Chikkaballapur News: ಖಾಸಗಿ ಕಂಪನಿಗೆ ಗುಡ್ ಬೈ ಹೇಳಿ ಟೆಮೆಟೊ ಬೆಳೆದ ಬಿ.ಕಾಂ ಪದವೀಧರ, ಒಂದೇ ತಿಂಗಳಲ್ಲಿ ಲಕ್ಷಾಧೀಶನಾದ

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ 15 ಸಾವಿರ ರೂಪಾಯಿ ಸಂಬಳ ಪಡೆಯುತ್ತಿದ್ದ ಯುವಕ ಕೆಲಸಕ್ಕೆ ಗುಡ್ ಬೈ ಹೇಳಿ ಟೆಮೆಟೊ ಬೆಳೆದು ಒಂದೇ ತಿಂಗಳಲ್ಲಿ ಲಕ್ಷಾಧೀಶನಾಗಿದ್ದಾನೆ.

Chikkaballapur News: ಖಾಸಗಿ ಕಂಪನಿಗೆ ಗುಡ್ ಬೈ ಹೇಳಿ ಟೆಮೆಟೊ ಬೆಳೆದ ಬಿ.ಕಾಂ ಪದವೀಧರ, ಒಂದೇ ತಿಂಗಳಲ್ಲಿ ಲಕ್ಷಾಧೀಶನಾದ
ಯುವ ರೈತ ಶಿವರಾಜ್
Follow us
| Updated By: ಆಯೇಷಾ ಬಾನು

Updated on: Jul 19, 2023 | 3:12 PM

ಚಿಕ್ಕಬಳ್ಳಾಪುರ, ಜುಲೈ 19: ಆತ ಅಪ್ಪಟ ಕೃಷಿಕನ ಮಗ, ತಂದೆಯ ಕಷ್ಟ ನೋಡಿ ಕಷ್ಟಪಟ್ಟು ಬಿ.ಕಾಂ ಪದವಿ ಮುಗಿಸಿ ಖಾಸಗಿ ಕಂಪನಿಗೆ ಕೆಲಸಕ್ಕೆ ಸೇರಿದ್ದ. ಆದ್ರೆ ಕಂಪನಿ ನೀಡುವ ಸಂಬಳ ಆತನ ಖರ್ಚಿಗೂ ಸಾಲುತ್ತಿರಲಿಲ್ಲ. ಇದ್ರಿಂದ ಬೇಸತ್ತ ಆ ಯುವಕ ಕಂಪನಿಯ ಕೆಲಸ ತೊರೆದು ಕೃಷಿಯತ್ತ ಮುಖ ಮಾಡಿದ್ದ. ಇದ್ರಿಂದ ಗ್ರಾಮಸ್ಥರು ಆ ಯುವಕನನ್ನು ನೋಡಿ ಕುಹಕವಾಡಿದ್ರು. ಆದ್ರೂ ಎದೆಗುಂದದ ಆ ಯುವಕ ತಂದೆಯ ಒಂದೂವರೆ ಎಕೆರೆ ಜಮೀನಿನಲ್ಲಿ ಬಂಗಾರದಂಥಹ ಟೆಮೆಟೊ(Tomato) ಬೆಳೆದಿದ್ದು, ಪ್ರತಿದಿನ ಲಕ್ಷ ಲಕ್ಷ ರೂಪಾಯಿ ಹಣ ಸಂಪಾದನೆ ಮಾಡ್ತಿದ್ದಾನೆ. ಅಂದು ಕುಹಕವಾಡಿದ್ದವರು ಈಗ ಬೆರಗಾಗಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಮಳ್ಳೂರು ಗ್ರಾಮದ ರೈತ ನಾಗರಾಜ್ ತನ್ನ ಮಕ್ಕಳು ಚನ್ನಾಗಿ ಓದಿ ಅಧಿಕಾರಿಗಳಾಗಲಿ ಅಂತ ತನ್ನ ಮಕ್ಕಳನ್ನು ಕಷ್ಟಪಟ್ಟು ಓದಿಸಿದ್ರು. ಬಿ.ಕಾಂ ಪದವಿಧರನಾಗಿದ್ದ ರೈತ ನಾಗರಾಜ್ ಮಗ ಶಿವರಾಜ್, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ 15 ಸಾವಿರ ರೂಪಾಯಿ ಸಂಬಳ ಪಡೆಯುತ್ತಿದ್ದ. ಅದರಿಂದ ಆತನ ಖರ್ಚು ವೆಚ್ಚ ಸರಿದೂಗಿಸಲು ಕಷ್ಟವಾಗುತ್ತಿತ್ತು. ಕೊನೆಗೆ ತಂದೆಗೆ ವಿರುದ್ದವಾಗಿ ಕೆಲಸ ತೊರೆದು ಸ್ವಗ್ರಾಮಕ್ಕೆ ಆಗಮಿಸಿ ತಂದೆಯ ಒಂದೂವರೆ ಎಕೆರೆ ಜಮೀನಿನಲ್ಲಿ ಟೆಮೆಟೊ ಬೆಳೆದಿದ್ದಾನೆ. ಟೆಮೆಟೊ ಫಸಲು ಅತ್ಯುತ್ತಮವಾಗಿ ಬಂದಿದೆ. ಕಲರ್, ಗುಣಮಟ್ಟ, ಸೈಜ್ ನಲ್ಲಿ ಉತ್ತಮ ಇಳುವರಿ ಬಂದಿದೆ. ಇನ್ನೂ ಮಾರುಕಟ್ಟೆಯಲ್ಲಿ ಶಿವರಾಜ್ ಬೆಳೆದ ಹಣ್ಣಿಗೆ ಚಿನ್ನದ ಬೆಲೆ ಬಂದಿದೆ. ಇದ್ರಿಂದ ಶಿವರಾಜ್ ಪ್ರತಿದಿನ ಲಕ್ಷ ಲಕ್ಷ ರೂಪಾಯಿ ಹಣ ಸಂಪಾದನೆ ಮಾಡ್ತಿದ್ದಾನೆ.

