AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur News: ಖಾಸಗಿ ಕಂಪನಿಗೆ ಗುಡ್ ಬೈ ಹೇಳಿ ಟೆಮೆಟೊ ಬೆಳೆದ ಬಿ.ಕಾಂ ಪದವೀಧರ, ಒಂದೇ ತಿಂಗಳಲ್ಲಿ ಲಕ್ಷಾಧೀಶನಾದ

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ 15 ಸಾವಿರ ರೂಪಾಯಿ ಸಂಬಳ ಪಡೆಯುತ್ತಿದ್ದ ಯುವಕ ಕೆಲಸಕ್ಕೆ ಗುಡ್ ಬೈ ಹೇಳಿ ಟೆಮೆಟೊ ಬೆಳೆದು ಒಂದೇ ತಿಂಗಳಲ್ಲಿ ಲಕ್ಷಾಧೀಶನಾಗಿದ್ದಾನೆ.

Chikkaballapur News: ಖಾಸಗಿ ಕಂಪನಿಗೆ ಗುಡ್ ಬೈ ಹೇಳಿ ಟೆಮೆಟೊ ಬೆಳೆದ ಬಿ.ಕಾಂ ಪದವೀಧರ, ಒಂದೇ ತಿಂಗಳಲ್ಲಿ ಲಕ್ಷಾಧೀಶನಾದ
ಯುವ ರೈತ ಶಿವರಾಜ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಆಯೇಷಾ ಬಾನು|

Updated on: Jul 19, 2023 | 3:12 PM

Share

ಚಿಕ್ಕಬಳ್ಳಾಪುರ, ಜುಲೈ 19: ಆತ ಅಪ್ಪಟ ಕೃಷಿಕನ ಮಗ, ತಂದೆಯ ಕಷ್ಟ ನೋಡಿ ಕಷ್ಟಪಟ್ಟು ಬಿ.ಕಾಂ ಪದವಿ ಮುಗಿಸಿ ಖಾಸಗಿ ಕಂಪನಿಗೆ ಕೆಲಸಕ್ಕೆ ಸೇರಿದ್ದ. ಆದ್ರೆ ಕಂಪನಿ ನೀಡುವ ಸಂಬಳ ಆತನ ಖರ್ಚಿಗೂ ಸಾಲುತ್ತಿರಲಿಲ್ಲ. ಇದ್ರಿಂದ ಬೇಸತ್ತ ಆ ಯುವಕ ಕಂಪನಿಯ ಕೆಲಸ ತೊರೆದು ಕೃಷಿಯತ್ತ ಮುಖ ಮಾಡಿದ್ದ. ಇದ್ರಿಂದ ಗ್ರಾಮಸ್ಥರು ಆ ಯುವಕನನ್ನು ನೋಡಿ ಕುಹಕವಾಡಿದ್ರು. ಆದ್ರೂ ಎದೆಗುಂದದ ಆ ಯುವಕ ತಂದೆಯ ಒಂದೂವರೆ ಎಕೆರೆ ಜಮೀನಿನಲ್ಲಿ ಬಂಗಾರದಂಥಹ ಟೆಮೆಟೊ(Tomato) ಬೆಳೆದಿದ್ದು, ಪ್ರತಿದಿನ ಲಕ್ಷ ಲಕ್ಷ ರೂಪಾಯಿ ಹಣ ಸಂಪಾದನೆ ಮಾಡ್ತಿದ್ದಾನೆ. ಅಂದು ಕುಹಕವಾಡಿದ್ದವರು ಈಗ ಬೆರಗಾಗಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಮಳ್ಳೂರು ಗ್ರಾಮದ ರೈತ ನಾಗರಾಜ್ ತನ್ನ ಮಕ್ಕಳು ಚನ್ನಾಗಿ ಓದಿ ಅಧಿಕಾರಿಗಳಾಗಲಿ ಅಂತ ತನ್ನ ಮಕ್ಕಳನ್ನು ಕಷ್ಟಪಟ್ಟು ಓದಿಸಿದ್ರು. ಬಿ.ಕಾಂ ಪದವಿಧರನಾಗಿದ್ದ ರೈತ ನಾಗರಾಜ್ ಮಗ ಶಿವರಾಜ್, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ 15 ಸಾವಿರ ರೂಪಾಯಿ ಸಂಬಳ ಪಡೆಯುತ್ತಿದ್ದ. ಅದರಿಂದ ಆತನ ಖರ್ಚು ವೆಚ್ಚ ಸರಿದೂಗಿಸಲು ಕಷ್ಟವಾಗುತ್ತಿತ್ತು. ಕೊನೆಗೆ ತಂದೆಗೆ ವಿರುದ್ದವಾಗಿ ಕೆಲಸ ತೊರೆದು ಸ್ವಗ್ರಾಮಕ್ಕೆ ಆಗಮಿಸಿ ತಂದೆಯ ಒಂದೂವರೆ ಎಕೆರೆ ಜಮೀನಿನಲ್ಲಿ ಟೆಮೆಟೊ ಬೆಳೆದಿದ್ದಾನೆ. ಟೆಮೆಟೊ ಫಸಲು ಅತ್ಯುತ್ತಮವಾಗಿ ಬಂದಿದೆ. ಕಲರ್, ಗುಣಮಟ್ಟ, ಸೈಜ್ ನಲ್ಲಿ ಉತ್ತಮ ಇಳುವರಿ ಬಂದಿದೆ. ಇನ್ನೂ ಮಾರುಕಟ್ಟೆಯಲ್ಲಿ ಶಿವರಾಜ್ ಬೆಳೆದ ಹಣ್ಣಿಗೆ ಚಿನ್ನದ ಬೆಲೆ ಬಂದಿದೆ. ಇದ್ರಿಂದ ಶಿವರಾಜ್ ಪ್ರತಿದಿನ ಲಕ್ಷ ಲಕ್ಷ ರೂಪಾಯಿ ಹಣ ಸಂಪಾದನೆ ಮಾಡ್ತಿದ್ದಾನೆ.

