AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದ ಗೂಡಾದ ಐತಿಹಾಸಿಕ ಪ್ರಸಿದ್ಧ ಪಾಪಾಘ್ನಿ ಮಠ: ಒಂದೇ ಸಮುದಾಯದ 2 ಬಣಗಳ ಮಧ್ಯೆ ಪೈಟ್

Chikkaballapur News: ಚಿಕ್ಕಬಳ್ಳಾಪುರ ತಾಲ್ಲೂಕಿನ ಕಳವಾರ ಗ್ರಾಮದ ಬಳಿಯಿದೆ. ಪ್ರಸಿದ್ದ ಅರಣ್ಯದಾಮ, ಚಾರಣಿಗರ ಅಚ್ಚುಮೆಚ್ಚಿನ ತಾಣ ಸ್ಕಂದಗಿರಿ ಬೆಟ್ಟದ ತಪ್ಪಲಿನಲ್ಲಿದೆ. ಪಾಪಾಘ್ನಿ ಮಠದಲ್ಲಿ ದಕ್ಷಿಣ ಕಾಶಿ ಎಂದೇ ಖ್ಯಾತಿಯಾಗಿರುವ ಕಾಶಿವಿಶ್ವನಾಥ ದೇವಾಲಯವಿದ್ದು, ಈ ಕ್ಷೇತ್ರ ಈಗ ವಿವಾದದ ಗೂಡಾಗಿದೆ.

ವಿವಾದದ ಗೂಡಾದ ಐತಿಹಾಸಿಕ ಪ್ರಸಿದ್ಧ ಪಾಪಾಘ್ನಿ ಮಠ: ಒಂದೇ ಸಮುದಾಯದ 2 ಬಣಗಳ ಮಧ್ಯೆ ಪೈಟ್
ಪಾಪಾಘ್ನಿ ಮಠ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Oct 04, 2023 | 4:16 PM

Share

ಚಿಕ್ಕಬಳ್ಳಾಪುರ, ಅಕ್ಟೋಬರ್​ 04: ಅದು ಪುಣ್ಯಪ್ರಸಿದ್ದ, ಐತಿಹಾಸಿಕ ಪ್ರಸಿದ್ಧ, ಧಾರ್ಮಿಕ ಪ್ರಸಿದ್ಧ ಕ್ಷೇತ್ರ. ಆ ಕ್ಷೇತ್ರದ ಹಿಡಿತಕ್ಕಾಗಿ ಒಂದೇ ಸಮುದಾಯದ 2 ಬಣಗಳು ಮೇಲಾಟ ನಡೆಸಿದ್ದು, ಆರೋಪ-ಪ್ರತ್ಯಾರೋಪ ಮಾಡಿ ಪರಸ್ಪರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಕಳವಾರ ಗ್ರಾಮದ ಬಳಿಯಿದೆ. ಪ್ರಸಿದ್ದ ಅರಣ್ಯದಾಮ, ಚಾರಣಿಗರ ಅಚ್ಚುಮೆಚ್ಚಿನ ತಾಣ ಸ್ಕಂದಗಿರಿ ಬೆಟ್ಟದ ತಪ್ಪಲಿನಲ್ಲಿದೆ. ಪಾಪಾಘ್ನಿ ಮಠ (Papagni Math) ದಲ್ಲಿ ದಕ್ಷಿಣ ಕಾಶಿ ಎಂದೇ ಖ್ಯಾತಿಯಾಗಿರುವ ಕಾಶಿವಿಶ್ವನಾಥ ದೇವಾಲಯವಿದ್ದು, ಈ ಕ್ಷೇತ್ರ ಈಗ ವಿವಾದದ ಗೂಡಾಗಿದೆ.

ಪಾಪಾಗ್ನಿ ಮಠದಲ್ಲಿ ಕಾಲಜ್ಞಾನಿ ಶ್ರೀ ವೀರಬ್ರಹ್ಮೇಂದ್ರಸ್ವಾಮಿಗಳ ಸಾಕು ತಂದೆ-ತಾಯಿಯ ಜೀವಂತ ಸಮಾಧಿಗಳಿವೆ. ಕಳವಾರದ ಪಾಪಾಘ್ನಿ ಮಠದಲ್ಲಿ ಮಹಾನ್ ಕಾಲಜ್ಞಾನಿ ಪೋತಲೂರು ಶ್ರೀ ವೀರಬ್ರಹ್ಮೇಂದ್ರಸ್ವಾಮಿಗಳ ಸಾಕು ತಂದೆ-ತಾಯಿಯ ಜೀವಂತ ಸಮಾಧಿಗಳಿವೆ. ಪಂಚನಂದಿ, ಪಂಚಗಿರಿ, ಪಂಚನದಿ ಎಂದೇ ಖ್ಯಾತಿಯಾಗಿದೆ.

