AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಉರುಳಿ ಬಿದ್ದ ಹಳೆ ಕಾಲದ ಮರ: ತಪ್ಪಿದ ಭಾರೀ ಅನಾಹುತ

ವಯಸ್ಸಾದ ಮರ ಒಂದು ರಸ್ತೆಯಲ್ಲಿದ್ದ ಟ್ರ್ಯಾಕ್ಟರ್, ಮನೆ, ದನದ ಕೊಟ್ಟಿಗೆಯ ಮೇಲೆ ಉರುಳಿ ಬಿದ್ದಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀರಾಂಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮರ ತೆರವುಗೊಳಿಸಿ ಅಂತಾ ಅಲ್ಲಿಯ ನಿವಾಸಿಗಳು ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಿರಲಿಲ್ಲ. ಸದ್ಯ ಮರ ತಾನಾಗಿಯೇ ಉರುಳಿದೆ.

ಚಿಕ್ಕಬಳ್ಳಾಪುರ: ಉರುಳಿ ಬಿದ್ದ ಹಳೆ ಕಾಲದ ಮರ: ತಪ್ಪಿದ ಭಾರೀ ಅನಾಹುತ
ಉರುಳಿ ಬಿದ್ದ ಮರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Sep 03, 2023 | 4:07 PM

Share

ಚಿಕ್ಕಬಳ್ಳಾಪುರ, ಸೆಪ್ಟೆಂಬರ್​ 3: ಗ್ರಾಮದ ಜನವಸತಿ ಪ್ರದೇಶದಲ್ಲಿದ್ದ ಹಳೆ ಕಾಲದ ಮರ (tree) ವೊಂದು ಟೊಳ್ಳಾಗಿ ನಿಂತಿತ್ತು. ಯಾವುದೇ ಕ್ಷಣದಲ್ಲಿ ಬೀಳಬಹುದು, ದಮ್ಮಯ್ಯ ಮರ ತೆರವುಗೊಳಿಸಿ ಅಂತಾ ಅಲ್ಲಿಯ ನಿವಾಸಿಗಳು ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಆದರೆ ಯಾರೂ ಮರವನ್ನು ತೆರವುಗೊಳಿಸಲಿಲ್ಲ. ಇದರಿಂದ ಮರವೇ ಇಂದು ಗ್ರಾಮದ ಟ್ರ್ಯಾಕ್ಟರ್, ಮನೆಯ ಮೇಲೆ ಉರುಳಿ ಬಿದ್ದಿದೆ. ಅದೃಷ್ಠವಶಾತ್ ಜನರು ಬಚಾವ್ ಆದ ಘಟನೆ ನಡೆದಿದೆ.

ಘಟನೆ ನಡೆದಿರುವುದು ಎಲ್ಲಿ:

ಚಿಕ್ಕಬಳ್ಳಾಪುರ ತಾಲೂಕಿನ ಶ್ರೀರಾಂಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಚಂದ್ರಮ್ಮ ವೆಂಕಟೇಶಪ್ಪ ಎಂಬುವರ ಮನೆಯ ಮುಂದೆ ಬೃಹತ್ ಅರಳಿ ಮರವೊಂದಿತ್ತು. ಮರಕ್ಕೆ ವಯಸ್ಸಾಗಿತ್ತು. ಯಾವುದೇ ಕ್ಷಣದಲ್ಲಿ ಮುರಿದು ಬೀಳುವ ಸ್ಥಿತಿಯಲ್ಲಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಮರ ತೆರವುಗೊಳಿಸುವಂತೆ ಸ್ಥಳೀಯರು ಅಗಲಗುರ್ಕಿ ಗ್ರಾ.ಪಂ ಅಧಿಕಾರಿಗಳು ಹಾಗೂ ಸ್ಥಳಿಯ ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿದ್ದರು.

ಇದನ್ನೂ ಓದಿ: ಕಲಬುರಗಿ: ಮಳೆಯ ಅಬ್ಬರ, ಸಿಡಿಲು ಬಡಿದು 11 ಮೇಕೆ, ಓರ್ವ ಮಹಿಳೆ ಸಾವು

ಆದರೆ ಅಧಿಕಾರಿಗಳು ಸಾರ್ವಜನಿಕರ ಮನವಿಗೆ ಸ್ಪಂಧಿಸಿರಲಿಲ್ಲ. ಆದರೆ ಇಂದು ರಸ್ತೆಯಲ್ಲಿದ್ದ ಟ್ರ್ಯಾಕ್ಟರ್, ಮನೆ, ದನದ ಕೊಟ್ಟಿಗೆಯ ಮೇಲೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಮರದ ಕೆಳಗೆ ಜನರು ಯಾರೂ ಇರಲಿಲ್ಲ.

