AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಲ್ಲಾ ಎರಡಲ್ಲಾ ಬರೋಬ್ಬರಿ 4 ಮದುವೆ ಮಾಡಿಕೊಂಡಿದ್ದ ಭೂಪ: ವರದಕ್ಷಿಣೆ ಕಿರುಕುಳ, ಪತ್ನಿ ದೂರು

ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ಕಲ್ಯಾಣದುರ್ಗದ ವ್ಯಕ್ತಿ 4 ಮದುವೆ ಮಾಡಿಕೊಂಡಿದ್ದು, ಕೊನೆಗೆ ಆಕೆಯ ಜೊತೆಗೂ ಸಂಸಾರ ಮಾಡದೇ ಬಿಟ್ಟಿರುವಂತಹ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಪರಗೋಡು ಗ್ರಾಮಪಂಚಾಯ್ತಿ ವ್ಯಾಪ್ತಿಯ ಕಾಶಾಪುರ ಗ್ರಾಮದವರಾದ ಪತ್ನಿ ಸದ್ಯ ನ್ಯಾಯ ಕೊಡಿಸಿಕೊಡುವಂತೆ ದೂರು ನೀಡಿದ್ದಾರೆ.

ಒಂದಲ್ಲಾ ಎರಡಲ್ಲಾ ಬರೋಬ್ಬರಿ 4 ಮದುವೆ ಮಾಡಿಕೊಂಡಿದ್ದ ಭೂಪ: ವರದಕ್ಷಿಣೆ ಕಿರುಕುಳ, ಪತ್ನಿ ದೂರು
ಪ್ರಾತಿನಿಧಿಕ ಚಿತ್ರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 25, 2023 | 8:48 PM

Share

ಚಿಕ್ಕಬಳ್ಳಾಪುರ, ಅಕ್ಟೋಬರ್​​​​ 25: ಒಂದು ಮದುವೆ ಮಾಡಿಕೊಂಡು ಸುಂದರ ಸಂಸಾರ ಮಾಡುವುದೇ ಈಗಿನ ಕಾಲದಲ್ಲಿ ಕಷ್ಟ ಎನ್ನುತ್ತಾರೆ. ಇಂಥಹದ್ದರಲ್ಲಿ ಇಲ್ಲೊಬ್ಬ ಭೂಪ ಒಂದಲ್ಲ, ಎರಡಲ್ಲ ಮೂರು ಸಾಕಾಗಲ್ಲವೆಂದು ನಾಲ್ಕು ಮದುವೆ (marriage) ಯಾಗಿ ಆಕೆಯ ಜೊತೆಗೂ ಸಂಸಾರ ಮಾಡದೇ ಬಿಟ್ಟ ಪ್ರಸಂಗ ನಡೆದಿದೆ. ಆಂದ್ರಪ್ರದೇಶದ ಅನಂತಪುರ ಜಿಲ್ಲೆಯ ಕಲ್ಯಾಣದುರ್ಗದ ವಾಸಿ ಸುಬ್ರಮಣಿ ಎನ್ನುವ ಆಸಾಮಿ 4 ಮದುವೆಯಾಗಿದ್ದನಂತೆ. 3 ಮದುವೆ ಮಾಡಿಕೊಂಡ ನಂತರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಪರಗೋಡು ಗ್ರಾಮಪಂಚಾಯ್ತಿ ವ್ಯಾಪ್ತಿಯ ಕಾಶಾಪುರ ಗ್ರಾಮದ 21 ವರ್ಷದ ಶೋಭ ಎನ್ನುವಾಕೆಯನ್ನು ಮದುವೆ ಮಾಡಿಕೊಂಡಿದ್ದಾನೆ.