ಪಾಪಾಘ್ನಿ ಮಠವನ್ನು ವಿಶ್ವಕರ್ಮ ಸಮುದಾ ನಿರ್ವಹವಣೆ

ಪಾಪಾಘ್ನಿ ಮಠವನ್ನು ಚಿಕ್ಕಬಳ್ಳಾಪುರದ ವಿಶ್ವಕರ್ಮ ಸಮುದಾಯದವರು ನಿರ್ವಹಿಸಿಕೊಂಡು ಬಂದಿದ್ದಾರೆ. ಆದರೆ ಈಗ ಮಠ, ದೇವಸ್ಥಾನ ಹಾಗೂ ಪಾರ್ಕಿಂಗ್ ಶುಲ್ಕ ನಿರ್ವಹಣೆಯ ವಿಚಾರದಲ್ಲಿ 2 ಗುಂಪುಗಳಾಗಿದ್ದು, ಮಠದ ಜಗಳ ಬೀದಿಗೆ ಬಂದಿದೆ. ಸ್ವತಃ ಮಠದ ಟ್ರಸ್ಟ್​​ನ ಅಧ್ಯಕ್ಷರು ಎಂದು ಹೇಳಿಕೊಳ್ಳುತ್ತಿರುವ ಸಿದ್ದಲಿಂಗಚಾರಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

ಸಿದ್ದಲಿಂಗಚಾರಿ ವಿರುದ್ದ ಆರೋಪ

ಅಸಲಿಗೆ ಸಿ.ಟಿ.ಸಿದ್ದಲಿಂಗಚಾರಿ ಕಳೆದ ಕೆಲವು ವರ್ಷಗಳಿಂದ ಪಾಪಾಘ್ನಿ ಮಠದ ನಿರ್ವಹಣೆಯನ್ನು ಮಾಡಿಕೊಂಡು ಬರುತ್ತಿದ್ದಾರೆ. ದಕ್ಷಿಣ ಕಾಶಿ, ಪಂಚನಂದಿ, ಮಹಾಪುಣ್ಯ ಕ್ಷೇತ್ರ ಪಾಪಾಗ್ನಿ ಮಠ ಚಾರಿಟಬಲ್ ಟ್ರಸ್ಟ್ ಎಂದು ನೋಂದಣಿ ಮಾಡಿಕೊಂಡಿದ್ದು, ಅದರ ಅಧ್ಯಕ್ಷ ನಾನೇ ಎಂದು ಹೇಳಿಕೊಂಡು ಬರುತ್ತಿದ್ದಾರೆ. ಮಠ ಹಾಗೂ ದೇವಸ್ಥಾನದ ಅಭಿವೃದ್ಧಿ ನನ್ನಿಂದಲೇ ಆಗಿದೆಯೆಂದು ತಿರುಗಾಡುತ್ತಿದ್ದಾರೆ. ಆದರೆ ಸಿದ್ದಲಿಂಗಚಾರಿ ಅಧ್ಯಕ್ಷರಾಗಿರುವ ಟ್ರಸ್ಟ್ ನಲ್ಲಿ ಇದ್ದ ಬಹುತೇಕ ಟ್ರಸ್ಟಿಗಳು ರಾಜೀನಾಮೆ ಕೊಟ್ಟಿದ್ದು, ಟ್ರಸ್ಟ್ ಅದರ ಅಸ್ತಿತ್ವ ಕಳೆದುಕೊಂಡಿದೆಯಂತೆ.

ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಡದಿದ್ದರೆ ರಾಜ್ಯ ಸರ್ಕಾರವನ್ನೇ ವಜಾ ಮಾಡ್ತಾರೆ: ವೀರಪ್ಪ ಮೊಯ್ಲಿ

ಸಿದ್ದಲಿಂಗಚಾರಿ ಮಠ, ದೇವಸ್ಥಾನ, ಪಾರ್ಕಿಂಗ್ ಶುಲ್ಕದ ಆದಾಯವನ್ನು ತೋರಿಸಿಲ್ಲ. ಇದರಿಂದ ಅನುಮಾನಗೊಂಡಿರುವ ಅವರ ಜೊತೆಗಾರರೇ ಪ್ರತ್ಯೇಕ ಸಮಿತಿಯೊಂದನ್ನು ಮಾಡಿಕೊಂಡಿದ್ದು, ಸಿದ್ದಲಿಂಗಚಾರಿ ವಿರುದ್ದ ಸೆಡ್ಡು ಹೊಡೆದು, ಮಠ, ದೇವಸ್ಥಾನ ನಿರ್ವಹಣೆಗೆ ಮುಂದಾಗಿದ್ದಾರೆ. ಸಿದ್ದಲಿಂಗಚಾರಿ ವಿರುದ್ದ ಎ.ಬಿ.ಮಂಜುನಾಥಚಾರಿ ಬಣ ದೂರು ನೀಡಿ ಆರೋಪಗಳನ್ನು ಮಾಡಿದ್ದಾರೆ.

ಬಣಗಳ ಪ್ರತಿಷ್ಠೆಯಿಂದ ಮಠಕ್ಕೆ ಕೆಟ್ಟ ಹೆಸರು

ಅಸಲಿಗೆ ಪಾಪಾಘ್ನಿ ಮಠಕ್ಕೆ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಗಳಿವೆ. ಪ್ರತಿದಿನ ಸ್ಕಂದಗಿರಿಗೆ ಬರುವವರಿಂದ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಲಾಗುತ್ತಿದೆ. ದಿನದಿಂದ ದಿನಕ್ಕೆ ದೇವಸ್ಥಾನ ಹಾಗೂ ಮಠದ ಆದಾಯ ಹೆಚ್ಚಳವಾಗುತ್ತಿದೆ. ಇದರಿಂದ ವಿಶ್ವಕರ್ಮ ಸಮುದಾಯದ 2 ಬಣಗಳ ಮದ್ಯೆ ಮನಸ್ತಾಪ ಉಂಟಾಗಿದ್ದು, ಈಗ ಬೀದಿ ಜಗಳವಾಗುತ್ತಿದೆ. ಇವರ ಮೇಲೆ ಅವರು, ಅವರ ಮೇಲೆ ಇವರು ಆರೋಪ-ಪ್ರತ್ಯಾರೋಪ ಮಾಡಿರುವ ದೂರುಗಳು ಬಂದಿವೆ.

ರಾಜ್ಯದ ಮತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್