AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ; ಸತ್ಯಸಾಯಿ ಆಶ್ರಮದಲ್ಲಿ 2ನೇ ಆವೃತ್ತಿಯ ಇಂಡಿಯಾ ಸ್ಟಾರ್ಟ್‌ ಅಪ್ ಉತ್ಸವ

Agriculture Technology; ಕೃಷಿ ಕ್ಷೇತ್ರದಲ್ಲಿ, ಅದರಲ್ಲಿಯೂ ಸಣ್ಣ ಮತ್ತು ಅತಿ ಸಣ್ಣ ರೈತರು ಎದುರಿಸುವಂತಹ ಸಮಸ್ಯೆಗಳು ಮತ್ತು ಸವಾಲುಗಳನ್ನು ಗುರುತಿಸಿ ಅವುಗಳಿಗೆ ತಂತ್ರಜ್ಞಾನದ ಮೂಲಕ ಯಾವ ರೀತಿಯಲ್ಲಿ ನೆರವಾಗಬಹುದು ಎಂಬ ಕುರಿತು ಚರ್ಚೆ ನಡೆಸಿದ್ದೇವೆ ಎಂದು ಕೊಡಗು ಯೂನಿವರ್ಸಿಟಿ ವೈಸ್ ಚಾನ್ಸಲರ್ ಅಶೋಕ್ ಸಂಗಪ್ಪ ಆಲೂರ್ ತಿಳಿಸಿದರು.

Mangala RR
| Updated By: Ganapathi Sharma|

Updated on:Aug 12, 2023 | 6:14 PM

Share

ಬೆಂಗಳೂರು, ಆಗಸ್ಟ್ 12: ಗ್ರಾಮೀಣ ಭಾಗಗಳ ಬೆಳವಣಿಗೆಯ ದೃಷ್ಟಿಯನ್ನಿಟ್ಟುಕೊಂಡು ಚಿಕ್ಕಬಳ್ಳಾಪುರದ (Chikkaballapur) ಮುದ್ದೇನಹಳ್ಳಿಯಲ್ಲಿರುವ ಶ್ರೀ ಸತ್ಯಸಾಯಿ ಆಶ್ರಮದಲ್ಲಿ (Sathya Sai Ashram) 2ನೇ ಆವೃತ್ತಿಯ ಇಂಡಿಯಾ ಸ್ಟಾರ್ಟ್‌ ಅಪ್ ಉತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಅದ್ಧೂರಿಯಾಗಿ ಉತ್ಸವ (Startup Festival) ನಡೆಯಿತು. ಈ ಉತ್ಸವದಲ್ಲಿ 10 ಸಾವಿರ ಸ್ಟಾರ್ಟ್ ​​​ಅಪ್​​, 500ಕ್ಕೂ ಹೆಚ್ಚು ಹೂಡಿಕೆದಾರರು ಭಾಗಿಯಾದರು. ರೈತ ದೇಶದ ಬೆನ್ನೆಲುಬು. ಹಳ್ಳಿಗಳು ದೇಶದ ಜೀವಾಳ. ಭಾರತ ಅಭಿವೃದ್ಧಿ ಹೊಂದಬೇಕಾದ್ರೆ ಗ್ರಾಮೋದ್ಯೋಗದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಸ್ಟಾರ್ಟ್ ಅಪ್ ಉತ್ಸವ ಹಮ್ಮಿಕೊಳ್ಳಲಾಗಿತ್ತು.

2 ದಿನಗಳ ಕಾಲ ನಡೆದ ಉತ್ಸವದಲ್ಲಿ ಬ್ರಿಟನ್, ಜಪಾನ್ ಸೇರಿದಂತೆ ಹಲವು ದೇಶಗಳ ಪ್ರತಿನಿಧಿಗಳು ಭಾಗವಹಿಸಿದರು. ಇಷ್ಟೇ ಅಲ್ಲದೆ, 10ಸಾವಿರಕ್ಕೂ ಹೆಚ್ಚು ಸ್ಟಾರ್ಟಪ್‌ಗಳು ಹಾಗೂ 500ಕ್ಕೂ ಹೆಚ್ಚು ಹೂಡಿಕೆದಾರರು ಪಾಲ್ಗೊಂಡರು.

ಸತ್ಯಸಾಯಿ ವಿವಿಯ ಸಂಸ್ಥಾಪಕರಾದ ಸದ್ಗುರು ಮಧುಸೂದನ್ ಅವರು ಎಕ್ಸಿಬೀಷನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ರೌಂಡ್ ಟೇಬಲ್ ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿ ಗ್ರಾಮ ಸ್ವರಾಜ್ ಯೋಜನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು.

ಕೃಷಿ ಕ್ಷೇತ್ರದಲ್ಲಿ, ಅದರಲ್ಲಿಯೂ ಸಣ್ಣ ಮತ್ತು ಅತಿ ಸಣ್ಣ ರೈತರು ಎದುರಿಸುವಂತಹ ಸಮಸ್ಯೆಗಳು ಮತ್ತು ಸವಾಲುಗಳನ್ನು ಗುರುತಿಸಿ ಅವುಗಳಿಗೆ ತಂತ್ರಜ್ಞಾನದ ಮೂಲಕ ಯಾವ ರೀತಿಯಲ್ಲಿ ನೆರವಾಗಬಹುದು ಎಂಬ ಕುರಿತು ಚರ್ಚೆ ನಡೆಸಿದ್ದೇವೆ ಎಂದು ಕೊಡಗು ಯೂನಿವರ್ಸಿಟಿ ವೈಸ್ ಚಾನ್ಸಲರ್ ಅಶೋಕ್ ಸಂಗಪ್ಪ ಆಲೂರ್ ತಿಳಿಸಿದರು.

ಇದನ್ನೂ ಓದಿ: ಚಿಕ್ಕಬಳ್ಳಾಫುರ: ನಂದಿಹಿಲ್ಸ್ ರೋಪ್ ವೇ ಕಾಮಗಾರಿಗೆ ಎಳ್ಳುನೀರು ಬೀಡುತ್ತಾ ರಾಜ್ಯ ಸರ್ಕಾರ, ಪ್ರವಾಸೋದ್ಯಮ ಸಚಿವರು ಹೇಳಿದ್ದಿಷ್ಟು

ಭಾರತದಲ್ಲಿ ಕೃಷಿ ತಂತ್ರಜ್ಞಾನ ಅಭಿವೃದ್ಧಿ ಹೊಂದುತ್ತಿದೆ. ಹೀಗಾಗಿ ಇದಕ್ಕೆ ಬೇಕಾದ ಯೋಜನೆಗಳ ಬಗ್ಗೆಯೂ ಚರ್ಚೆ ನಡೆಸಲಾಯಿತು. ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಚರ್ಚಿಸಲಾಯಿತು.

ಹಳ್ಳಿಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ನಡೆದ ಉತ್ಸವದಿಂದ ಗ್ರಾಮಗಳಲ್ಲಿ ಹೊಸ ಬೆಳಕು ಮೂಡಲಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Sat, 12 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