ಮತ್ತೊಂದೆಡೆ ಗ್ರಾಮದಲ್ಲಿರುವ ವಿದ್ಯುತ್ ಜಾಲದ ಮೇಲೆಯೂ ಮರ ಬಿದ್ದಿದೆ. ಇದರಿಂದ ವಿದ್ಯುತ್ ತಂತಿಗಳು ಜೋತು ಬಿದ್ದು ವಿದ್ಯುತ್ ಸಂಪರ್ಕ ಸ್ಥಗಿತವಾಗಿದೆ. ಜನರ ಮೇಲೆ ಮರ ಬಿದ್ದು ಯಾರಿಗಾದರೂ ಪ್ರಾಣ ಹೋಗಿದ್ದರೆ ಆಗ ಅಧಿಕಾರಿಗಳು ಏನು ಮಾಡುತ್ತಿದ್ದರು ಅಂತಾ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಇನ್ನು ಮುಂದಾದರೂ ಬದ್ದತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಸ್ಥಳೀಯರು ಒತ್ತಾಯ ಮಾಡಿದ್ದಾರೆ.

ಕೋಟೆಯ ಬೃಹತ್‌ ಗೋಡೆಯ ಮೇಲೆ ಬೆಳೆದ ಗಿಡಗಳು: ಗೋಡೆಯೇ ಶಿಥಿಲಗೊಳ್ಳುವ ಆತಂಕ

ಬೀದರ್‌: ಏಶಿಯಾ ಖಂಡದಲ್ಲಿಯೇ ಅತಿ ಬೃಹತ್ತಾದ ಬೀದರ್ ಕೋಟೆಯನ್ನ ಪುರಾತತ್ವ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಐತಿಹಾಸಿಕ ಬೀದರ್‌ ಕೋಟೆಯ ಒಂದು ಕಡೆಯ ಬೃಹದಾಕಾರದ ಗೋಡೆಯ ಮೇಲೆ ಗಿಡ- ಗಂಟಿಗಳು ಬೆಳೆದು ನಿಂತಿದ್ದು, ಇಡೀ ಗೋಡೆಯೇ ಶಿಥಿಲಗೊಳ್ಳುವ ಆತಂಕ ಎದುರಾಗಿದೆ.

ಇದನ್ನೂ ಓದಿ: ಆರೋಗ್ಯ ಸಚಿವರು ನಿರ್ದೇಶನ ನೀಡಿ ಒಂದು ತಿಂಗಳಾದರೂ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸದ ನಮ್ಮ ಕ್ಲಿನಿಕ್​

ಎತ್ತರದ ಗೋಡೆಯ ಮೇಲ್ಭಾಗದಲ್ಲಿ ಗಿಡಗಳು ಸಮೃದ್ಧವಾಗಿ ಬೆಳೆದು ನಿಂತು, ಬೇರು ಬಿಟ್ಟಿವೆ. ಇದರಿಂದ ಗೋಡೆ ಬಿರುಕು ಬಿಡುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ. ಜಿಲ್ಲಾಧಿಕಾರಿ ನಿವಾಸದಿಂದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಡೆಗೆ ಸಾಗುವ ಮಾರ್ಗದ ಕೋಟೆಯ ಬೃಹತ್‌ ಗೋಡೆಯ ಮೇಲೆ ಗಿಡಗಳು ಹುಲುಸಾಗಿ ಪೊದೆಯಂತೆ ಬೆಳೆದಿದ್ದರಿಂದ ಇಡೀ ಗೋಡೆ ಹಸುರಿನಿಂದ ಕಂಗೊಳಿಸುವಂತಾಗಿದೆ.

ಗಿಡ- ಗಂಟಿಗಳಿಂದ ಐತಿಹಾಸಿಕ ಸ್ಮಾರಕವಾದ ಕೋಟೆ ಸೌಂದರ‍್ಯಕ್ಕೆ ಧಕ್ಕೆ ಎದುರಾಗುವ ಅಪಾಯವೂ ಇದೆ. ಗೋಡೆ ಬಿರುಕು ಬಿಟ್ಟರೆ ಮತ್ತೆ ಅದರ ದುರಸ್ತಿ ಕಾರ್ಯ ಅಸಾಧ್ಯವಾಗಲಿದೆ. ಅಧಿಕಾರಿಗಳು ಎಚ್ಚೆತ್ತುಕೊಳ್ಳುವ ಅಗತ್ಯವಿದ್ದು ಕೂಡಲೆ ಗಿಡಗಳನ್ನ ಕಟ್ ಮಾಡಿ ಎಂದು ಇಲ್ಲಿನ ಜನರು ಮನವಿ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು