2023 | 8:10 PM

Share

ಚಿಕ್ಕಬಳ್ಳಾಪುರ, ಆಗಸ್ಟ್ 8: ತಾಲೂಕಿನ ನಂದಿ ಗ್ರಾಮ ಪಂಚಾಯತ್ (Nandi Gram Panchayat) ಸದಸ್ಯೆಯಾಗಿದ್ದ ಮಹಿಳೆಯೊಬ್ಬರು ತನ್ನ ಪತಿಯ ಕನಸು ಈಡೇರಿಸಲು ಅದ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಆದರೆ ಕನಸು ಈಡೇರುವ ಮುನ್ನವೇ ಮಹಿಳೆಯ ಪತಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆದರೀಗ, ಮೃತನ ಪತ್ನಿ ಪಂಚಾಯತ್ ಅಧ್ಯಕ್ಷೆಯಾಗಿಯೂ ನೇಮಕಗೊಂಡಿದ್ದಾರೆ. ಆದರೆ ಇಂದು ನನ್ನ ಪತಿ ಇರುತ್ತಿದ್ದರೆ ಸಂತೋಷ ಪಡುತ್ತಿದ್ದರು, ಆದರೆ ಇಂದು ಅವರೇ ಇಲ್ಲ ಎಂದು ಮಹಿಳೆ ಕಣ್ಣೀರಿಟ್ಟಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮ ಪಂಚಾಯತಿಯಲ್ಲಿ ಇಂದು ಅದ್ಯಕ್ಷ, ಉಪಾಧ್ಯಕ್ಷ ಸ್ಥಾನದ ಎರಡನೇ ಅವದಿಯ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ನಂದಿ ಗ್ರಾಮ ಪಂಚಾಯತಿಯ ಸದಸ್ಯೆಯಾಗಿದ್ದ ಮಾಲಿನಿ ಶ್ರೀನಿವಾಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದರು. ಅದರಂತೆ ಅಧ್ಯಕ್ಷೆಯಾಗಿಯೂ ಚುನಾಯಿತರಾಗಿದ್ದಾರೆ.

ಇದನ್ನೂ ಓದಿ: ಬಳ್ಳಾರಿ: ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದ ತೃತೀಯಲಿಂಗಿ

ಅಧ್ಯಕ್ಷೆಯಾಗಿ ಆಯ್ಕೆಯಾದ ನಂತರ ಮಾಲಿನಿ ಅವರು ತಮ್ಮ ಅಭಿಮಾನಿಗಳು ಮತ್ತು ಮುಖಂಡರೊಂದಿಗೆ ಸಂಭ್ರಮಿಸಿದರು. ಇದೇ ವೇಳೆ ಮಾತನಾಡಿದ ಅವರು, ತಾನು ನಂದಿ ಗ್ರಾಮ ಪಂಚಾಯತಿಯಲ್ಲಿ ಒಮ್ಮೆಯಾದರೂ ಅಧ್ಯಕ್ಷೆಯಾಗಬೇಕು ಅಂತ ತನ್ನ ಪತಿ ಶ್ರೀನಿವಾಸ್ ಬಯಸಿದ್ದರು. ಆದರೆ ಅವರು ಬದುಕಿದ್ದಾಗ ಅವರ ಕನಸು ಈಡೇರಲಿಲ್ಲ, ಈಗ ಈಡೇರಿದೆ. ಆದರೆ ಸಂತೋಷ ಪಡಲು ಅವರೇ ಇಲ್ಲ. ಅದಾಗ್ಯೂ, ಈಗ ಅವರ ಆತ್ಮಕ್ಕೆ ಈಗಲಾದರೂ ಶಾಂತಿ ಸಿಕ್ಕಿದೆ ಎಂದು ಕಣ್ಣೀರಿಟ್ಟರು.

ಮುಂದಿನ ದಿನಗಳಲ್ಲಿ ನಂದಿ ಪಂಚಾಯತಿಯ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಂಚಾಯತಿಯನ್ನು ಮತ್ತಷ್ಟು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವುದಾಗಿ ಹಾಗೂ ಮಾದರಿ ಕೆಲಸ ಮಾಡುವುದಾಗಿ ಪಂಚಾಯತ್ ನೂತನ ಅಧ್ಯಕ್ಷೆ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!