AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ; ಸತ್ಯಸಾಯಿ ಆಶ್ರಮದಲ್ಲಿ 2ನೇ ಆವೃತ್ತಿಯ ಇಂಡಿಯಾ ಸ್ಟಾರ್ಟ್‌ ಅಪ್ ಉತ್ಸವ

Agriculture Technology; ಕೃಷಿ ಕ್ಷೇತ್ರದಲ್ಲಿ, ಅದರಲ್ಲಿಯೂ ಸಣ್ಣ ಮತ್ತು ಅತಿ ಸಣ್ಣ ರೈತರು ಎದುರಿಸುವಂತಹ ಸಮಸ್ಯೆಗಳು ಮತ್ತು ಸವಾಲುಗಳನ್ನು ಗುರುತಿಸಿ ಅವುಗಳಿಗೆ ತಂತ್ರಜ್ಞಾನದ ಮೂಲಕ ಯಾವ ರೀತಿಯಲ್ಲಿ ನೆರವಾಗಬಹುದು ಎಂಬ ಕುರಿತು ಚರ್ಚೆ ನಡೆಸಿದ್ದೇವೆ ಎಂದು ಕೊಡಗು ಯೂನಿವರ್ಸಿಟಿ ವೈಸ್ ಚಾನ್ಸಲರ್ ಅಶೋಕ್ ಸಂಗಪ್ಪ ಆಲೂರ್ ತಿಳಿಸಿದರು.

ಮಂಗಳ ರಾಜಗೋಪಾಲ್​
| Edited By: |

Updated on:Aug 12, 2023 | 6:14 PM

Share

ಬೆಂಗಳೂರು, ಆಗಸ್ಟ್ 12: ಗ್ರಾಮೀಣ ಭಾಗಗಳ ಬೆಳವಣಿಗೆಯ ದೃಷ್ಟಿಯನ್ನಿಟ್ಟುಕೊಂಡು ಚಿಕ್ಕಬಳ್ಳಾಪುರದ (Chikkaballapur) ಮುದ್ದೇನಹಳ್ಳಿಯಲ್ಲಿರುವ ಶ್ರೀ ಸತ್ಯಸಾಯಿ ಆಶ್ರಮದಲ್ಲಿ (Sathya Sai Ashram) 2ನೇ ಆವೃತ್ತಿಯ ಇಂಡಿಯಾ ಸ್ಟಾರ್ಟ್‌ ಅಪ್ ಉತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಅದ್ಧೂರಿಯಾಗಿ ಉತ್ಸವ (Startup Festival) ನಡೆಯಿತು. ಈ ಉತ್ಸವದಲ್ಲಿ 10 ಸಾವಿರ ಸ್ಟಾರ್ಟ್ ​​​ಅಪ್​​, 500ಕ್ಕೂ ಹೆಚ್ಚು ಹೂಡಿಕೆದಾರರು ಭಾಗಿಯಾದರು. ರೈತ ದೇಶದ ಬೆನ್ನೆಲುಬು. ಹಳ್ಳಿಗಳು ದೇಶದ ಜೀವಾಳ. ಭಾರತ ಅಭಿವೃದ್ಧಿ ಹೊಂದಬೇಕಾದ್ರೆ ಗ್ರಾಮೋದ್ಯೋಗದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸ್ಟಾರ್ಟ್ ಅಪ್ ಉತ್ಸವ ಹಮ್ಮಿಕೊಳ್ಳಲಾಗಿತ್ತು.

2 ದಿನಗಳ ಕಾಲ ನಡೆದ ಉತ್ಸವದಲ್ಲಿ ಬ್ರಿಟನ್, ಜಪಾನ್ ಸೇರಿದಂತೆ ಹಲವು ದೇಶಗಳ ಪ್ರತಿನಿಧಿಗಳು ಭಾಗವಹಿಸಿದರು. ಇಷ್ಟೇ ಅಲ್ಲದೆ, 10ಸಾವಿರಕ್ಕೂ ಹೆಚ್ಚು ಸ್ಟಾರ್ಟಪ್‌ಗಳು ಹಾಗೂ 500ಕ್ಕೂ ಹೆಚ್ಚು ಹೂಡಿಕೆದಾರರು ಪಾಲ್ಗೊಂಡರು.

ಸತ್ಯಸಾಯಿ ವಿವಿಯ ಸಂಸ್ಥಾಪಕರಾದ ಸದ್ಗುರು ಮಧುಸೂದನ್ ಅವರು ಎಕ್ಸಿಬೀಷನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ರೌಂಡ್ ಟೇಬಲ್ ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿ ಗ್ರಾಮ ಸ್ವರಾಜ್ ಯೋಜನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು.

ಕೃಷಿ ಕ್ಷೇತ್ರದಲ್ಲಿ, ಅದರಲ್ಲಿಯೂ ಸಣ್ಣ ಮತ್ತು ಅತಿ ಸಣ್ಣ ರೈತರು ಎದುರಿಸುವಂತಹ ಸಮಸ್ಯೆಗಳು ಮತ್ತು ಸವಾಲುಗಳನ್ನು ಗುರುತಿಸಿ ಅವುಗಳಿಗೆ ತಂತ್ರಜ್ಞಾನದ ಮೂಲಕ ಯಾವ ರೀತಿಯಲ್ಲಿ ನೆರವಾಗಬಹುದು ಎಂಬ ಕುರಿತು ಚರ್ಚೆ ನಡೆಸಿದ್ದೇವೆ ಎಂದು ಕೊಡಗು ಯೂನಿವರ್ಸಿಟಿ ವೈಸ್ ಚಾನ್ಸಲರ್ ಅಶೋಕ್ ಸಂಗಪ್ಪ ಆಲೂರ್ ತಿಳಿಸಿದರು.

ಇದನ್ನೂ ಓದಿ: ಚಿಕ್ಕಬಳ್ಳಾಫುರ: ನಂದಿಹಿಲ್ಸ್ ರೋಪ್ ವೇ ಕಾಮಗಾರಿಗೆ ಎಳ್ಳುನೀರು ಬೀಡುತ್ತಾ ರಾಜ್ಯ ಸರ್ಕಾರ, ಪ್ರವಾಸೋದ್ಯಮ ಸಚಿವರು ಹೇಳಿದ್ದಿಷ್ಟು

ಭಾರತದಲ್ಲಿ ಕೃಷಿ ತಂತ್ರಜ್ಞಾನ ಅಭಿವೃದ್ಧಿ ಹೊಂದುತ್ತಿದೆ. ಹೀಗಾಗಿ ಇದಕ್ಕೆ ಬೇಕಾದ ಯೋಜನೆಗಳ ಬಗ್ಗೆಯೂ ಚರ್ಚೆ ನಡೆಸಲಾಯಿತು. ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಚರ್ಚಿಸಲಾಯಿತು.

ಹಳ್ಳಿಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ನಡೆದ ಉತ್ಸವದಿಂದ ಗ್ರಾಮಗಳಲ್ಲಿ ಹೊಸ ಬೆಳಕು ಮೂಡಲಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Sat, 12 August 23

Follow Us
ಮಂಗಳ ರಾಜಗೋಪಾಲ್​
ಮಂಗಳ ರಾಜಗೋಪಾಲ್​

ಮಂಗಳ ರಾಜಗೋಪಾಲ್​

Read More
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