4ನೇ ಪತ್ನಿಗೆ ವರದಕ್ಷಿಣೆ ಕಿರುಕುಳ 

ಜನವರಿ-2021 ರಲ್ಲಿ ಶೋಭಾಳನ್ನು ಮದುವೆ ಮಾಡಿಕೊಂಡಿದ್ದ ಆಂದ್ರ ಮೂಲದ ಸುಬ್ರಮಣಿ 3 ತಿಂಗಳು ಕಾಲ ಪತ್ನಿ ಶೋಭಾಳ ತವರು ಮನೆಯಲ್ಲೇ ಸಂಸಾರ ಹೂಡಿದ್ದ. ನಂತರ 5 ಲಕ್ಷ ರೂಪಾಯಿ ವರದಕ್ಷಿಣೆ ನೀಡುವಂತೆ ಪತ್ನಿ ಸೇರಿದಂತೆ ಅತ್ತೆ, ಮಾವನಿಗೆ ಕಿರುಕುಳ ನೀಡಿದ್ದಾನಂತೆ. ಇದರಿಂದ ಬೇಸತ್ತ ಶೋಭಾಳ ತಂದೆ-ತಾಯಿ ಒಂದೂವರೆ ಲಕ್ಷ ರೂಪಾಯಿ ವರದಕ್ಷಿಣಿ ನೀಡಿ, ಮಗಳನ್ನು ಗಂಡನ ಮನೆಗೆ ಕಳುಹಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: Viral video: ಕಾಂಗ್ರೆಸ್​ ಮುಖಂಡ ಶ್ರೀನಿವಾಸಪುರದ ಶ್ರೀನಿವಾಸ ಕೊಲೆ ಪ್ರಕರಣ: ರಾಜಿ ಪಂಚಾಯ್ತಿ ವಿಡಿಯೋ ವೈರಲ್

ಗಂಡನ ಮನೆಗೆ ಹೋಗಿದ್ದ ಶೋಭಾಳಿಗೆ ಆಕೆಯ ಗಂಡ ಸುಬ್ರಮಣಿ, ಅತ್ತೆ ಜಯಮ್ಮ, ಮಾವ ವೆಂಕಟರಾಯುಡು ಪ್ರತಿದಿನ ಬೆಳಗಾದರೆ ಸಾಕು ಅವಾಚ್ಯ ಶಬ್ದಗಳಿಂದ ನಿಂದಿಸಿ, ದೈಹಿಕವಾಗಿ ಹಲ್ಲೆ ನಡೆಸುತ್ತಿದ್ದರಂತೆ. ಪ್ರತಿದಿನ ವರದಕ್ಷಿಣೆಗಾಗಿ ಪೀಡಿಸುತ್ತಿದ್ದರಂತೆ ಕೊನೆಗೆ ಮನೆಗೆ ಬಂದ ಅತ್ತೆ-ಮಾವನ ಜೊತೆ ಮಗಳನ್ನು ಆಕೆಯ ತವರುಮನೆಗೆ ಕಳುಹಿಸಿ ವರದಕ್ಷಿಣೆಗಾಗಿ ಪೀಡಿಸಿದ್ದರಂತೆ.

ಮಹಿಳಾ ಠಾಣೆಯಲ್ಲಿ ದೂರು ದಾಖಲು

ಗಂಡ, ಅತ್ತೆ, ಮಾವನ ವರ್ತನೆಯಿಂದ ನೊಂದ ಶೋಭಾ ಚಿಕ್ಕಬಳ್ಳಾಪುರ ಮಹಿಳಾಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತನ್ನ ಗಂಡ ಈಗಾಗಲೇ ಲಕ್ಷ್ಮೀ ಎನ್ನುವಾಕೆ ಸೇರಿದಂತೆ ಇನ್ನಿತರೆ ಇಬ್ಬರನ್ನು ಮದುವೆಯಾಗಿದ್ದು, 3 ಮದುವೆ ವಿಚಾರ ಮುಚ್ಚಿಟ್ಟು 4ನೇ ಮದುವೆ ನನ್ನನ್ನು ಮಾಡಿಕೊಂಡಿದ್ದಾನೆ. ನನಗೆ ನ್ಯಾಯ ಕೊಡಿಸಿಕೊಡುವಂತೆ ದೂರು ನೀಡಿದ್ದಾರೆ. ಪೊಲೀಸರು ಐಪಿಸಿ ಸೆಕ್ಷನ್ 1860, 498ಎ, 504, 420, 34 ಸೇರಿದಂತೆ ವರದಕ್ಷಿಣೆ ನಿಷೇದ ಕಾಯ್ದೆ-1961ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!