Chikkaballapur News bcom graduates left private company job and Become Millionaire in One Month by Tomato cultivation

ಯುವ ರೈತ ಶಿವರಾಜ್

ಇದನ್ನೂ ಓದಿ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ, ವಾಹನ ಸವಾರ ಸಾವು; ಹೆದ್ದಾರಿ ಪ್ರಾಧಿಕಾರಕ್ಕೆ ಮಂಗಳೂರು ಪೊಲೀಸ್ ನೋಟಿಸ್

ಇನ್ನೂ ಯುವಕ ಶಿವರಾಜ್ ಬೆಳೆದ ಟೆಮೆಟೊಗೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಡಿಮ್ಯಾಂಡ್ ಇದೆ. ಕಲರ್, ಗುಣಮಟ್ಟ, ಸೈಜ್ ನಲ್ಲಿ ಉತ್ತಮ ಇಳುವರಿ ಬಂದಿದೆ. ಇದ್ರಿಂದ 15 ಕೆ.ಜಿ ಟೆಮೆಟೊ ಬಾಕ್ಸ್ ಗೆ ಎರಡು ಸಾವಿರ ರೂಪಾಯಿ ನೀಡಿ ವರ್ತಕರು ಖರೀದಿ ಮಾಡ್ತಿದ್ದಾರೆ. ಈಗಾಗಲೇ ಶಿವರಾಜ್ ಗೆ ಇಪ್ಪತೈದು ಲಕ್ಷ ರೂಪಾಯಿ ಹಣ ಬಂದಿದೆ. ಇನ್ನೂ ಇಪ್ಪತೈದು ಲಕ್ಷ ರೂಪಾಯಿ ಹಣ ಬರುವ ನೀರಿಕ್ಷೆ ಇದೆ. ಟೆಮೆಟೊ ಬೆಳೆಯಲು ಕೇವಲ 3 ಲಕ್ಷ ರೂಪಾಯಿ ಖರ್ಚು ಮಾಡಲಾಗಿತ್ತು. ಆದ್ರೆ ಈಗ ಮಗನ ಸಾಧನೆ ಹಾಗೂ ಸಂಪಾದನೆ ಕಂಡ ತಂದೆ ನಾಗರಾಜ್, ಫುಲ್ ಖುಷ್ ಆಗಿದ್ದಾರೆ.

ಬಿಕಾಂ ಪದವೀಧರನಾಗಿ, ಖಾಸಗಿ ಕಂಪನಿಯಲ್ಲಿ 15 ಸಾವಿರ ರೂಪಾಯಿ ಸಂಬಳಕ್ಕೆ ದುಡಿಯುತ್ತಿದ್ದರೆ ಸಾಯುವವರೆಗೂ ದುಡಿದ್ರೂ ಲಕ್ಷಾಧೀಶನಾಗುತ್ತಿರಲಿಲ್ಲ, ಆದ್ರೆ ಭೂತಾಯಿ ನಂಬಿ ಟೆಮೆಟೊ ಬೆಳೆದಿದ್ದಕ್ಕೆ ಈಗ ಯುವ ರೈತ ತಿಂಗಳಲ್ಲೇ ಲಕ್ಷಾಧೀಶನಾಗಿದ್ದಾನೆ. ಇದೆ ಅಲ್ವಾ ಭೂ ತಾಯಿ ಚಮತ್ಕಾರ ಅಂದ್ರೆ.

ಚಿಕ್ಕಬಳ್ಳಾಪುರ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