Chikkaballapur News bcom graduates left private company job and Become Millionaire in One Month by Tomato cultivation

ಯುವ ರೈತ ಶಿವರಾಜ್

ಇದನ್ನೂ ಓದಿ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ, ವಾಹನ ಸವಾರ ಸಾವು; ಹೆದ್ದಾರಿ ಪ್ರಾಧಿಕಾರಕ್ಕೆ ಮಂಗಳೂರು ಪೊಲೀಸ್ ನೋಟಿಸ್

ಇನ್ನೂ ಯುವಕ ಶಿವರಾಜ್ ಬೆಳೆದ ಟೆಮೆಟೊಗೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಡಿಮ್ಯಾಂಡ್ ಇದೆ. ಕಲರ್, ಗುಣಮಟ್ಟ, ಸೈಜ್ ನಲ್ಲಿ ಉತ್ತಮ ಇಳುವರಿ ಬಂದಿದೆ. ಇದ್ರಿಂದ 15 ಕೆ.ಜಿ ಟೆಮೆಟೊ ಬಾಕ್ಸ್ ಗೆ ಎರಡು ಸಾವಿರ ರೂಪಾಯಿ ನೀಡಿ ವರ್ತಕರು ಖರೀದಿ ಮಾಡ್ತಿದ್ದಾರೆ. ಈಗಾಗಲೇ ಶಿವರಾಜ್ ಗೆ ಇಪ್ಪತೈದು ಲಕ್ಷ ರೂಪಾಯಿ ಹಣ ಬಂದಿದೆ. ಇನ್ನೂ ಇಪ್ಪತೈದು ಲಕ್ಷ ರೂಪಾಯಿ ಹಣ ಬರುವ ನೀರಿಕ್ಷೆ ಇದೆ. ಟೆಮೆಟೊ ಬೆಳೆಯಲು ಕೇವಲ 3 ಲಕ್ಷ ರೂಪಾಯಿ ಖರ್ಚು ಮಾಡಲಾಗಿತ್ತು. ಆದ್ರೆ ಈಗ ಮಗನ ಸಾಧನೆ ಹಾಗೂ ಸಂಪಾದನೆ ಕಂಡ ತಂದೆ ನಾಗರಾಜ್, ಫುಲ್ ಖುಷ್ ಆಗಿದ್ದಾರೆ.

ಬಿಕಾಂ ಪದವೀಧರನಾಗಿ, ಖಾಸಗಿ ಕಂಪನಿಯಲ್ಲಿ 15 ಸಾವಿರ ರೂಪಾಯಿ ಸಂಬಳಕ್ಕೆ ದುಡಿಯುತ್ತಿದ್ದರೆ ಸಾಯುವವರೆಗೂ ದುಡಿದ್ರೂ ಲಕ್ಷಾಧೀಶನಾಗುತ್ತಿರಲಿಲ್ಲ, ಆದ್ರೆ ಭೂತಾಯಿ ನಂಬಿ ಟೆಮೆಟೊ ಬೆಳೆದಿದ್ದಕ್ಕೆ ಈಗ ಯುವ ರೈತ ತಿಂಗಳಲ್ಲೇ ಲಕ್ಷಾಧೀಶನಾಗಿದ್ದಾನೆ. ಇದೆ ಅಲ್ವಾ ಭೂ ತಾಯಿ ಚಮತ್ಕಾರ ಅಂದ್ರೆ.

ಚಿಕ್ಕಬಳ್ಳಾಪುರ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?